ಹೊಸ ಸರಕಾರದಲ್ಲಿ ಯಾರಿಗೆ ಸಿಗಲಿದೆ ಮಂತ್ರಿಗಿರಿ

ಸಚಿವ ಸ್ಥಾನದ ರೇಸ್‌ನಲ್ಲಿ ಗುರಿ ತಲುಪುವವರ್ಯಾರು •2008ರಲ್ಲಿ ಸಿಕ್ಕಿತ್ತು 3 ಸಚಿವ ಸ್ಥಾನ •ಈ ಬಾರಿ ಯಾರಿಗೆ ಎಂಬ ಚರ್ಚೆ ಜೋರು

Team Udayavani, Jul 25, 2019, 11:17 AM IST

Udayavani Kannada Newspaper

ವೆಂಕೋಬಿ ಸಂಗನಕಲ್ಲು
ಬಳ್ಳಾರಿ:
ಮೈತ್ರಿ ಸರಕಾರ ಪತನಗೊಂಡು ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾಗುತ್ತಿದ್ದಂತೆ ಜಿಲ್ಲೆಯ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಲೆಕ್ಕಾಚಾರ ಶುರುವಾಗಿದೆ.

ಬಿಜೆಪಿ ಆಡಳಿತಕ್ಕೆ ಬರಲು ಪ್ರಮುಖ ಪಾತ್ರ ವಹಿಸಿರುವ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಈ ಬಾರಿಯೂ ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಈ ಹಿಂದಿನಂತೆ ಮೂರು ಸಚಿವ ಸ್ಥಾನಗಳು ಲಭಿಸಲಿವೆಯೇ? ಯಾರ್ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ಕುತೂಹಲ ಮೂಡಿದೆ.

ರಾಜ್ಯ ವಿಧಾನಸಭೆಗೆ 2008ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 110 ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಬಿಜೆಪಿಗೆ ಬಹುಮತ ಸಾಬೀತುಪಡಿಸಲು ಕೇವಲ ಮೂರು ಶಾಸಕರ ಕೊರತೆಯಿತ್ತು. ಆಗ 6 ಪಕ್ಷೇತರ ಶಾಸಕರ ಬೆಂಬಲವನ್ನು ಬಿಜೆಪಿಗೆ ಕೊಡಿಸುವಲ್ಲಿ ಗಣಿಧಣಿಗಳಾದ ರೆಡ್ಡಿ ಸಹೋದರರು ಯಶಸ್ವಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಕರುಣಾಕರ ರೆಡ್ಡಿ, ವಿಧಾನಪರಿಷತ್‌ ಸದಸ್ಯರಾಗಿದ್ದ ಜಿ. ಜನಾರ್ದನರೆಡ್ಡಿ, ಇವರ ಆಪ್ತ ಬಿ. ಶ್ರೀರಾಮುಲು ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಅಲ್ಲದೆ ಬಳ್ಳಾರಿ ನಗರ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಹಾಲಿ ಶಾಸಕ ಜಿ.ಸೋಮಶೇಖರರೆಡ್ಡಿ ಅವರಿಗೆ ಕೆಎಂಎಫ್‌ ರಾಜ್ಯ ಮಹಾಮಂಡಳಿಯ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಇದರಿಂದ ರಾಜ್ಯದಲ್ಲೇ ರೆಡ್ಡಿ ಸಹೋದರರು ಅತ್ಯಂತ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಬದಲಾದ ರಾಜಕೀಯ ವಿದ್ಯಮಾನಗಳಿಂದಾಗಿ ರೆಡ್ಡಿ ಸಹೋದರರ ಹವಾ ಒಂದಷ್ಟು ಕಡಿಮೆಯಾಗಿದೆ. ಹೀಗಾಗಿ ಮೈತ್ರಿ ಸರ್ಕಾರ ಪತನದಿಂದಾಗಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತಿರುವ ಬಿಜೆಪಿ ಸರ್ಕಾರದಲ್ಲಿ ಈ ಹಿಂದಿನಂತೆ ಈ ಬಾರಿಯೂ ನಿರೀಕ್ಷಿತ ಸಚಿವ ಸ್ಥಾನಗಳು ಜಿಲ್ಲೆಗೆ ಲಭಿಸಲಿವೆಯೇ ಎಂಬುದು ಯಕ್ಷಪ್ರಶ್ನೆಯಾಗಿದೆ.

ಗೆದ್ದವರೆಲ್ಲರೂ ಸಚಿವ ಸ್ಥಾನದ ಆಕಾಂಕ್ಷಿಗಳು: ಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿ ಸಿರುಗುಪ್ಪ, ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದೆ. ಜಿಲ್ಲೆಯ ಪ್ರಭಾವಿ ಮುಖಂಡ ಬಿ. ಶ್ರೀರಾಮುಲು ಅವರು ಪಕ್ಕದ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೂ ಜಿಲ್ಲೆಯ ಮೇಲೆ ಇವರ ಹಿಡಿತ ಸಡಿಲಗೊಂಡಿಲ್ಲ. ಹೀಗಾಗಿ ಚಿತ್ರದುರ್ಗ ಜಿಲ್ಲೆಯ ಕೋಟಾ ಅಥವಾ ಜಾತಿ ಲೆಕ್ಕಾಚಾರದಲ್ಲಾದರೂ ಸಚಿವ ಸ್ಥಾನ ಲಭಿಸೋದು ಪಕ್ಕಾ ಎನ್ನಲಾಗುತ್ತಿದೆ.

