ರಾಜ್ಯಮಟ್ಟದ ಪಶು ಮೇಳಕ್ಕೆ ಸಂಭ್ರಮದ ತೆರೆ

ಗಮನ ಸೆಳೆದ ನಾನಾ ತಳಿಯ ಜಾನುವಾರುಗಳು ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ

Team Udayavani, Feb 10, 2020, 11:31 AM IST

10-February-5

ಬೀದರ: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ನಗರದ ಪಶು ವೈದ್ಯಕೀಯ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ ರಾಜ್ಯ ಮಟ್ಟದ ಪಶು ಮೇಳಕ್ಕೆ ರವಿವಾರ ತೆರೆ ಬಿದ್ದಿದೆ. ರೈತರ ಸ್ವಾವಲಂಬಿ ಬದುಕು ಮತ್ತು ಅಭ್ಯುದಯಕ್ಕಾಗಿ ಪಶು ಸಂಗೋಪನೆ ಎನ್ನುವ ಸಂದೇಶವನ್ನು ಅಕ್ಷರಶಃ ಜನಮನ ತಲುಪಿಸುವಲ್ಲಿ ಪಶು ಇಲಾಖೆ ಯಶಸ್ವಿಯಾಯಿತು.

ಜಾನುವಾರು ಸಾಕಾಣಿಕೆ, ನಿರ್ವಹಣೆ ಕುರಿತು ಮಾಹಿತಿ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಜಾನುವಾರ ಆರೋಗ್ಯಕ್ಕೆ ಸಂಬಂಧಿಸಿದಂತೆ ಔಷಧ, ಲಸಿಕೆ ಮತ್ತು ರೋಗ ಪತ್ತೆ ಸಾಧನೆಗಳ ಮಾಹಿತಿ, ಫಲ ಪುಷ್ಪ ಪ್ರದರ್ಶನ, ಪ್ರಗತಿಪರ ರೈತರಿಂದ ಚರ್ಚೆ, ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಸತತ ಮೂರು ದಿನಗಳ ಕಾಲ ನಡೆದವು. ಹೈನುರಾಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ ಕಾರ್ಯಕ್ರಮಗಳು ಕೂಡ ಪಶುಮೇಳದ ವಿಶೇಷ ಆಕರ್ಷಣೆಯಾಗಿದ್ದವು.

ಕಾರ್ಯಕ್ರಮದಲ್ಲಿ ನಾನಾ ತಳಿಯ ಜಾನುವಾರುಗಳು ರಾಜ್ಯದ ದೂರ ದೂರದ 30 ಜಿಲ್ಲೆಗಳಿಂದ ಆಗಮಿಸಿದ್ದವು. ಜೊತೆಗೆ ಪ್ರಗತಿಪರ ರೈತರು ಕೂಡ ಆಗಮಿಸಿದ್ದರು. ಅಲ್ಲದೇ 30 ಜಿಲ್ಲೆಗಳ ಪಶುವೈದ್ಯಾ ಧಿಕಾರಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೇಳಕ್ಕೆ ರಾಜ್ಯದ ವಿವಿಧೆಡೆಯಿಂದ ರೈತರು ಮತ್ತು ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು ವಿಶೇಷವಾಗಿತ್ತು.

ಪ್ರಾಣಿಗಳ ಮತ್ತು ವಾಣಿಜ್ಯ ಸ್ಟಾಲ್‌ಗ‌ಳು ಕೂಡ ಪಶುಮೇಳದ ವಿಶೇಷ ಆಕರ್ಷಣೆಯಾಗಿದ್ದವು. ಗೀರ್‌, ಹಳ್ಳಿಕಾರ್‌, ಜಾಪ್ರಾಬಾದಿ, ಬಿದ್ರಿ, ಕಿಲಾರಿ, ದೇವಣಿ, ಡ್ನೂರಾಕ್‌ ಸೇರಿದಂತೆ ಹತ್ತು ಹಲವು ತಳಿಯ ಆಕಳು, ಎತ್ತುಗಳು, ಮೇಕೆಗಳು, ಹಂದಿಗಳನ್ನು ಜನರು ಬೆರಗುಗಣ್ಣಿನಿಂದ ನೋಡುತ್ತಿದ್ದುದು ಸಾಮಾನ್ಯವಾಗಿತ್ತು. ಆಯಾ ತಳಿಯ ಸಂಕ್ಷಿಪ್ತ ಮಾಹಿತಿ ಮತ್ತು ಕರಪತ್ರಗಳಿಂದ ಜನತೆಗೆ ಜಾನುವಾರುಗಳ ಬಗ್ಗೆ ತಿಳಿಯಲು ಸಹಕಾರಿಯಾಯಿತು.

ಸಾಂಸ್ಕೃತಿಕ ಕಾರ್ಯಕ್ರಮ: ನಾಟ್ಯಶ್ರೀ ನೃತ್ಯಾಲಯದಿಂದ ಭರತನಾಟ್ಯ, ಗಂಗಾವತಿ ಪ್ರಾಣೇಶ ತಂಡದಿಂದ ಹಾಸ್ಯಸಂಜೆ, ಸವಿಗಾನ ಸಂಗೀತ ತಂಡದಿಂದ ಸುಗಮ ಸಂಗೀತ, ಕೋಗಳಿ ಕೊಟ್ರೇಶ ಅವರಿಂದ ಹಾಸ್ಯ ಕಾರ್ಯಕ್ರಮ, ಪ್ರಹ್ಲಾದ್‌ ಆಚಾರ್‌ ಅವರಿಂದ ನೆರಳು ಬೆಳಕು, ಡಾ| ಪದ್ಮಾನಂದ ಮತ್ತು ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮಗಳು ಸಾರ್ವಜನಿಕರ ಮನಸೂರೆಗೊಂಡವು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.