ತ್ಯಾಜ್ಯ ಮರುಬಳಕೆಗೆ ಕ್ರಮ: ಮುರುಗನ್
ಗೃಹೋಪಯೋಗಿ ವಸ್ತುಗಳ ಪ್ರದರ್ಶನ
Team Udayavani, May 7, 2022, 2:29 PM IST
ಬಳ್ಳಾರಿ: ಜೆಎಸ್ಡಬ್ಲ್ಯು ಸಂಸ್ಥೆ ತನ್ನ ವಿಜಯನಗರ ಸಂಯೋಜಿತ ಉಕ್ಕು ಸ್ಥಾವರದಲ್ಲಿ ಉತ್ಪತ್ತಿಯಾಗುವ ಎಲ್ಲ ಬಗೆಯ ತ್ಯಾಜ್ಯವನ್ನು ಸಂಪೂರ್ಣ ಸಂಸ್ಕರಿಸಿ ಮರುಬಳಕೆ ಮಾಡುತ್ತಿದೆ ಎಂದು ವಿಜಯನಗರ ಉಕ್ಕು ಸ್ಥಾವರದ ಅಧ್ಯಕ್ಷ ಪಿ.ಕೆ. ಮುರುಗನ್ ತಿಳಿಸಿದರು.
ಜಿಲ್ಲೆಯ ತೋರಣಗಲ್ಲಿನ ಒಪಿಜೆ ಸೆಂಟರ್ ನಲ್ಲಿ ಶುಕ್ರವಾರ ಜೆಎಸ್ಡಬ್ಲ್ಯು ಫೌಂಡೇಶನ್ ಸಹಯೋಗದೊಂದಿಗೆ ಸ್ಥಳೀಯ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ತಯಾರಿಸಿದ ಹಲವು ಬಗೆಯ ಗೃಹೋಪಯೋಗಿ ವಸ್ತುಗಳ ಪ್ರದರ್ಶನವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಜೆಎಸ್ಡಬ್ಲ್ಯು ಸಂಸ್ಥೆ ತನ್ನ ಸ್ಥಾವರದಲ್ಲಿ ಉತ್ಪತ್ತಿಯಾಗುವ ಎಲ್ಲ ಬಗೆಯ ದ್ರವ ಮತ್ತು ಘನ ತ್ಯಾಜ್ಯ ಸಂಪೂರ್ಣವಾಗಿ ಮರು ಸಂಸ್ಕರಣೆಯಾಗಿ, ಮರು ಬಳಕೆಯಾಗಬೇಕೆಂದು ನಿರಂತರವಾಗಿ ಹೊಸ ಆವಿಷ್ಕಾರ ಮತ್ತು ಯೋಜನೆಗಳನ್ನು ಕೈಗೊಂಡಿದ್ದು, ಈ ದಿಸೆಯಲ್ಲಿ ಸಂಸ್ಥೆ ದೇಶದಲ್ಲಿನ ಇತರೆ ಉಕ್ಕು ಕಾರ್ಖಾನೆಗಳಿಗಿಂತಲೂ ಅಗ್ರ ಪಂಕ್ತಿಯಲ್ಲಿದೆ ಎಂದು ತಿಳಿಸಿದರು.
ಸಂಸ್ಥೆಯು ಈಗಾಗಲೇ ಬಳಸಿ ಬಿಸಾಡಿದ ಏಕಬಳಕೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಲ್ಲಿದ್ದಲಿಗೆ ಪರ್ಯಾಯ ಇಂಧನವಾಗಿ ಉಷ್ಣ ವಿದ್ಯುತ್ ಮತ್ತು ಸಿಮೆಂಟ್ ಉತ್ಪಾದನಾ ಸ್ಥಾವರಗಳಲ್ಲಿ ಉರುವಲು ಇಂಧನವಾಗಿ ಬಳಸುತ್ತಿದ್ದು, ಇದು ವಾತಾವರಣದಲ್ಲಿ ಇಂಗಾಲದ ಹೊರ ಸೂಸುವಿಕೆಯನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಿ, ಪರಿಸರ ಸಂರಕ್ಷಣೆಗೆ ಸಹಕಾರಿಯಾಗಿದೆ ಎಂದರು.
ಜಾಗತಿಕ ತಾಪಮಾನ ಏರಿಕೆಯನ್ನು ತಗ್ಗಿಸುವಲ್ಲಿ ಪ್ರತಿ ವ್ಯಕ್ತಿಯೂ ಜವಬ್ದಾರಿ ಹೊರಬೇಕಿದ್ದು, ಈ ಹಿನ್ನೆಲೆಯಲ್ಲಿ ಜೆಎಸ್ಡಬ್ಲ್ಯು ಸಂಸ್ಥೆ ಪರಿಸರ ಸಂರಕ್ಷಣೆ, ಸುತ್ತಲಿನ ಸಮುದಾಯದ ಅಭಿವೃದ್ಧಿ ಮತ್ತು ಕಾನೂನಿನ ನಿಯಮಾವಳಿ ಪಾಲನೆಗೆ ಸದಾ ಬದ್ಧವಾಗಿದೆ ಎಂದು ತಿಳಿಸಿದರು.
ಸ್ಥಳೀಯ ಸಮುದಾಯದ ಸಬಲೀಕರಣ ಮಾಡುವ ಆಶಯದಿಂದ ಆರಂಭಿಸಲಾದ ‘ಸಖೀ’ ಯೋಜನೆಯಲ್ಲಿ, ತೋರಣಗಲ್ಲು ಸುತ್ತಲಿನ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಜೆಎಸ್ಡಬ್ಲ್ಯು ಫೌಂಡೇಶನ್ ನೆರವಿನಿಂದ ಬಳಸಿ ಬಿಸಾಡಿದ ಏಕಬಳಕೆ ಪ್ಲಾಸ್ಟಿಕ್ನಿಂದ ಉತ್ತಮ ಗುಣಮಟ್ಟದ ಗೃಹೋಪಯೋಗಿ ವಸ್ತುಗಳನ್ನು ತಯಾರಿಸಿ, ಮಾರಾಟ ಮಾಡುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.
ಜೆಎಸ್ಡಬ್ಲ್ಯು ಸಂಸ್ಥೆ ಉಪಾಧ್ಯಕ್ಷ ಸಂಜಯ ಹಂಡೂರ, ಹಿರಿಯ ವ್ಯವಸ್ಥಾಪಕ ಶಿವಕುಮಾರ ಮಾಳಗಿ, ಫೌಂಡೇಶನ್ ಮುಖ್ಯಸ್ಥ ವಿನೋದ ಪುರೋಹಿತ, ಇಕೋಕಾರಿ ಸಂಸ್ಥೆ ನಂದನ್ ಭಟ್ ಮತು ಸೌಖ್ಯ ಬೆಳಕು ಸಂಸ್ಥೆ ಅಧ್ಯಕ್ಷೆ ಲಕ್ಷ್ಮೀ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ
Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ
Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್
Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ
Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.