77,62.857 ರೂ. ಉಳಿತಾಯ ಬಜೆಟ್‌ ಮಂಡನೆ


Team Udayavani, Mar 21, 2022, 12:30 PM IST

tax

ಸಿರುಗುಪ್ಪ: ನಗರದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದೊಂದಿಗೆ ತೆರಿಗೆ ಸಂಗ್ರಹಣೆಗೂ ಹೆಚ್ಚಿನ ಆದ್ಯತೆ ನೀಡಬೇಕೆಂದು ಶಾಸಕ ಎಂ.ಎಸ್‌. ಸೋಮಲಿಂಗಪ್ಪ ತಿಳಿಸಿದರು.

ನಗರಸಭೆ ಸಭಾಂಗಣದಲ್ಲಿ ನಡೆದ ಬಜೆಟ್‌ ಮಂಡನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ನಗರದ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳಲ್ಲಿ ನಗರಸಭೆಗೆ ಅನುದಾನ ನೀಡುತ್ತಿದೆ. ತೆರಿಗೆ ಸಂಗ್ರಹ ಹಣದಲ್ಲಿ ನಗರಸಭೆ ಗುತ್ತಿಗೆ ನೌಕರರಿಗೆ ಹಾಗೂ ಇತರೆ ವೆಚ್ಚಗಳಿಗೆ ಸಾಕಾಗುವಷ್ಟು ತೆರಿಗೆ ಸಂಗ್ರಹಣೆ ಮಾಡಲು ಸದಸ್ಯರು ಮತ್ತು ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದರು.

70 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ನಗರದಲ್ಲಿ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕರಿಗೆ ಮೂಲ ಸೌಲಭ್ಯಗಳನ್ನು ಒದಗಿಸಿ ನಂತರ ತೆರಿಗೆ ಹೆಚ್ಚಿಸಿ ನಗರದ ಅಭಿವೃದ್ಧಿಗೆ ಮುಂದಾಗಬೇಕು. ನಗರದಲ್ಲಿ ನೂತನ ಲೇಔಟ್‌ ಗಳ ಅಭಿವೃದ್ಧಿಗೆ ಅಧಿಕಾರಿಗಳು ಮತ್ತು ಸದಸ್ಯರು ಹೆಚ್ಚಿನ ವಿಳಂಬ ನೀತಿ ಅನುಸರಿಸದೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ಹೆಚ್ಚಿನ ತೆರಿಗೆ ಸಂಗ್ರಹಣೆ ಮಾಡಲು ಸಾಧ್ಯವಾಗಲಿದೆ ಎಂದರು.

ಈ ಕಚೇರಿಯಲ್ಲಿ ವಿನಾಕಾರಣ ವಿಳಂಬ ನೀತಿ ಅನುಸರಿಸುತ್ತಿದ್ದು, ಕಟ್ಟಡ ಪರವಾನಿಗೆ, ಫಾರಂ3 ಸೇರಿದಂತೆ ಇತರೆ ಕಾರ್ಯಗಳನ್ನು ತ್ವರಿತವಾಗಿ ಮಾಡಿದಾಗ ಮಾತ್ರ ನಗರಸಭೆಗೆ ಹೆಚ್ಚಿನ ಆದಾಯ ಬರಲು ಸಾಧ್ಯವಾಗುತ್ತದೆ ಎಂದರು.

ಪೌರಾಯುಕ್ತ ರಾಘವೇಂದ್ರ ಗುರು ಮಾತನಾಡಿ, ಕಚೇರಿಯಲ್ಲಿ ಯಾವುದೇ ರೀತಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿಲ್ಲ. ಆದರೆ ಅಗತ್ಯ ದಾಖಲೆಗಳನ್ನು ಒದಗಿಸದೆ ಇರುವುದರಿಂದ ವಿಳಂಬವಾಗಿರಬಹುದು, ಕಾನೂನಾತ್ಮಕವಾಗಿ ಸರಿ ಇರುವ ಯಾವುದೇ ಅರ್ಜಿಗಳನ್ನು ವಿಲೆವಾರಿ ಮಾಡಲು ವಿಳಂಬ ಮಾಡಿಲ್ಲವೆಂದು ಹೇಳಿದರು.

ಇದಕ್ಕೂ ಮೊದಲು ಪ್ರಸಕ್ತ ವರ್ಷದ ಆದಾಯ 522247755 ರೂ. ಇದ್ದರೆ, ವೆಚ್ಚ 266098753 ರೂ. ಗಳಿದ್ದು, 77,62,857 ರೂ.ಗಳ ಉಳಿತಾಯ ಬಜೆಟ್‌ ಮಂಡನೆ ಮಾಡಲಾಗಿದೆ ಎಂದು ಪೌರಾಯುಕ್ತರು ವಿವರ ನೀಡಿದರು. ಅಧ್ಯಕ್ಷೆ ಕೆ.ಸುಶೀಲಮ್ಮ ಮತ್ತು ಸದಸ್ಯರು, ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.