ಲೋಪ ಸಾಬೀತಾದರೆ ಕ್ರಮ ಎದುರಿಸಲು ಸಿದ್ಧ


Team Udayavani, Jul 11, 2021, 9:24 PM IST

11-11

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಮಾಳಾಪುರ ಗ್ರಾಮದಲ್ಲಿ 47 ಎಕರೆ ಜಮೀನು ಖರೀದಿಯಲ್ಲಿ ಕಾನೂನು ಲೋಪವೆಸಗಿದ್ದೇವೆ ಎಂದು ಸಾಬೀತಾದಲ್ಲಿ ಕಾನೂನಿನಡಿ ಮುಂದಿನ ಕ್ರಮಕ್ಕೆ ನಾವು ಸಿದ್ಧರಿದ್ದೇವೆ ಎಂದು ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ಮುಖಂಡ ಸಂತೋಷ್‌ ಎಸ್‌. ಲಾಡ್‌ ಸ್ಪಷ್ಟಪಡಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸಂಡೂರು ತಾಲೂಕು ತೋರಣಗಲ್ಲು ಹೋಬಳಿಯ ಮಾಳಾಪುರ ಗ್ರಾಮದ ಸರ್ವೇ ನಂ. 123, 47.63 ಎಕರೆ ಜಮೀನು 1981ರಿಂದ 1996ರ ವರೆಗೆ ಮೂಲ ಪಟ್ಟಾದಾರರಾದ ಮಕಾಶಿ ಹನುಮಗಾರಿ ಹೊನ್ನೂರಪ್ಪ ತಂದೆ ಹನುಮಂತಪ್ಪ ಎನ್ನುವವರ ಹೆಸರಿನಲ್ಲಿತ್ತು. ಪಹಣಿಯಲ್ಲೂ ಅವರ ಹೆಸರು ನಮೂದಾಗಿತ್ತು. ಬಳಿಕ 1996ರಲ್ಲಿ ಈ ಜಮೀನನ್ನು ಪಟ್ಟಾದಾರರಾದ ಮಕಾಶಿ ಹನುಮಗಾರಿ ಹೊನ್ನೂರಪ್ಪ ತಂದೆ ಹನುಮಂತಪ್ಪ ಅವರಿಂದ ನಾವು ಖರೀದಿಸಿದ್ದೇವೆ. ಇದೀಗ ಈ ಜಮೀನು ರೂಪಾ ಯು.ಲಾಡ್‌, ಸಂತೋಷ್‌ ಎಸ್‌.ಲಾಡ್‌, ವಿಜಯ ಲಾಡ್‌, ಅಕ್ಷಯ್‌ಲಾಡ್‌ ಮತ್ತು ನವೀನ್‌ ಲಾಡ್‌ ಅವರ ಹೆಸರಿನಲ್ಲಿದೆ. ಜಮೀನನ್ನು ಕಾನೂನಿನಡಿಯಲ್ಲೇ ಖರೀದಿಸಿದ್ದು, ಯಾವುದೇ ಲೋಪವೆಸಗಿಲ್ಲ ಎಂದವರು ಖಚಿತಪಡಿಸಿದ್ದಾರೆ.

ಜಮೀನನ್ನು 1996ರಲ್ಲಿ ಖರೀದಿಸಿದ ಬಳಿಕ ಅಲ್ಲಿಂದ ಇಲ್ಲಿವರೆಗೆ ಪ್ರತಿವರ್ಷ ತೆರಿಗೆಯನ್ನೂ ಪಾವತಿಸುತ್ತಿದ್ದೇವೆ ಎಂದ ಅವರು, ಜಮೀನಿನಲ್ಲಿ ಕೃಷಿ ಚಟುವಟಿಕೆಗಳನ್ನು ಆದ್ಯತೆ ಮೆರೆಗೆ ಮಾಡುತ್ತಿದ್ದೇವೆ. ಕೊಳವೆಬಾವಿಯನ್ನೂ ಕೊರೆಸಿದ್ದೇವೆ. 2000ನೇ ಸಾಲಿನಲ್ಲಿ ಗಣಕೀಕೃತ ಪಹಣಿಯಲ್ಲೂ ನಮ್ಮ ಕುಟುಂಬದ ಎಲ್ಲ ಸದಸ್ಯರ ಹೆಸರುಗಳು ಮುಂದುವರೆದಿವೆ. ಆದರೆ, ಕಳೆದ 2012-2013ನೇ ಸಾಲಿನಲ್ಲಿ ಹುಬ್ಬಳ್ಳಿ ನಿವಾಸಿ ಹೊನ್ನೂರಪ್ಪ ಎನ್ನುವವರು ಸಂಡೂರು ನ್ಯಾಯಾಲಯದಲ್ಲಿ ನಮ್ಮ ಮೇಲೆ ಪ್ರಕರಣವನ್ನು ದಾಖಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ 2017 ಆಗಸ್ಟ್‌ 3ರಂದು ನಮ್ಮ ಪರವಾಗಿ ಆದೇಶ ನೀಡಿತು. ನಂತರ ಹಿರಿಯ ಸಿವಿಲ್‌ ನ್ಯಾಯಾಲಯದಲ್ಲೂ ಸಲ್ಲಿಸಿದ್ದ ಮೇಲ್ಮನವಿಯನ್ನೂ ವಜಾಗೊಳಿಸಿದೆ. ಎರಡು ನ್ಯಾಯಾಲಯಗಳಲ್ಲೂ ವಿಫಲವಾಗಿರುವ ಹೊನ್ನೂರಪ್ಪ, ಇದೀಗ ನಮ್ಮ ಕುಟುಂಬದ ಸದಸ್ಯರೊಂದಿಗೆ ಸಂಡೂರು ತಹಶೀಲ್ದಾರ್‌ರು, ಜಿಲ್ಲಾಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿ ಸೇರಿಸಿ ಕೂಡ್ಲಿಗಿ ಹಿರಿಯ ಸಿವಿಲ್‌ ನ್ಯಾಯಾಲಯಲ್ಲಿ ಪ್ರಕರಣ ದಾಖಲಿಸಿದ್ದು ವಿಚಾರಣೆ ಹಂತದಲ್ಲಿದೆ ಎಂದವರು ವಿವರಿಸಿದರು.

