ಲಾಕ್ಡೌನ್ ಮುಂದುವರಿಕೆ ಒಳ್ಳೆಯದು: ಸಚಿವ ಸಿಂಗ್
Team Udayavani, Jun 1, 2021, 9:00 PM IST
ಬಳ್ಳಾರಿ: ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಮಾಡುವ ದೃಷ್ಟಿಯಿಂದ ಸದ್ಯದ ಸ್ಥಿತಿಯಲ್ಲಿ ತಜ್ಞರ ವರದಿ ಪಡೆದು ರಾಜ್ಯಾದ್ಯಂತ ಲಾಕ್ ಡೌನ್ ಮುಂದುವರಿಸಿದರೇ ಒಳ್ಳೆಯದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ತಿಳಿಸಿದರು.
ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಲಾಕ್ ಡೌನ್ನಿಂದ ಬಹಳಷ್ಟು ಜನರಿಗೆ ತೊಂದರೆಯಾಗುತ್ತದೆ. ಆದರೂ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ.
ಜೂನ್ 30ರ ವರೆಗೆ ಲಾಕ್ಡೌನ್ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಇಲ್ಲ. ಲಾಕ್ಡೌನ್ ಮಾಡೋದಾ, ಬೇಡವಾ ಎನ್ನುವುದನ್ನು ಈಗಲೇ ಹೇಳ್ಳೋಕೆ ಅಗಲ್ಲ. ತಜ್ಞರ ಸಮಿತಿ ನಿರ್ಣಯದ ಮೇಲೆ ಲಾಕ್ಡೌನ್ ಭವಿಷ್ಯ ನಿರ್ಧಾರವಾಗಲಿದೆ ಎಂದರು.
ವೈಯಕ್ತಿಕವಾಗಿ ಸದ್ಯಕ್ಕೆ ಲಾಕ್ಡೌನ್ ತೆರವು ಮಾಡಬಾರದು ಅನಿಸುತ್ತದೆ. ಏಕೆಂದರೆ ಸ್ವಲ್ಪ ಮೈಮರೆತರು ಅನಾಹುತ ಆಗುತ್ತದೆ. ಹೀಗಾಗಿ ಮುಂದುವರೆಸುವುದು ಒಳ್ಳೆಯದು. ಲಾಕ್ಡೌನ್ನಿಂದ ಕೆಲವರಿಗೆ ತೊಂದರೆ ಆಗುತ್ತದೆ. ಅಂತಹವರಿಗೆ ಮುಖ್ಯಮಂತ್ರಿಗಳು ಪರಿಹಾರದ ಪ್ಯಾಕೇಜ್ ನೀಡಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Bellary; ಕಳಪೆ ಆಹಾರ ಪೂರೈಕೆ; ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.