ಧಾರಾಕಾರ ಮಳೆಗೆ ಜೀವನ ಅಸ್ತವ್ಯಸ್ತ
Team Udayavani, Sep 20, 2019, 4:50 PM IST
ಸಿರುಗುಪ್ಪ: ಕಳೆದೆರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ರಾರಾವಿ ಗ್ರಾಮದ ಹತ್ತಿರ ಹರಿಯುವ ವೇದಾವತಿ ಹಗರಿ ತುಂಬಿ ಹರಿಯುತ್ತಿದೆ.
ಬಳ್ಳಾರಿ: ಕಳೆದ ಎರಡ್ಮೂರು ದಿನಗಳಿಂದ ಗಣಿನಗರಿಯಲ್ಲಿ ಆಗೊಮ್ಮೆ ಈಗೊಮ್ಮೆ ಜಿಟಿಜಿಟಿಯಾಗಿ ಸುರಿಯುತ್ತಿದ್ದ ಮಳೆ, ಬುಧವಾರ ಮಧ್ಯರಾತ್ರಿ ಮತ್ತು ಗುರುವಾರ ಧಾರಾಕಾರವಾಗಿ ಸುರಿದಿದ್ದು, ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಸಾಂಖ್ಯೀಕ (ಅಂಕಿ- ಸಂಖ್ಯೆಗಳ) ಇಲಾಖೆ ಕಚೇರಿಗೆ, ತಹಸೀಲ್ದಾರ್ ಕಚೇರಿ, ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ನೀರು ನುಗ್ಗಿದ್ದು, ರೈಲ್ವೆ ಕೆಳಸೇತುವೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ಬಳ್ಳಾರಿಯ ರಾಯಲ್ ಕಾಲೋನಿಯಲ್ಲಂತೂ ಗುಡಿಸಲು ಮನೆಗೂ ಈ ಮಳೆ ನೀರು ನುಗ್ಗಿವೆ. ಗುಡಿಸಲು ನಿವಾಸಿಗಳು ತಗ್ಗು ಪ್ರದೇಶದಲ್ಲಿ ವಾಸವಿದ್ದರಿಂದ ಕೂರಲು, ನಿಲ್ಲಲು ಜಾಗ ಕೂಡ ಇಲ್ಲದಂತಾಗಿದೆ. ಮನೆಗಳ ಮುಂದೆಯೂ ಕೂಡ ಮಳೆಯ ನೀರು ಜಲಾವೃತಗೊಂಡಿದೆ. ಅದರೊಳಗೆ ಒಳಚರಂಡಿ ನೀರು ಮಿಶ್ರಿತಗೊಂಡ ಪರಿಣಾಮ ಕಾಲೋನಿಯೆಲ್ಲಾ ದುರ್ವಾಸನೆ ಹಬ್ಬಿದೆ. ಪ್ರತಿಬಾರಿ ಮಳೆ ಸುರಿದಾಗಲೆಲ್ಲಾ ಈ ಕಾಲೋನಿ ನಿವಾಸಿಗಳು ಈ ಸಮಸ್ಯೆಯನ್ನು ಎದುರಿಸುತ್ತಿರೋದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ.
