![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 5, 2024, 12:06 PM IST
ಬಳ್ಳಾರಿ: ಚಾಲನಾ ಪರವಾನಿಗೆ (Driving Licence) ತಮ್ಮ ಕೈಗೆ ನೀಡದೆ ನೇರ ಗ್ರಾಹಕರಿಗೆ ನೀಡುತ್ತಿರುವ ಕಾರಣಕ್ಕೆ ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಡ್ರೈವಿಂಗ್ ಸ್ಕೂಲ್ ಮಾಲೀಕರು ಹಲ್ಲೆ ನಡೆಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಡ್ರೈವಿಂಗ್ ಸ್ಕೂಲ್ ಲಾಭಿ ಹಿನ್ನೆಲೆಯಲ್ಲಿ ಹಲ್ಲೆ ಮಾಡಲಾಗಿದ್ದು, FDA ನಾಗೇಶ ಗೌಡ ಎಂಬವರ ಮೇಲೆ ಏಳು ಜನರು ಕಚೇರಿಯಲ್ಲಿಯೇ ಹಲ್ಲೆ ನಡೆಸಿದ್ದಾರೆ.
ಡ್ರೈವಿಂಗ್ ಸ್ಕೂಲ್ ಮಾಲೀಕರಾದ ಕೆ. ಮೋಹನ್, ಅರುಣ್, ತಿಪ್ಪೇಸ್ವಾಮಿ ಅಜೀಜ್ ರೆಹಮತ್, ಅಮೀರ್ ರೆಹಮಾನ್ ಮನ್ಸೂರ್ ಮತ್ತು ಜಿಲಾನ್ ಗುಂಪಿನಿಂದ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕೌಲಬಜಾರ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಮತ್ತು ಹಲ್ಲೆ ಕುರಿತು ಪ್ರಕರಣ ದಾಖಲಾಗಿದೆ.
ನಿಯಮಗಳ ಪ್ರಕಾರ ಡ್ರೈವಿಂಗ್ ಲೈಸೆನ್ಸ್ ಗ್ರಾಹಕರ ಮನೆಗೆ ಕಳುಹಿಸಬೇಕು. ಆದರೆ ಗ್ರಾಹಕರ ಕೈಗೆ ಲೈಸನ್ಸ್ ನೀಡಿದರೆ, ಡ್ರೈವಿಂಗ್ ಸ್ಕೂಲ್ ನವರಿಗೆ ಅದಾಯವಿರುವುದಿಲ್ಲ. ಹೀಗಾಗಿ ಲೈಸೆನ್ಸ್ ತಮಗೆ ನೀಡುವಂತೆ ಡ್ರೈವಿಂಗ್ ಸ್ಕೂಲ್ ನವರು ವಾಗ್ವಾದ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಕಚೇರಿಯ ಎಲ್ಲಾ ಸಿಬ್ಬಂದಿ ಮುಂದೆಯೇ ಹಲ್ಲೆ ಮಾಡಲಾಗಿದೆ. ಹಲ್ಲೆ ಮತ್ತು ಗಲಾಟೆಯ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.