Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

72ಲಕ್ಷರೂ ನಗದು, 1 ಬೈಕ್, 2 ಮೊಬೈಲ್ ವಶಕ್ಕೆ

Team Udayavani, May 31, 2024, 12:36 AM IST

1-qewqweeeqw

ಬಳ್ಳಾರಿ: ನಗರದ ಪಾಲಿಕೆ ಕಚೇರಿ ಆವರಣದಲ್ಲಿನ ಬಳ್ಳಾರಿ ಒನ್ ಕೇಂದ್ರದಲ್ಲಿ ಕಳೆದ ತಿಂಗಳು ನಡೆದಿದ್ದ 75 ಲಕ್ಷ ರೂ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಗಾಂಧಿನಗರ ಠಾಣೆಯ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.

ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ನಿವಾಸಿ ಎಸ್.ಟಿ.ಎಂ.ಕೆ.ಚಂದ್ರಶೇಖರಯ್ಯ ಬಂಧಿತ ಆರೋಪಿಯಾಗಿದ್ದು, ಮತ್ತೊಬ್ಬ ಆರೋಪಿ ಕೆ.ಮಹಾಲಿಂಗಯ್ಯ ನಾಪತ್ತೆಯಾಗಿದ್ದಾನೆ. ನಗರದ ಪಾಲಿಕೆ ಕಚೇರಿ ಆವರಣದಲ್ಲಿದ್ದ ಬಳ್ಳಾರಿ ಒನ್ ಕೇಂದ್ರದಲ್ಲಿ ಕಳೆದ ಏಪ್ರಿಲ್ 28 ರಂದು ರಾತ್ರಿ ಕೇಂದ್ರದಲ್ಲಿದ್ದ 75 ಲಕ್ಷ ರೂ.ಗಳು ಕಳುವಾಗಿತ್ತು. ಆದರೆ, ಕೇಂದ್ರದ ಯಾವುದೇ ಬೀಗ ಮುರಿಯದೇ ಹಣ ಕಳುವಾಗಿದ್ದು, ಕೇಂದ್ರದ ಬೀಗ ಇಟ್ಟುಕೊಳ್ಳುತ್ತಿದ್ದ ಸಿಬ್ಬಂದಿ ಅಂದ್ರಾಳ್ ಗ್ರಾಮದ ಕೆ.ಮಹಾಲಿಂಗ ಎನ್ನುವವನು ಹಣವನ್ನು ಕಳ್ಳತನ ಮಾಡಿ ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ಕರ್ನಾಟಕ ಕೇಂದ್ರದ ರಾಜ್ಯ ಯೋಜನಾ ವ್ಯವಸ್ಥಾಪಕ ಉದಯಕುಮಾರ್ ಅರ್ಕಸಾಲಿ ಎನ್ನುವವರು ಇಲ್ಲಿನ ಗಾಂಧಿನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಭೇದಿಸಲು ಎಸ್ ಪಿ ರಂಜಿತ್ ಕುಮಾರ್ ಬಂಡಾರು ಅವರು ಗಾಂಧಿನಗರ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡಾದ, ಪಿಎಸ್ ಐ ಸೌಮ್ಯ, ನಾರಾಯಣ ಸ್ವಾಮಿ, ಅಪರಾಧ ವಿಭಾಗದ ಸಿಬ್ಬಂದಿಗಳ ತಂಡವನ್ನು ರಚಿಸಿದ್ದು, ತನಿಖೆ ಕೈಗೊಂಡ ತಂಡವು ಹಲವು ವೈಜ್ಞಾನಿಕ ವಿಧಾನಗಳನ್ನು ಬಳಸಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ನಿವಾಸಿಯಾದ ಆರೋಪಿ ಎಸ್.ಟಿ.ಎಂ.ಕೆ.ಚಂದ್ರಶೇಖರಯ್ಯನನ್ನು ಬಂಧಿಸಿದೆ. ಬಂಧಿತನಿಂದ 72 ಲಕ್ಷ ರೂ. ನಗದು ಹಣ, ಕೃತ್ಯಕ್ಕೆ ಬಳಸಿದ್ದ ಒಂದು ಎಸ್ ಪಿ ಮೋಟರ್ ಬೈಕ್, ಕಳ್ಳತನ ಮಾಡಿದ್ದ ಹಣದಲ್ಲಿ ಖರೀದಿಸಿದ್ದ ಎರಡು ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕಚೇರಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಆರೋಪಿ ಅಂದ್ರಾಳ್ ಗ್ರಾಮದ ಕೆ.ಮಹಾಲಿಂಗನೇ ಚಂದ್ರಶೇಖರಯ್ಯನಿಗೆ ಬೀಗ ನೀಡಿದ್ದು, ಈ ಬೀಗವನ್ನು ಬಳಸಿ ಕಳ್ಳತನ ಮಾಡಿ, ಪುನಃ ಬೀಗವನ್ನು ಮನೆಯ ಬಾಗಿಲಲ್ಲಿ ಬಿಸಾಕಿ ಹೋಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

ಆರೋಪಿ ಚಂದ್ರಶೇಖರಯ್ಯನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಮತ್ತೊಬ್ಬ ಆರೋಪಿ ಕೆ.ಮಹಾಲಿಂಗ ಪರಾರಿಯಾಗಿದ್ದಾನೆ. ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ಭೇದಿಸಿದ ಗಾಂಧಿನಗರ ಪೊಲೀಸರ ತಂಡಕ್ಕೆ ಎಸ್ ಪಿ ರಂಜಿತ್ ಕುಮಾರ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮನೆಯೊಂದರಲ್ಲಿ 18 ಕೆಜಿ ಗಾಂಜಾ ವಶ; ಇಬ್ಬರ ಬಂಧನ

Bellary: ಮನೆಯೊಂದರಲ್ಲಿ 18 ಕೆಜಿ ಗಾಂಜಾ ವಶ; ಇಬ್ಬರ ಬಂಧನ

ಕೆಟ್ಟು ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು, 10ಕ್ಕೂ ಹೆಚ್ಚು ಗಾಯ

ಕೆಟ್ಟು ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, 10ಕ್ಕೂ ಹೆಚ್ಚು ಗಾಯ

ದೇವಸಮುದ್ರದಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ ಗಂಟೆ ಶಾಸನ ಶೋಧ

ದೇವಸಮುದ್ರದಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ 18 ನೇ ಶತಮಾನದ ಗಂಟೆ ಶಾಸನ ಶೋಧ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Khandre

KIOCL ಗೆ ದೇವದಾರಿ ಗಣಿಗಾರಿಕೆ ಭೂಮಿ ಹಸ್ತಾಂತರಿಸದಂತೆ ಸಚಿವ ಖಂಡ್ರೆ ಪತ್ರ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.