ದಶಕಗಳಿಂದ ವಾಸ: ಆದರೆ ಕೆಲ ಸ್ವಹಿತಾಸಕ್ತಿಗಳು, ನಮ್ಮ ಕುಟುಂಬದ ರಾಜಕೀಯ ವಿರೋ ಧಿಗಳು, ಮಾಳಾಪುರದ 47.63 ಎಕರೆ ಜಮೀನು ತಮ್ಮದು. ಹಲವು ದಶಕಗಳಿಂದ ಅವರು ಉಳುಮೆ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಸೇರಿದ್ದ ಜಮೀನನ್ನು ಅಕ್ರಮವಾಗಿ ಮಾಡಿಸಿಕೊಂಡಿದ್ದಾರೆ ಎಂದೆಲ್ಲ ನಮ್ಮ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ, ಪ್ರತಿಭಟನೆ, ಹೋರಾಟಗಳನ್ನೂ ನಡೆಸಿ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ. ನಾನು ಅಲ್ಲೇ ಹುಟ್ಟಿ ಅಲ್ಲೇ ಬೆಳೆದಿದ್ದೇನೆ. ನಮ್ಮ ಕುಟುಂಬ ಸುಮಾರು 100 ವರ್ಷಗಳಿಂದ ಅಲ್ಲೇ ವಾಸವಿದೆ. ಈವರೆಗೂ ಅಲ್ಲಿ ಯಾವುದೇ ಇಂಥ ಆರೋಪಗಳು ಬಂದಿಲ್ಲ. ಇದೀಗ ಕೆಲ ಸ್ವಹಿತಾಸಕ್ತಿಗಳು ಮಾಡುತ್ತಿದ್ದಾರೆ.

ಅದು ಸರ್ಕಾರಿ ಜಮೀನು ಆಗಿದ್ದರೆ ಅಥವಾ ಹೊನ್ನೂರಪ್ಪರ ಜಮೀನನ್ನು ಸರ್ಕಾರ ಪರಭಾರೆ ಮಾಡಿದ್ದರೆ ಈ ಬಗ್ಗೆ ಕಾನೂನಿನ ತೊಡಕಿದ್ದರೆ, ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬಹುದು. ಅದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದು ತಿಳಿಸಿದರು. ನಾವೇ ಕೊಡುತ್ತಿದ್ದೇವು: ಈ ರೀತಿ ಇಲ್ಲಸಲ್ಲದ ಆರೋಪ, ಹೋರಾಟ ಮಾಡುವ ಬದಲು ಅವರೇ ನಮ್ಮ ಬಳಿಗೆ ಬಂದು, ನಮಗೆ ಜಮೀನಿಲ್ಲ ಎಂದು ಕೇಳಿದ್ದರೆ ನಾವೇ ಬಿಟ್ಟುಕೊಡುತ್ತಿದ್ದೆವು. ಆದರೆ ಕೆಲವರ ಮಾತುಗಳನ್ನು ಕೇಳಿ ಈ ರೀತಿ ಮಾಧ್ಯಮಗಳಲ್ಲಿ ನಮ್ಮ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ನಮಗೆ ನೋವಾಗಿದೆ. ಈ ವರೆಗೆ ನಮ್ಮ ಬಳಿ ಬಂದು ಅವರು ಕೇಳಿಲ್ಲ. ಅಂಥ ಪರಿಸ್ಥಿತಿ ಬಂದರೆ ಮುಂದೆ ನೋಡೋಣ ಎಂದ ಅವರು, ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಈ ಕುರಿತು ಜಿಲ್ಲಾ ಧಿಕಾರಿಗಳಿಗೆ ಎಲ್ಲ ರೀತಿಯ ಸ್ಪಷ್ಟನೆ ನೀಡಿದ್ದೇನೆ ಎಂದು ತಿಳಿಸಿದರು.

ಈ ವೇಳೆ ಸಂಡೂರು ಶಾಸಕ ಈ. ತುಕಾರಾಂ, ಜಿಲ್ಲಾಧ್ಯಕ್ಷ ಜಿ.ಎಸ್‌. ಮಹ್ಮದ್‌, ಜಿಪಂ ಸದಸ್ಯ ಎ.ಮಾನಯ್ಯ, ಕಾರ್ಯದರ್ಶಿ ಕಾಂತಿನೋಹ ವಿಲ್ಸನ್‌, ಮುಖಂಡ ಪಿ.ಜಗನ್ನಾಥ್‌ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.