ಇವಿಎಂ ಯಂತ್ರಗಳ ಮೇಲೂ ಅನುಮಾನ


Team Udayavani, Apr 14, 2019, 5:18 PM IST

14-April-33

ಬಳ್ಳಾರಿ: ಗಾಂಧಿಭವನದಲ್ಲಿ ಎಸ್‌ಯುಸಿಐನಿಂದ ಹಮ್ಮಿಕೊಂಡಿದ್ದ ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಜಲಿಯನ್‌ ವಾಲಾಭಾಗ್‌ ಘಟನೆ ನೂರು ವರ್ಷಗಳಾದ ಹಿನ್ನೆಲೆಯಲ್ಲಿ ಹತ್ಯಾಕಾಂಡ ಕಂಬಕ್ಕೆ ಅಭ್ಯರ್ಥಿ ಎ.ದೇವದಾಸ್‌ ಪುಷ್ಪ ನಮನ ಸಲ್ಲಿಸಿದರು.

ಬಳ್ಳಾರಿ: ದೇಶದಲ್ಲಿ ಐದು ವರ್ಷಕ್ಕೊಮ್ಮೆ ನಡೆಯುತ್ತಿರುವ ಚುನಾವಣೆಗಳು ನಾಟಕದಂತಾಗಿವೆ. ನ್ಯಾಯಬದ್ಧವಾಗಿ ನಡೆಯುತ್ತಿದ್ದ ಚುನಾವಣೆಗಳು ಮರೆಯಾದ ಹಿನ್ನೆಲೆಯಲ್ಲಿ ಇವಿಎಂಯಂತ್ರಗಳು ಬಂದ ನಂತರವೂ ಚುನಾವಣೆಗಳ ಬಗ್ಗೆ ಅನುಮಾನ ಪಡುವಂತಾಗಿದೆ ಎಂದು ಎಸ್‌ ಯುಸಿಐಸಿ ಪಕ್ಷದ ರಾಜ್ಯ ಕಾರ್ಯದರ್ಶಿ ಸದಸ್ಯ ಕೆ.ಸೋಮಶೇಖರ್‌ ಆರೋಪಿಸಿದರು.

ನಗರದ ಗಾಂಧಿಭವನದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶನಿವಾರ ಏರ್ಪಡಿಸಿದ್ದ ಸಾರ್ವಜನಿಕ ಬಹಿರಂಗ
ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆಗೆ ಮೊದಲನೆಯ ಹಂತದ ಚುನಾವಣೆಯಲ್ಲಿ ಆಂಧ್ರಪ್ರದೇಶ, ಉತ್ತರ ಪ್ರದೇಶದಲ್ಲಿ ಸಾವಿರಕ್ಕೂ ಅಧಿಕ ಇವಿಎಂ ಯಂತ್ರಗಳು ಕೈಕೊಟ್ಟಿವೆ.
ಯಾವುದೇ ಪಕ್ಷದ ಗುಂಡಿ ಒತ್ತಿದರೂ ಬಿಜೆಪಿಗೆ ಮತ ಬೀಳುವ ವಿದ್ಯಮಾನ ನಡೆದಿದೆ ಎಂಬ ವಿಷಯ ಜನರ ಮನಸ್ಸಿನಲ್ಲಿ ನೂರಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮತ್ತೂಂದೆಡೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಚುನಾವಣೆ
ಆಯೋಗಕ್ಕೆ ಕಿಮ್ಮತ್ತು ನೀಡದೆ ಹೋದಲ್ಲೆಲ್ಲ ರಾಜಕೀಯ ಭಾಷಣದಲ್ಲಿ ಸೇನೆಯನ್ನು ಬಳಸಿಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗ ಏನು ಮಾಡುತ್ತಿದೆ.? ಸೇನೆಯನ್ನು ರಾಜಕೀಯಕ್ಕೆ
ಬಳಸುವುದನ್ನು ವಿರೋಧಿಸಿ ಅನೇಕ ನಿವೃತ್ತ ಸೇನಾ ಅಧಿಕಾರಿಗಳು ರಾಷ್ಟ್ರಪತಿಗಳಿಗೆ ಪತ್ರ ಸಹ ಬರೆದಿದ್ದಾರೆ ಎಂದು ತಿಳಿಸಿದರು.

