ಬಿಜೆಪಿ ಟೀಕಿಸುವ ನೈತಿಕತೆ ಕಾಂಗ್ರೆಸ್‌ಗಿಲ್ಲ

ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್‌ ಕಿಡಿನುಡಿ

Team Udayavani, Feb 9, 2020, 1:50 PM IST

09-February-17

ಬಳ್ಳಾರಿ: ಸಂಘಟನೆ ಕೊರತೆಯಿಂದಾಗಿ ವಿರೋಧ ಪಕ್ಷದಲ್ಲಿ ಕೂರಲು ನಾಲಾಯಕ್‌ ಆಗಿರುವ ಕಾಂಗ್ರೆಸ್‌ ಬಿಜೆಪಿ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ನೈತಿಕ ಹಕ್ಕನ್ನು ಕಳೆದುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಕುಟುಕಿದರು.

ನಗರದ ಬಸವ ಭವನದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅದೊಂದು ಕಾಲವಿತ್ತು. ದೇಶದಲ್ಲೆಲ್ಲಾ ಕಾಂಗ್ರೆಸ್‌ ಗೆಲುವು ಸಾಧಿಸುತ್ತಿತ್ತು. ಕಾಂಗ್ರೆಸ್‌ನಿಂದ ವಿದ್ಯುತ್‌ ಕಂಬವನ್ನು ನಿಲ್ಲಿಸಿದರೂ ಗೆಲ್ಲುತ್ತಿದ್ದರು ಎನ್ನಲಾಗುತ್ತಿತ್ತು. ಅಂದು ಬಿಜೆಪಿ ಪಕ್ಷ ಕೇವಲ 2 ಸಂಸದರನ್ನು ಮಾತ್ರ ಹೊಂದಿತ್ತು. ಆದರೆ ಇಂದು ಸಂಘಟನೆಯ ಕೊರತೆಯಿಂದಾಗಿ ಕಾಂಗ್ರೆಸ್‌ ದೇಶಾದ್ಯಂತ ಶಕ್ತಿ ಕಳೆದುಕೊಂಡಿದೆ.

ಸುಮಾರು 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತಿದ್ದ ಕಾಂಗ್ರೆಸ್‌ ಇಂದು ಕೇವಲ 40 ಸ್ಥಾನಗಳಿಗೆ ಕುಸಿದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲೂ ಅರ್ಹತೆ ಇಲ್ಲವಾಗಿದೆ. ಆದರೆ ಅಂದು ಕೇವಲ 2 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಸಂಘಟನೆ ಶಕ್ತಿಯಿಂದಾಗಿ ಇಂದು ದೇಶಾದ್ಯಂತ ಗೆಲುವು ಸಾಧಿಸಿದ್ದು, ಕೇಂದ್ರ, ರಾಜ್ಯ ಸರ್ಕಾರದಲ್ಲೂ ಅಧಿಕಾರಕ್ಕೆ ಬಂದಿದೆ. ಇಂಥ ಬಿಜೆಪಿ ಪಕ್ಷದ ಬಗ್ಗೆ ಮಾತನಾಡಲು ಕಾಂಗ್ರೆಸ್‌ನವರಿಗೆ ನೈತಿಕತೆ ಇಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಈಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲುತ್ತಿದ್ದಂತೆ ಕಾಂಗ್ರೆಸ್‌ ರಾಜ್ಯಾಧ್ಯಕ್ಷರು ತಮ್ಮ ಸ್ಥಾನಕ್ಕ ರಾಜೀನಾಮೆ ನೀಡಿದ್ದಾರೆ. ಕಳೆದ ಆರು ತಿಂಗಳಿಂದ ಆ ಸ್ಥಾನ ಖಾಲಿಯಿದ್ದು, ಒಬ್ಬ ರಾಜ್ಯಾಧ್ಯಕ್ಷರನ್ನು ನೇಮಿಸಲು ಕಾಂಗ್ರೆಸ್‌ ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ. ಅಂಥವರಿಗೆ ಬಿಜೆಪಿ ಪಕ್ಷದಲ್ಲಿನ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಸಿಎಂ ಯಡಿಯೂರಪ್ಪನವರು ಕೊಟ್ಟ ಮಾತಿನಂತೆ ಬಿಜೆಪಿ ಸರ್ಕಾರಕ್ಕೆ ಭದ್ರತೆ ಒದಗಿಸಿದ್ದ 10 ಜನರನ್ನು ಸಂಪುಟಕ್ಕೆ ಸೇರಿಸಿಕೊಂಡು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷರಾದವರು ಪಕ್ಷಕ್ಕೆ ತಂದೆ ಇದ್ದಂತೆ ಎಂದ ಕಟೀಲ್‌ ಅವರು, ಪಕ್ಷದ ಧ್ವಜವನ್ನು ಹೆಗಲ ಮೇಲೆ ಹೊತ್ತುಕೊಂಡು ಭಾವನೆಗಳನ್ನು ಹೃದಯದಲ್ಲಿ ಇರಿಸಿಕೊಂಡು ಪಕ್ಷವನ್ನು ಕಟ್ಟಬೇಕು. ವಿಜಯನಗರ ಸಾಮ್ರಾಜ್ಯದ ನೆಲೆ ಬೀಡು, ಮತ್ತು ಸುಷ್ಮಾಸ್ವರಾಜ್‌ ಸ್ಪರ್ಧೆಯಿಂದ ಬಳ್ಳಾರಿ ನನಗೆ ಇಷ್ಟ ಎಂದ ಅವರು, ಬರುವ ದಿನಗಳಲ್ಲಿ ಬಳ್ಳಾರಿಯಲ್ಲಿ ಮಂಗಳೂರಿಗಿಂತಲೂ ಪಕ್ಷವನ್ನು ಸಮರ್ಥವಾಗಿ ಕಟ್ಟಬೇಕು ಎಂದರು.