ಸೇತುವೆಗಳು ಜಲಾವೃತ, ಸಂಚಾರ ವ್ಯವಸ್ಥೆ ಬಂದ್: ನಗರದ ಕನಕದುರ್ಗಮ್ಮ ದೇಗುಲ ರಸ್ತೆಯ ಕೆಳಸೇತುವೆ, ಸತ್ಯನಾರಾಯಣ ಪೇಟೆ ಕೆಳಸೇತುವೆ ಹಾಗೂ ಡಾ| ಜೋಳದರಾಶಿ ದೊಡ್ಡನಗೌಡ ರಂಗ ಮಂದಿರ ರಸ್ತೆಯ ಕೆಳಸೇತುವೆಯಲ್ಲಿ ಮಳೆ ನೀರು ಜಲಾವೃತಗೊಂಡಿದೆ. ಎಸ್ಪಿ ವೃತ್ತದಿಂದ ಕನಕದುರ್ಗಮ್ಮ ದೇಗುಲ ರಸ್ತೆಯ ಮಾರ್ಗ, ಗಾಂಧಿನಗರದಿಂದ ಸತ್ಯನಾರಾಯಣ ಪೇಟೆ ಕೆಳಸೇತುವೆ ರಸ್ತೆ ಮಾರ್ಗ ಮತ್ತು ಖಾಸಗಿ ಬಸ್ ನಿಲ್ದಾಣದ ರಸ್ತೆಯ ಮಾರ್ಗ ಸಂಚಾರ ಸ್ಥಗಿತಗೊಂಡಿತ್ತು. ನಗರದ ಬಹುತೇಕ ಖಾಸಗಿ ಸಂಸ್ಥೆಗಳ ಕಚೇರಿಗಳು ಹಾಗೂ ಅಂಗಡಿಮುಂಗಟ್ಟುಗಳು ಈ ಮಳೆ ಸುರಿದ ಕಾರಣ ಸ್ವಯಂಪ್ರೇರಿತವಾಗಿ ಬಂದ್ ಆಗಿದ್ದವು.
ಮಳೆ ಎಲ್ಲೆಲ್ಲಿ-ಎಷ್ಟೆಷ್ಟು: ಬಳ್ಳಾರಿಯಲ್ಲಿ ಶೇ. 60ಮಿಮೀ, ಹಡಗಲಿಯಲ್ಲಿ ಶೇ.30.6ಮಿಮೀ, ಹಗರಿಬೊಮ್ಮನಹಳ್ಳಿಯಲ್ಲಿ ಶೇ. 59.4ಮಿಮೀ, ಹೊಸಪೇಟೆಯಲ್ಲಿ 34.0 ಮಿಮೀ, ಕೂಡ್ಲಿಗಿಯಲ್ಲಿ ಶೇ.38.9 ಮಿಮೀ, ಸಂಡೂರಿನಲ್ಲಿ ಶೇ. 92.8 ಮಿಮೀ, ಸಿರುಗುಪ್ಪಾದಲ್ಲಿ ಶೇ. 62.8 ಮಿಮೀ, ಹರಪನಹಳ್ಳಿಯಲ್ಲಿ ಶೇ. 21.6 ಮಿಮೀನಷ್ಟು ಮಳೆಯು ಸುರಿದಿದೆ.
ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕಚೇರಿ ಹಾಗೂ ಖಾಸಗಿ ಕಂಪನಿಗಳ ನೌಕರರು ಮನೆಯಿಂದ ಹೊರಗಡೆ ಹೋಗಲು ಅತೀವ ತೊಂದರೆ ಅನುಭವಿಸಿದರು. ಇನ್ನು ಮಳೆ ಆರಂಭಕ್ಕೂ ಮುನ್ನವೇ ಮನೆಯಿಂದ ಹೊರಗಡೆ ಹೋದವರು ಮಳೆಯಿಂದ ತಪ್ಪಿಸಿಕೊಳ್ಳಲು ವಿವಿಧೆಡೆ ಆಶ್ರಯ ಪಡೆದುಕೊಂಡರು.
ಇಲ್ಲಿನ ಕನಕದುರ್ಗಮ್ಮ ದೇಗುಲ ರಸ್ತೆ ಕೆಳಸೇತುವೆ ಹಾಗೂ ಸತ್ಯನಾರಾಯಣ ಪೇಟೆ ರಸ್ತೆಯ ಕೆಳಸೇತುವೆ ಮತ್ತು ಜೋಳದ ರಾಶಿ ದೊಡ್ಡನಗೌಡ ರಂಗಮಂದಿರದ ರಸ್ತೆಯ ಕೆಳಸೇತುವೆಯಲ್ಲಿ ಮಳೆ ನೀರು ವಿಪರೀತ ಸಂಗ್ರಹಗೊಂಡಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ಅಡೆತಡೆ ಉಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.