ನೀಡಿರುವ ಭರವಸೆಗಳ ಬಗ್ಗೆ ಚಕಾರವೆತ್ತದ ಪ್ರಧಾನಿ ನರೇಂದ್ರ ಮೋದಿಗೆ ತನ್ನ ಸಾಧನೆಗಳ ಬಲದ ಮೇಲೆ ಮತ ಕೇಳುವ ನೈತಿಕತೆಯಿಲ್ಲ. ಕಾಂಗ್ರೆಸ್‌ ಜನವಿರೋಧಿ ನೀತಿಗಳನ್ನೇ ಬಿಜೆಪಿ
ಮುಂದುವರಿಸುತ್ತಿದೆ. ಈ ಎರಡು ಪಕ್ಷಗಳು ಜನರಿಗೆ ದ್ರೋಹವೆಸಗಿವೆ. ಹಾಗಾಗಿ ಈ ಎರಡು ಪಕ್ಷಗಳನ್ನು ತಿರಸ್ಕರಿಸಿ, ಜನರ ಧ್ವನಿಯನ್ನು ಎತ್ತಿಹಿಡಿಯುತ್ತಿರುವ ಹೋರಾಟ ಬೆಳೆಸುತ್ತಿರುವ ಎಸ್‌ಯುಸಿಐಸಿ ಪಕ್ಷಕ್ಕೆ ಮತ ಹಾಕುವ ಮೂಲಕ ಎ.ದೇವದಾಸ್‌ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಎಸ್‌ಯುಸಿಐಸಿ ಅಭ್ಯರ್ಥಿ ಎ.ದೇವದಾಸ್‌ ಮಾತನಾಡಿ, ದುಡಿಯುವ ಜನರಾದ ನಾವು ನಮ್ಮದೇ ಪಕ್ಷವನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ಬಂಡವಾಳಶಾಹಿಗಳು ತಮ್ಮ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಪಕ್ಷಗಳನ್ನು ಹಣ, ಮಾಧ್ಯಮ ಬಲದ ಮೂಲಕ ಮುನ್ನಲೆಗೆ ತಂದು, ಜನರಲ್ಲಿ ಈ ಪಕ್ಷಗಳ ಬಗ್ಗೆ ಇಲ್ಲದ ಭ್ರಮೆಯನ್ನು ಸೃಷ್ಟಿ ಮಾಡುತ್ತಿವೆ. ಈ ಸತ್ಯವನ್ನು ನಾವು ಅರಿಯಬೇಕು. ಈ ವ್ಯವಸ್ಥೆಯಲ್ಲಿ ಯಾರೇ ಅಧಿಕಾರಕ್ಕೇರಿದರೂ, ಬಂಡವಾಳಶಾಹಿಗಳ ಉದ್ಧಾರವೇ ಖಚಿತ. ಹಾಗಾಗಿ ಕಾರ್ಮಿಕ
ವರ್ಗ ಹೋರಾಟ ಕಟ್ಟುತ್ತಾ ಈ ವ್ಯವಸ್ಥೆಯನ್ನೇ ಕಿತ್ತೂಗೆಯಬೇಕು. ಆ ಮೂಲಕ ಜನರ ಎಲ್ಲಾ ಸಮಸ್ಯೆಗಳಿಗೆ ಕೊನೆ ಹಾಡಬೇಕು. ಆದ್ದರಿಂದ ಎಸ್‌ಯುಸಿಐಸಿ ಪಕ್ಷದ ಟ್ರ್ಯಾಕ್ಟರ್‌ ಗುರುತಿಗೆ ಮತ
ಹಾಕುವಂತೆ’ ಮನವಿ ಮಾಡಿದರು.

ಇದಕ್ಕೂ ಮುನ್ನ 1919ರ ಏ.13 ರಂದು ನಡೆದಿದ್ದ ಜಲಿಯನ್‌ ವಾಲಾಬಾಗ್‌ ಘಟನೆಯು ಶನಿವಾರಕ್ಕೆ 100 ವರ್ಷ ಪೂರೈಸಿದ
ಹಿನ್ನೆಲೆಯಲ್ಲಿ ಹತ್ಯಾಕಾಂಡದ ಹುತಾತ್ಮರಿಗೆ ನಮನ ಸಲ್ಲಿಸಲಾಯಿತು. ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣಾ ಉಪಾಧ್ಯ, ಜಿಲ್ಲಾ ಸಮಿತಿ ಸದಸ್ಯೆ ಎಂ.ಎನ್‌.ಮಂಜುಳಾ ಮಾತನಾಡಿದರು. ಸದಸ್ಯೆ ಡಿ.ನಾಗಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ಶಾಂತಾ, ಡಾ| ಪ್ರಮೋದ್‌, ಗೋವಿಂದ್‌, ಸುರೇಶ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.