Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ
Team Udayavani, Oct 17, 2024, 2:15 PM IST
ಬಳ್ಳಾರಿ: ಜನಾರ್ದನ ರೆಡ್ಡಿ ಅವರು ಕೆಆರ್ ಪಿಪಿ ಪಕ್ಷ ಕಟ್ಟಿದಾಗ ಬಿಜೆಪಿ ವಿರುದ್ದ ಎಷ್ಟು ಅರೋಪ ಮಾಡಿದ್ದರು. ಬಿಜೆಪಿ ಮೇಲಿನ ಭಯದಿಂದ ಕೊಮುವಾದಿ ಪಕ್ಷಕ್ಕೆ ಸೇರಿದ್ದಾರೆ. ಇಡಿ, ಸಿಬಿಐ ಭಯಕ್ಕೆ ರೆಡ್ಡಿ ಬಿಜೆಪಿ ಸೇರಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಬಿ ನಾಗೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಸಂಡೂರಿನಲ್ಲಿ ಮನೆ ಅಲ್ಲ ಅರಮನೆ ಮಾಡಿದರೂ ಕಾಂಗ್ರೆಸ್ ಗೆಲುವು ಫಿಕ್ಸ್. ಜನಾರ್ದನ ರೆಡ್ಡಿ ಬಳ್ಳಾರಿಗೆ ಬಂದಿರುವುದು ನಮ್ಮ ಪಕ್ಷದ ಮೇಲೆ ಯಾವ ಪರಿಣಾಮ ಬೀರಲ್ಲ ಎಂದರು.
ಯುಪಿಎ ಸರ್ಕಾರ ಇದ್ದಾಗ ನಾಗೇಂದ್ರ ಜೈಲಿಗೆ ಹೋಗಿದ್ದರು ಎನ್ನುವ ರೆಡ್ಡಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಬಿಜೆಪಿ ಅಥವಾ ಜನಾರ್ದನ ರೆಡ್ಡಿ ಜೊತೆಗೆ ಇದ್ದರೆ ನಾವು ಒಳ್ಳೆಯವರು. ಈಗ ಪಕ್ಷ ಬದಲಾದ ಕೂಡಲೇ ನಾಗೇಂದ್ರ ಕೆಟ್ಟವನಾಗುತ್ತಾನಾ? ಜನಾರ್ದನ ರೆಡ್ಡಿ ಅವರಿಗೆ ಸ್ವಲ್ಪ ಆತ್ಮಸಾಕ್ಷಿ ಇದ್ದರೆ ನೋಡಿಕೊಳ್ಳಲಿ. ಹೈ ವೋಲ್ಟೇಜ್ ಕ್ಷೇತ್ರವಲ್ಲ ಲಕ್ಷ ವೋಲ್ಟೆಜ್ ಇದ್ದರೂ ನಾವೇ ಸಂಡೂರು ಗೆಲ್ಲುವುದು. ಯಾರಿಗೆ ಎಷ್ಟು ವೋಲ್ಟೇಜ್ ಇದೆ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ. ಸಂಡೂರು ಕ್ಷೇತ್ರದಲ್ಲಿ ತಂತ್ರ ಪ್ರತಿತಂತ್ರ ಅಲ್ಲ ನಾವು ರಣತಂತ್ರ ಮಾಡುತ್ತೇವೆ. ಜನಾರ್ದನ ರೆಡ್ಡಿಯಾಗಲಿ ಯಾರೇ ಬಂದರೂ ಸಂಡೂರಲ್ಲಿ ಕಾಂಗ್ರೆಸ್ ಗೆಲುವು ಫಿಕ್ಸ್ ಎಂದು ವಿಶ್ವಾಸ ವ್ಯಕ್ತಪಡಿಸಸಿದರು.
ವಾಲ್ಮೀಕಿ ಸಮುದಾಯದ ಮಗನಾಗಿ ವಾಲ್ಮೀಕಿ ಜಯಂತಿ ದಿನ ವಾಲ್ಮೀಕಿ ಹಗರಣ ಎನ್ನುವ ಶಬ್ದ ಬಳಸಿ ಮಾತಾಡಲು ಬೇಸರವಾಗುತ್ತಿದೆ. ನಾವು ಯಾವುದೇ ಹಗರಣ ಮಾಡಿಲ್ಲ. ಇದೆಲ್ಲ ಬಿಜೆಪಿ ಕುತಂತ್ರ. ಸಿಬಿಐ, ಇಡಿ ಬಳಸಿ ಸರ್ಕಾರ ಅಸ್ಥಿರ ಮಾಡುವ ಪ್ರಯತ್ನಿದಿಂದ ನನ್ನನ್ನು ಟಾರ್ಗೆಟ್ ಮಾಡಲಾಗಿದೆ. ಈ ಪ್ರಕರಣದಿಂದ ಶೀಘ್ರದಲ್ಲೇ ಆರೋಪ ಮುಕ್ತನಾಗುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contempt case: ಬಸನಗೌಡ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್
Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು
Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ
Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ
Actor Darshan: ಅ.22ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ…
240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ
Udupi: ಸಂತೆಕಟ್ಟೆ ಓವರ್ಪಾಸ್ ಕಾಮಗಾರಿ ಚುರುಕು
Kulai: ಬೃಹತ್ ಟ್ರಕ್ ಓಡಾಟದಿಂದ ರಸ್ತೆಗೆ ಹಾನಿ
Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್ ಕುಮಾರ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.