ಈಶ್ವರಪ್ಪ ಹೇಳಿಕೆಗೆ ಕೈ ಕಾರ್ಯಕರ್ತರ ಆಕ್ರೋಶ
Team Udayavani, Feb 22, 2022, 3:06 PM IST
ಬಳ್ಳಾರಿ: ಕೆಂಪುಕೋಟೆ ಮೇಲೆ ಕೇಸರಿ ಬಾವುಟಹಾರಿಸುವುದಾಗಿ ಹೇಳಿರುವ ಸಚಿವ ಈಶ್ವರಪ್ಪ ವಿರುದ್ಧದೇಶದ್ರೋಹಿ ಪ್ರಕರಣ ದಾಖಲಿಸಬೇಕು ಎಂದುಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ನಗರದಲ್ಲಿಸೋಮವಾರ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಗಡಿಗಿ ಚನ್ನಪ್ಪ ವೃತ್ತದಿಂದ ಪ್ರತಿಭಟನಾಮೆರವಣಿಗೆ ನಡೆಸಿದ ಪ್ರತಿಭಟನಾನಿರತರು, ರಾಜ್ಯಸರ್ಕಾರ, ಸಚಿವ ಈಶ್ವರಪ್ಪ ವಿರುದ್ಧ ವಿವಿಧ ಘೋಷಣೆಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಜಿಲ್ಲಾ ಧಿಕಾರಿಕಚೇರಿಗೆ ತಲುಪಿದ ಪ್ರತಿಭಟನಾಕಾರರು, ಕೆಲಕಾಲಪ್ರತಿಭಟನೆ ನಡೆಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರಾಜ್ಯಸಭಾ ಸದಸ್ಯ ಡಾ| ಸೈಯದ್ ನಾಸೀರ್ಹುಸೇನ್ ಅವರು, ದೇಶದ್ರೋಹಿ ಹೇಳಿಕೆ ನೀಡಿರುವಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.
ಇವರ ವಿರುದ್ಧ ಈಗಾಗಲೇ ಬೆಂಗಳೂರಿನಲ್ಲಿ ಮಾಜಿಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿವಿಧಾನಸೌಧದಲ್ಲಿ ಅಹೋರಾತ್ರಿ ಧರಣಿನಡೆಸಲಾಗುತ್ತಿದೆ. ಈಶ್ವರಪ್ಪ ಇಂಥ ಹೇಳಿಕೆ ಈಹಿಂದೆಯೂ ನೀಡಿದ್ದಾರೆ. ಈಶ್ವರಪ್ಪ ಹಿಜಾಬ್ವಿವಾದದ ಕುರಿತು ಹೇಳಿಕೆ ನೀಡುವ ಭರದಲ್ಲಿ ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ.
ಶಿವಮೊಗ್ಗದಲ್ಲಿ ರಾಷ್ಟ್ರ ಧ್ವಜಸ್ತಂಭಕ್ಕೆ ಕೇಸರಿ ಬಾವುಟಹಾರಿಸಿದ್ದಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ಇದುದೇಶ ದ್ರೋಹದ ಕೆಲಸ. ಹಾಗಾಗಿ ಇವರ ವಿರುದ್ಧದೇಶದ್ರೋಹದ ಪ್ರಕರಣ ದಾಖಲಿಸಬೇಕು.ಇವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದುಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Bellary; ಕಳಪೆ ಆಹಾರ ಪೂರೈಕೆ; ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.