ದೇವರ ದರ್ಶನ ಪಡೆದು ಭಕ್ತರು ಪುನೀತ
Team Udayavani, Jul 6, 2021, 9:56 PM IST
ಬಳ್ಳಾರಿ: ರಾಜ್ಯ ಸರ್ಕಾರ ಕೋವಿಡ್ ಲಾಕ್ ಡೌನ್ ತೆರವುಗೊಳಿಸಿ ಅನ್ಲಾಕ್ ಜಾರಿಗೊಳಿಸಿ ದೇವಸ್ಥಾನಗಳಿಗೂ ತೆರೆಯಲು ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ನಗರದ ಆರಾಧ್ಯ ದೇವತೆ ಕನಕದುರ್ಗಮ್ಮ ದೇವಸ್ಥಾನದಲ್ಲಿ ಭಕ್ತರು ದರ್ಶನ ಪಡೆದು ಕೃತಾರ್ಥರಾದರು.
ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡುವರೆ ತಿಂಗಳಿಂದ ಬಳ್ಳಾರಿ, ವಿಜಯನಗರ ಸೇರಿ ರಾಜ್ಯದ ಎಲ್ಲ ದೇವಸ್ಥಾನಗಳನ್ನು ಬಂದ್ ಮಾಡಲಾಗಿದ್ದು, ಸಾರ್ವಜನಿಕರ ದರ್ಶನಕ್ಕೂ ನಿಷೇಧ ವಿಧಿಸಿತ್ತು.
ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದು ಸಾವು ನೋವುಗಳ ಸಂಖ್ಯೆಯೂ ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ಲಾಕ್ಡೌನ್ನನ್ನು ನಿಧಾನವಾಗಿ ಸಡಿಲಿಕೆ ಮಾಡಿದ್ದು, ಅನ್ಲಾಕ್ 3 ಜಾರಿಗೆ ತಂದು ದೇವಸ್ಥಾನಗಳಿಗೂ ತೆರೆಯಲು ಅವಕಾಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಬಳ್ಳಾರಿ ಕನಕುದುರ್ಗಮ್ಮ, ಕೋಟೆ ಮಲ್ಲೇಶ್ವರ, ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಗಳಲ್ಲಿ ಸ್ವತ್ಛಗೊಳಿಸಿ, ಸ್ಯಾನಿಟೈಸರ್ ಸಿಂಪಡಿಸಿ, ಕ್ಯೂಲೈನ್ ನಿರ್ಮಿಸಿ, ಬ್ಯಾರಿಕೇಡ್ ಅಳವಡಿಸುವ ಮೂಲಕ ಸೋಮವಾರದಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಸೋಮವಾರ ಬೆಳಗಿನ ಜಾವದಿಂದಲೇ ಭಕ್ತರು ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆಯಲು ಆರಂಭಿಸಿದರು.
ದೇವಾಲಯ ಪ್ರವೇಶಕ್ಕೆ ಭಕ್ತರಿಗೆ ಮಾಸ್ಕ್ ಕಡ್ಡಾಯವಾಗಿದ್ದು, ಸ್ಯಾನಿಟೈಸರ್ ಅನ್ನು ಸಹ ಬಳಸಿರಬೇಕು. ಸಾಮಾಜಿಕ ಅಂತರದೊಂದಿಗೆ ದೇವಸ್ಥಾನದೊಳಕ್ಕೆ ಪ್ರವೇಶಿಸಿ ದೇವರ ದರ್ಶನ ಪಡೆದ ದೃಶ್ಯ ಸಾಮಾನ್ಯವಾಗಿ ಕಂಡುಬಂತು.
ದೇವಾಲಯಗಳಲ್ಲಿ ಭಕ್ತರಿಗೆ ದರ್ಶನ ಮತ್ತು ಮಂಗಳಾರತಿಗೆ ಮಾತ್ರ ಅವಕಾಶವಿದ್ದು, ಯಾವುದೇ ತೀರ್ಥ ನೀಡುವಂತಿಲ್ಲ. ಭಕ್ತರು ಹೂವು, ಹಣ್ಣು, ಕಾಯಿಗಳನ್ನು ದೇವರಿಗೆ ಅರ್ಪಿಸುವಂತಿಲ್ಲ. ಪ್ರಸಾದ ವಿತರಣೆ ಮಾಡುವಂತಿಲ್ಲ ಈ ಎಲ್ಲ ನಿಷೇಧಗಳ ನಡುವೆ ಭಕ್ತರು ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Bellary; ಕಳಪೆ ಆಹಾರ ಪೂರೈಕೆ; ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.