![1-eqwwewq](https://www.udayavani.com/wp-content/uploads/2024/06/1-eqwwewq-415x279.jpg)
Kampliಯ ಐತಿಹಾಸಿಕ ಸೋಮಪ್ಪನ ಕೆರೆಯಲ್ಲಿ ಬಲೆಗೆ ಬಿದ್ದ ಮೊಸಳೆ
Team Udayavani, Jun 28, 2024, 10:09 AM IST
![6-kampli](https://www.udayavani.com/wp-content/uploads/2024/06/6-kampli-620x372.jpg)
ಕಂಪ್ಲಿ: ಪಟ್ಟಣದ ಐತಿಹಾಸಿಕ ಸೋಮಪ್ಪನ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು.
ಈ ಬಗ್ಗೆ ಪುರಸಭೆಯವರು ಕೆರೆಯಲ್ಲಿ ಮೊಸಳೆಯೊಂದಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಬ್ಯಾನರ್ ಅಳವಡಿಸಿದ್ದರು. ಜೊತೆಗೆ ಅರಣ್ಯ ಇಲಾಖೆಗೆ ಮೊಸಳೆ ಸೆರೆಗೆ ಮನವಿ ಮಾಡಿದ್ದರು.
ಈ ಹಿನ್ನೆಲೆ ಅರಣ್ಯ ಇಲಾಖೆ ಮೊಸಳೆ ಸೆರೆಗೆ ಬಲೆ ಮತ್ತು ದಂಡೆಯಲ್ಲಿ ಸತ್ತ ಕೋಳಿಗಳನ್ನು ಹಾಕಿ ಪ್ರಯತ್ನಗಳನ್ನು ಮಾಡಿದ್ದರು. ಆದರೆ ಎರಡು ದಿನಗಳಾದರು ಮೊಸಳೆ ಸೆರೆಯಾಗಿರಲಿಲ್ಲ.
ಇಂದು ಕಂಪ್ಲಿ ಕೋಟೆಯ ಮೀನುಗಾರ ಸಹಕಾರ ಸಂಘದವರು ಕೆರೆಯಲ್ಲಿನ ಮೀನುಗಳನ್ನು ಹಿಡಿಯಲು 15ಕ್ಕೂ ಅಧಿಕ ಹರಗೋಲು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಬಲೆಗಳನ್ನು ಬಳಸಿದ್ದರಿಂದ ಮೊಸಳೆ ಬಲೆಗೆ ಬಿದಿದ್ದು, ನಂತರ ಮೊಸಳೆಯನ್ನು ಹಗ್ಗದಿಂದ ಬಂಧಿಸಿ ಹೊಸಪೇಟೆ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಬಿ.ರಾಘವೇಂದ್ರ ಮತ್ತು ಬಿ.ನಾಗರಾಜ ಅವರಿಗೆ ಒಪ್ಪಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿಗಳು ಮೊಸಳೆಯನ್ನು ಕಮಲಾಪುರ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕ್ಗೆ ಸ್ಥಳಾಂತಿಸಿದರು. ಮೊಸಳೆಯನ್ನು ನೋಡಲು ನೂರಾರು ಸಾರ್ವಜನಿಕರು ಆಗಮಿಸಿದ್ದು, ಅವರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.
ಟಾಪ್ ನ್ಯೂಸ್
![1-eqwwewq](https://www.udayavani.com/wp-content/uploads/2024/06/1-eqwwewq-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![MLA-Shivaganga](https://www.udayavani.com/wp-content/uploads/2024/06/MLA-Shivaganga-150x90.jpg)
D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ
![Siraguppa: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ](https://www.udayavani.com/wp-content/uploads/2024/06/rice-150x94.jpg)
Siraguppa: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ
![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-150x94.jpg)
Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ
![Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು](https://www.udayavani.com/wp-content/uploads/2024/06/sr-150x83.jpg)
Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು
![Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ](https://www.udayavani.com/wp-content/uploads/2024/06/mosale-150x88.jpg)
Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.