ಇನ್ನು ಜಿಲ್ಲೆಯ ಸಿರುಗುಪ್ಪ ಕ್ಷೇತ್ರದಿಂದ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಎಂ.ಎಸ್‌.ಸೋಮಲಿಂಗಪ್ಪ, ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದ ಕೂಡ್ಲಿಗಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರೂ ಜಾತಿ ಲೆಕ್ಕಾಚಾರದಲ್ಲಿ ದೊರೆಯುವುದು ಅನುಮಾನ ಎನ್ನಲಾಗುತ್ತಿದೆ. ವಾಲ್ಮೀಕಿ ಸಮುದಾಯದಲ್ಲೇ ಪ್ರಭಾವಿ ಮುಖಂಡರಾದ ರಮೇಶ್‌ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ರಾಜುಗೌಡ ಅವರು ಸಚಿವ ಸ್ಥಾನದ ರೇಸ್‌ನಲ್ಲಿರುವುದರಿಂದ ಸೋಮಲಿಂಗಪ್ಪ ಹಾಗೂ ಎನ್‌.ವೈ. ಗೋಪಾಲಕೃಷ್ಣ ಅವರ ಆಸೆ ಈಡೇರುವುದು ಕಷ್ಟ ಎಂಬ ಚರ್ಚೆಗಳು ನಡೆಯುತ್ತಿವೆ.

ಕರುಣಾಕಾರ ರೆಡ್ಡಿಗೆ ಸ್ಥಾನ?: ಈ ಮೊದಲು ದಾವಣಗೆರೆ ಜಿಲ್ಲೆಯಲ್ಲಿದ್ದ ಹರಪನಹಳ್ಳಿ ಕ್ಷೇತ್ರ ಇತ್ತೀಚೆಗಷ್ಟೇ ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಿದೆ. ಅಲ್ಲಿನ ಶಾಸಕ ಜಿ. ಕರುಣಾಕರೆಡ್ಡಿ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಈ ಮೊದಲು ಬಿಜೆಪಿಯಲ್ಲಿ ರೆಡ್ಡಿ ಸಹೋದರರು ತಮ್ಮದೇ ಆದ ಹಿಡಿತ ಸಾಧಿಸಿದ್ದರು. ಪರಿಣಾಮ ಆಗ ಮೊದಲಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಕರುಣಾಕರರೆಡ್ಡಿಯವರು ಕಂದಾಯ ಸಚಿವರಾಗಿದ್ದರು. ಇದೀಗ ಬಳ್ಳಾರಿ ಜಿಲ್ಲೆ ವ್ಯಾಪ್ತಿಗೆ ಬರುವುದರಿಂದ ಜಿಲ್ಲೆಯಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಮೇಲಾಗಿ ಪಕ್ಷದಲ್ಲೂ ರೆಡ್ಡಿ ಸಹೋದರರ ಪ್ರಭಾವವೂ ಒಂದಷ್ಟು ಕುಸಿದಿದೆ. 2008ರಲ್ಲಿ ಶಾಸಕರಾಗಿ, ಕೆಎಂಎಫ್‌ ರಾಜ್ಯಾಧ್ಯಕ್ಷರಾಗಿದ್ದ ಶಾಸಕ ಜಿ. ಸೋಮಶೇಖರರೆಡ್ಡಿ ಅವರು 2013ರಲ್ಲಿ ಸೋಲಿನ ಭೀತಿಯಿಂದಾಗಿ ಚುನಾವಣೆಯಿಂದಲೇ ದೂರ ಉಳಿದಿದ್ದರು. ಹೀಗಾಗಿ ಇವರು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಸಚಿವ ಸ್ಥಾನಕ್ಕಾಗಿಯೇ ಬಿಜೆಪಿಗೆ ಬಂದ ಆನಂದ್‌ ಸಿಂಗ್‌
ಸತತ ಮೂರನೇ ಬಾರಿಗೆ ಜಯಗಳಿಸಿರುವ ವಿಜಯನಗರ ಕ್ಷೇತ್ರದ ಶಾಸಕ ಬಿ.ಎಸ್‌. ಆನಂದ್‌ಸಿಂಗ್‌ ಅವರು ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತೊರೆದಿದ್ದು, ಮತ್ತೆ ಮಾತೃ ಪಕ್ಷ ಬಿಜೆಪಿಗೆ ಸೇರಲಿದ್ದಾರೆ ಎನ್ನಲಾಗುತ್ತಿದೆ. ಆನಂದ್‌ಸಿಂಗ್‌ ಅವರಿಗೆ ಸಚಿವ ಸ್ಥಾನ ನೀಡಿದರೆ, ರೆಡ್ಡಿ ಸಹೋದರರಿಗೆ ಹೊಸ ಸಂಪುಟದಲ್ಲಿ ಸ್ಥಾನ ದೊರೆಯುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ.

ಟಾಪ್ ನ್ಯೂಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.