ಮೀನು ಸಾಕಾಣಿಕೆಯಿಂದ ಅಧಿಕ ಲಾಭ; ಸಚಿವ ಎಸ್‌. ಅಂಗಾರ

ನಮ್ಮ ದೇಶದಲ್ಲಿ ಜನಸಂಖ್ಯೆ ಮತ್ತು ನಿರುದ್ಯೋಗ ಬಹುದೊಡ್ಡ ಎರಡು ಸಮಸ್ಯೆಗಳಾಗಿವೆ.

Team Udayavani, Apr 19, 2022, 5:43 PM IST

ಮೀನು ಸಾಕಾಣಿಕೆಯಿಂದ ಅಧಿಕ ಲಾಭ; ಸಚಿವ ಎಸ್‌. ಅಂಗಾರ

ಸಿರುಗುಪ್ಪ: ಕಡಿಮೆ ಬಂಡವಾಳ, ಹೆಚ್ಚು ಲಾಭ, ಕಡಿಮೆ ಕೂಲಿ ಕಾರ್ಮಿಕರನ್ನು ಬಳಸಿಕೊಂಡು ಹೆಚ್ಚಿನ ಆದಾಯವನ್ನು ಪಡೆದುಕೊಳ್ಳಬಹುದು. ಮೀನು ಒಂದು ಪೌಷ್ಠಿಕ ಆಹಾರವಾಗಿದೆ. ಮೀನಿನಿಂದ 19 ವಿವಿಧ ಆಹಾರ ಉತ್ಪಾದನೆಗಳನ್ನು ಮಾಡಬಹುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದರು.

ಬಳ್ಳಾರಿ ಜಿಪಂ ಜಿಲ್ಲಾ ಮೀನುಗಾರಿಕೆ ಇಲಾಖೆಯಿಂದ ನಗರದಲ್ಲಿ ನಬಾರ್ಡ್‌ ಯೋಜನೆಯಡಿಯಲ್ಲಿ ರೂ. ಒಂದು ಕೋಟಿ ಅನುದಾನದಲ್ಲಿ ನಿರ್ಮಾಣವಾಗಿರುವ ನೂತನ ಮೀನು ಮಾರುಕಟ್ಟೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಬಳ್ಳಾರಿ ಭಾಗದಲ್ಲಿ ಅತಿ ಹೆಚ್ಚು ಉಷ್ಣಾಂಶವಿದ್ದು, ಸಿರುಗುಪ್ಪದಲ್ಲಿ ತುಂಗಭದ್ರಾ ನದಿಯ ಸಿಹಿನೀರನ್ನು ಬಳಸಿಕೊಂಡು ಭತ್ತಕ್ಕೆ ಪರ್ಯಾಯವಾಗಿ ಮೀನುಗಾರಿಕೆ ಮಾಡುವುದರಿಂದ ರೈತರು ಮತ್ತು ನಿರುದ್ಯೋಗಿಗಳು ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಂಡು ಆರ್ಥಿಕವಾಗಿ ಸದೃಢವಾಗಲು ಅನುಕೂಲವಾಗುತ್ತದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಭತ್ತದ ನಾಡೆಂದು ಪ್ರಸಿದ್ಧಿ ಪಡೆದಿರುವ ಸಿರುಗುಪ್ಪ ನಗರದಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆಯನ್ನು ಪ್ರಾರಂಭಿಸಿದ್ದು ಕೃಷಿಹೊಂಡ, ಮೀನಿನ ಕೆರೆ, ಬಂಜರು ಭೂಮಿ, ಸವಳು ಭೂಮಿಯಲ್ಲಿ ಭತ್ತದ ಬೆಳೆಯೊಂದಿಗೆ ಮೀನುಗಾರಿಕೆಯ ಕೃಷಿಯನ್ನು ಅಳವಡಿಸಿಕೊಂಡರೆ ಹೆಚ್ಚಿನ ಲಾಭವನ್ನು ಗಳಿಸಬಹುದು ಇದರಿಂದ ರೈತರು ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ.

ನಮ್ಮ ದೇಶದಲ್ಲಿ ಜನಸಂಖ್ಯೆ ಮತ್ತು ನಿರುದ್ಯೋಗ ಬಹುದೊಡ್ಡ ಎರಡು ಸಮಸ್ಯೆಗಳಾಗಿವೆ. ಇವುಗಳನ್ನು ಹೋಗಲಾಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆತ್ಮ ನಿರ್ಭರ ಯೋಜನೆ ಮೂಲಕ ಅನೇಕ ಗುಂಪುಗಳನ್ನು ರಚಿಸಿ, ತರಬೇತಿ ನೀಡಿ ಉದ್ಯೋಗಗಳನ್ನು ಕೈಗೊಳ್ಳಲು ಆರ್ಥಿಕ ನೆರವು ನೀಡಲಾಗುತ್ತಿದ್ದು, ಇಂಥ ಯೋಜನೆಗಳನ್ನು ಈ ಭಾಗದ ನಿರುದ್ಯೋಗಿ ಯುವಕರು ಸದುಪಯೋಗಪಡಿಸಿಕೊಳ್ಳಬೇಕು.

