
ಯಲ್ಲಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಸಯ್ಯ ಹೀರೆಮಠ ಆಯ್ಕೆ
Team Udayavani, Oct 12, 2021, 7:14 PM IST

ಸವದತ್ತಿ: ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಸಭಾಭವನದಲ್ಲಿ ಮಂಗಳವಾರ ನೂತನವಾಗಿ ಆಯ್ಕೆಯಾದ ವ್ಯವಸ್ಥಾಪನಾ ಸಮಿತಿಯ ಮೊದಲ ಸಭೆ ಜರುಗಿತು. ಸಭೆಯಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹಾಗೂ ನೂತನ ಸದಸ್ಯರಿಂದ ಬಸಯ್ಯ ಈರಯ್ಯ ಹೀರೆಮಠ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಬಳಿಕ ಮಾತನಾಡಿದ ಮಾಮನಿ, ಸದಸ್ಯರ ನೇಮಕಾತಿ ವಿಷಯದಲ್ಲಿ ಧಾರ್ಮಿಕದತ್ತಿ ನಿಯಮಗಳ ಮೂಲಕ 9 ಜನ ಸದಸ್ಯರ ಆಯ್ಕೆ ಮಾಡಿ ಸರಕಾರ ಆದೇಶಿಸಿದೆ. ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯ ಸ್ಥಾನಕ್ಕೆ ಯಾವುದೇ ಪಕ್ಷದ ಪದಾಧಿಕಾರಿಗಳ ಆಯ್ಕೆಯಾಗಬಾರದೆಂದು ಕೆಲ ಸಮಯಪ್ರಜ್ಞೆ ಇಲ್ಲದ ವಿರೋಧಿಗಳು ಅರ್ಜಿ ಸಲ್ಲಿಸಿದ್ದು, ಸರಕಾರ ಈ ಕುರಿತು ಸ್ಪಷ್ಟನೆ ನೀಡಿದ ಬೆನ್ನಲ್ಲೇ ಈ ಸಮಿತಿಯ ಮೊದಲ ಸಭೆ ನಡೆಸಲಾಗಿದೆ.
ನೌಕಕರ ನೇಮಕಾತಿ ಕುರಿತು ಕೆಲ ಊಹಾಪೋಹಾಗಳಿವೆ. ಹೊಸ ನೇಮಕಾತಿಗೆ ಅವಕಾಶವಿಲ್ಲ. ಆದರೆ ಸದ್ಯದ ನೌಕಕರ ಮೇಲೆ ಭಕ್ತಾಧಿಗಳಿಗೆ ಸೌಕರ್ಯ ಮಾಡಿಕೊಡಲಾಗುವದು. ದೇವಸ್ಥಾನದ ಮೂರು ನಾಕಾಗಳಲ್ಲಿ ಸಿಬ್ಬಂದಿಗಳನ್ನು ಹೊರತು ಪಡಿಸಿ ಉಳಿದ ವ್ಯಕ್ತಿಗಳು ಹಣ ವಸೂಲಾತಿ ಮಾಡುತ್ತಿದ್ದಾರೆ. ನಾಕಾಗಳಲ್ಲಿ ಸಿಸಿ ಕ್ಯಾಮಾರ ಅಳವಡಿಸಿ ಬೇರೆ ವ್ಯಕ್ತಿಗಳಿಂದ ಹಣ ವಸೂಲು ಮಾಡದಂತೆ ತಡೆಯಿರಿ. ಇಲ್ಲವಾದರೆ ಇದಕ್ಕೆ ನಾಕಾ ಮೇಲ್ವಿಚಾರಕ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ನೇರ ಹೊಣೆಯಾಗುತ್ತೀರಿ.
ದೇವಸ್ಥಾನದ ನಿವೃತ್ತ ಸಿಬ್ಬಂದಿಗಳು ತಮ್ಮ ಸೇವಾವಧಿ ಮುಗಿದರೂ ಸಹ ನೌಕರಿಗೆ ಹಾಜರಾಗುತ್ತಿದ್ದಾರೆ. ಅಂತವರನ್ನು ಸೇವೆಯಿಂದ ಮುಕ್ತಗೊಳಿಸಿ. ನಿವೃತ್ತಿಯ ನಂತರವೂ ಕಾನೂನು ಹೋರಾಟದ ಮೂಲಕ ನೌಕರಿ ಮುಂದುವರೆಸುತ್ತಿರುವವರ ಕುರಿತು ನ್ಯಾಯಾಲಯದಲ್ಲಿ ಉತ್ತರಿಸಿ, ಅ.30ರ ಒಳಗೆ ಅಂತಹ ನೌಕಕರನ್ನು ಕೈಬಿಡಬೇಕೆಂದು ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿಗೆ ಆದೇಶಿಸಿದರು.
ನೂತನ ಅಧ್ಯಕ್ಷರ ಮೇಲೆ ಮಹತ್ತರವಾದ ಜವಾಬ್ದಾರಿಯಿದ್ದು, ಭಕ್ತಾಧಿಗಳಿಗೆ ಮೂಲಸೌಕರ್ಯ ಸೇರಿದಂತೆ ದೇವಸ್ಥಾನದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸೋಣ. ಅರ್ಚಕ ಪ್ರತಿನಿಧಿಯಾಗಿ ಕೊಳ್ಳಪ್ಪಗೌಡ ಗಂದಿಗವಾಡ ನೇತೃತ್ವದಲ್ಲಿ ಅರ್ಚಕ ಸಮುದಾಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವದು ಎಂದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹೀರೆಮಠ ಮಾತನಾಡಿ, ಸಮಿತಿ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಶಾಸಕ ಆನಂದ ಮಾಮನಿ ಹಾಗೂ ಸದಸ್ಯರಿಗೆ ಕೃತಜ್ಞನಾಗಿರುವೆ. ದೇವಸ್ಥಾನದ ಅಭಿವೃದ್ಧಿಗಾಗಿ ಶಾಸಕರ ಮುಂದಾಳತ್ವದಲ್ಲಿ ಶ್ರಮಿಸುವದಾಗಿ ತಿಳಿಸಿದರು.
ಈ ವೇಳೆ ಸದಸ್ಯ ವೈ. ಕಾಳಪ್ಪನವರ, ಲಕ್ಷ್ಮೀ ಸಿ. ಹೂಲಿ, ಈರಣ್ಣ ಚಂದರಗಿ, ರಮೇಶ ಗೋಮಾಡಿ, ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ, ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ನಾಗರತ್ನ ಚೋಳಿನ, ರಾಜೇಂದ್ರ ಬೆಳವಡಿ, ನೆಹರು ಬಡೆಪ್ಪನವರ, ಶರೀಫಸಾಬ ಬಾರಿಗಿಡದ ಹಾಗೂ ನೂತನ ಸದಸ್ಯರು ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.