ಜೀವ ಬಲಿಗಾಗಿ ಕಾದು ನಿಂತ ವಿದ್ಯುತ್ ಕಂಬ!
Team Udayavani, Jun 7, 2021, 9:58 PM IST
ಎಂ. ಸೋಮೇಶ್ ಉಪ್ಪಾರ
ಮರಿಯಮ್ಮನಹಳ್ಳಿ: ಇಲ್ಲಿನ ವಿದ್ಯುತ್ ಕಂಬಗಳನ್ನು ನೋಡಿದರೆ ಭಯವಾಗುತ್ತದೆ. ಈಗ ಮಳೆಗಾಲ ಬಂದಿದೆ. ಈ ಮಳೆ ಗಾಳಿಗೆ ಈ ವಿದ್ಯುತ್ ಕಂಬಗಳು ತಂತಿಗೆ ನೇತಾಡುವಂತಾಗಿವೆ. ಈ ಕಂಬಗಳು ಅಸ್ತಿಪಂಜರದಂತೆ ನೇತಾಡುತ್ತಿವೆ. ಆದರೂ ಈ ಭಾಗದ ಲೈನ್ಮನ್ ಆಗಲಿ, ಜೆಸ್ಕಾಂ ಉಪವಿಭಾಗಾಧಿಕಾರಿಗಳಾಗಲಿ ಕಂಬಗಳನ್ನು ಬದಲಾಯಿಸಲು ಮೀನಮೇಷ ಎಣಿಸುತ್ತ ಕೂತಿದ್ದಾರೆ.
ಹೌದು. ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ನಂದಿ ಬಂಡಿ ಗ್ರಾಮ ವ್ಯಾಪ್ತಿಗೆ ಬರುವ ಈ ವಿದ್ಯುತ್ ಕಂಬಗಳು ಜೀವ ಬಲಿಗಾಗಿ ಕಾದು ನಿಂತಂತೆ ಕಾಣುತ್ತಿವೆ. ಯಾವ ಸಂದರ್ಭದಲ್ಲಾದರೂ ಈ ಕಂಬಗಳು ನೆಲಕಚ್ಚಬಹುದಾಗಿದೆ. ದನಗಾಹಿಗಳು, ಕುರಿಗಾಹಿಗಳು, ಕೃಷಿ ಕೂಲಿ ಕಾಮಿಕರು ಓಡಾಡುತ್ತಿದ್ದು ಯಾವ ಸಂದರ್ಭದಲ್ಲಾದರೂ ಯಾವುದೇ ಅವಘಡಗಳು ಸಂಭವಿಸಬಹುದಾಗಿದೆ.
ದನಕರುಗಳು ಮೇವನ್ನು ಮೇಯುತ್ತ ಕಂಬಗಳ ಹತ್ತಿರ ಹೋದರೆ ಶಾರ್ಟ್ ಸರ್ಕ್ನೂಟ್ ಆದರೆ ಜೀವ ಕಳೆದುಕೊಳ್ಳ ಬೇಕಾಗುತ್ತದೆ. ದೂರದಲ್ಲಿ ಹೊಲಗಳಲ್ಲಿ ರೈತರು ಕೆಲಸ ಮಾಡುವ ವೇಳೆ ಕಂಬಗಳು ಬಿದ್ದರೆ ತಂತಿಗಳು ನೆಲಕ್ಕೆ ಬೀಳುವ ಸಾಧ್ಯತೆಗಳು ಇವೆ. ಕಳೆದ ಎರಡು ವರ್ಷಗಳ ಹಿಂದೆ ವ್ಯಾಸನಕೆರೆ ಗ್ರಾಮದ ಬಳಿ ವಿದ್ಯುತ್ ತಂತಿ ಹರಿದು ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಜೆಸ್ಕಾಂ ಅಧಿಕಾರಿಗಳಿಗೆ ಗೊತ್ತಿದ್ದು ಇಂಥ ಶಿಥಿಲಗೊಂಡ ಕಂಬಗಳನ್ನು ಬದಲಾಯಿಸಲು ಮುಂದಾಗುತ್ತಿಲ್ಲ. ಈ ಬಗ್ಗೆ ದೂರು ನೀಡಿ ಎರಡು ವರ್ಷಗಳೇ ಕಳೆದಿವೆ.
ಈಗಿನ ಅಧಿ ಕಾರಿಗಳು ಪದೆ ಪದೇ ಹೇಳಿದರೂ ಲಾಕ್ಡೌನ್ ನೆಪವೊಡ್ಡಿ ವಿಳಂಬ ಮಾಡುತ್ತಿದ್ದಾರೆ ಎನ್ನುತ್ತಾರೆ ರೈತ ಕೆ.ಎಚ್. ಸುಬ್ರಮಣಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Bellary; ಕಳಪೆ ಆಹಾರ ಪೂರೈಕೆ; ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.