ಕರಾವಳಿ ಭಾಗದಲ್ಲಿ 327 ಕಿಮೀ, ಒಳನಾಡು ಭಾಗದಲ್ಲಿನ ಮೀನುಗಾರರ ಸಮಸ್ಯೆಗಳನ್ನು ಪರಿಶೀಲಿಸಿ, ಇಲಾಖೆಯಿಂದ ಮತ್ತು ನಿಗಮದಿಂದ ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸುಕೊಡುವ ಮೂಲಕ ದೇಶದಲ್ಲಿ ಕರ್ನಾಟಕ ರಾಜ್ಯವು ಮೀನುಗಾರಿಕೆ ಉತ್ಪಾದನೆಯಲ್ಲಿ ಆರನೇ ಸ್ಥಾನ ಪಡೆದುಕೊಂಡಿದೆ. ಇಲ್ಲಿ ಮೀನು ಮಾರುಕಟ್ಟೆಯನ್ನು ಪ್ರಾರಂಭಿಸುವುದರಿಂದ ಮೀನು ಮಾರಾಟ ಮಾಡುವವರಿಗೆ ಸೌಲಭ್ಯಗಳು, ಮೀನಿನ ಗುಣಮಟ್ಟತೆ ಕಾಪಾಡಲು ಕೋಲ್ಡ್‌ ಸ್ಟೋರೇಜ್‌ ಘಟಕ, ವಿಶ್ರಾಂತಿ ಘಟಕ, ಮೀನಿನ ದುರಸ್ತಿ ಘಟಕ ಇದರೊಂದಿಗೆ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಅಭಿವೃದ್ಧಿ ನಿಗಮದಿಂದ ಅನೇಕ ಸೌಲಭ್ಯಗಳನ್ನು ನೀಡಲಾಗುವುದು.

ಭತ್ತದ ಕೃಷಿಗೆ ಹೆಚ್ಚಿನ ಕಾರ್ಮಿಕರು ಅವಶ್ಯಕತೆಯಿದ್ದು ಮನೆಯ ಕಡಿಮೆ ಸ್ಥಳದಲ್ಲಿಯೇ ಮೀನು ಕೃಷಿಗೆ ಕುಟುಂಬದವರೇ ನಿರ್ವಹಿಸಿ ಹೆಚ್ಚಿನ ಆದಾಯ ಗಳಿಸಬಹುದು, ಮೀನು ಕೃಷಿಗೆ ಕಡಿಮೆ ಕಾರ್ಮಿಕರು ಹೆಚ್ಚು ಉತ್ಪಾದನೆ, ಹೆಚ್ಚು ಆದಾಯ ಗಳಿಸಬಹದು, ಕೃಷಿಗೆ ಪೂರಕವಾಗಿ ಆದಾಯವನ್ನು ಹೆಚ್ಚಿಸಿಕೊಳ್ಳಲು ಮೀನುಗಾರಿಕೆಯೂ ಒಂದು ಉತ್ತಮ ಉಪಕಸುಬಾಗಿದೆ ಎಂದು ಹೇಳಿದರು.

ಕೊಪ್ಪಳ ಸಂಸದ ಕರಡಿಸಂಗಣ್ಣ, ಶಾಸಕ.ಎಂ.ಎಸ್‌. ಸೋಮಲಿಂಗಪ್ಪ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ಮಂಗಳೂರು ಅಧ್ಯಕ್ಷ ನಿತಿನ್‌ ಕುಮಾರ್‌, ವ್ಯವಸ್ಥಾಪಕ ನಿರ್ದೇಶಕ ದಿನೇಶ್‌ ಕುಮಾರ್‌ ಕಳ್ಳರೇ, ಉಪನಿರ್ದೇಶಕ ಎಂ.ಎಲ್‌.ದೊಡ್ಡಮನಿ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಜಿಲ್ಲಾ ಕಾರ್ಯನಿರ್ವಾಹಕ ಅಭಿಯಂತರ ಕೆ. ನಟರಾಜ್‌, ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕರು ಬಸವನಗೌಡ, ಜಿಲ್ಲಾ ಮೀನುಗಾರಿಕೆ ಸಹಾಯಕ ನಿರ್ದೇಶಕ ಶಿವಣ್ಣ, ತಹಶೀಲ್ದಾರ್‌ ಎನ್‌.ಆರ್‌. ಮಂಜುನಾಥಸ್ವಾಮಿ, ನಗರಸಭೆ ಅಧ್ಯಕ್ಷ ಕೆ. ಸುಶೀಲಮ್ಮ, ಗ್ರಾಪಂ ಅಧ್ಯಕ್ಷೆ ಎಸ್‌.ಶೇಖಮ್ಮ ಇದ್ದರು.

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Bellary; Darshan IT interrogation in jail

Bellary; ಜೈಲಿನಲ್ಲಿಂದು ದರ್ಶನ್‌ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.