ಮುಂದಿನ ಗುರಿ: ನಮ್ಮ ಮುಂದಿನ ಗುರಿ ಗ್ರಾಮಪಂಚಾಯ್ತಿ, ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾಚಣೆಯಲ್ಲಿನ ಗೆಲುವು ಎಂದರು. ಈಗ ನಾವು ಅನುಕಂಪ, ಅಭಿವೃದ್ಧಿ, ನಾಯಕತ್ವದ ಮೇಲೆ ಚುನಾವಣೆ ಎದುರಿಸುವುದು ಅಲ್ಲ, ಸಂಘಟನೆಯ ಮೂಲಕ ಎಂದರು. ನಮ್ಮ ಪಕ್ಷ ಕೊಟ್ಟ ಮಾತನ್ನು ಈಡೇರಿಸಲಿದೆ ಎಂದು ಅದಕ್ಕೆ ಸಾಕ್ಷಿ ಹತ್ತು ಜನರಿಗೆ ಸಚಿವ ಸ್ಥಾನ ನೀಡಿದ್ದು ಎಂದ ಅವರು, ನಮ್ಮ ಪಕ್ಷದಲ್ಲಿ ಒಂದೇ ತಾಸಿನಲ್ಲಿ ರಾಜ್ಯಾಧ್ಯಕ್ಷರ ನೇಮಕ ಆಯ್ತು, ರಾಜ್ಯದ ಎಲ್ಲ ಜಿಲ್ಲೆಗಳಿಗೆ ಅಧ್ಯಕ್ಷರನ್ನು ಅಯ್ಕೆ ಮಾಡಲಾಗಿದೆ. ಆದರೆ ಕಾಂಗ್ರೆಸ್‌ಗೆ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲು ಸಹ ಅದು ಅಸಮರ್ಥವಾಗಿದೆಂದು ಟೀಕಿಸಿದರು.

ಭ್ರಷ್ಟಾಚಾರದ ಆರೋಪವಿಲ್ಲದ ಸರ್ಕಾರ ನಮ್ಮದು, ದೇಶದಲ್ಲಿ ಉಗ್ರರ ನೆಲೆ ಕಾಶ್ಮೀರದಲ್ಲಿ ಈಗ ಬಾಂಬ್‌ ಸದ್ದು ಕೇಳದಂತೆ ಮಾಡಿದ್ದೇವೆಂದರು. ಗಾಂಧಿಧೀಜಿ ಹೇಳಿದ್ದರು: ಪಾಕಿಸ್ತಾನದಲ್ಲಿ 23ರಷ್ಟಿದ್ದ ಹಿಂದುಗಳ ಸಂಖ್ಯೆ ಇಂದು ಕೇವಲ ಶೇ.3ಕ್ಕೆ ಇಳಿಕೆಯಾಗಿದೆ. ಪಾಕಿಸ್ತಾನದಲ್ಲಿ ಸಮಸ್ಯೆ ಎದುರಿಸುತ್ತಿದ್ದ ಹಿಂದುಳಿಗೆ ಭಾರತದಲ್ಲಿ ಪೌರತ್ವ ನೀಡಬೇಕು ಎಂದು ಗಾಂಧೀಜಿ ಹೇಳಿದ್ದರು. ಆ ಕೆಲಸವನ್ನು ಇಂದು ಬಿಜೆಪಿ ಮಾಡುತ್ತಿದೆ. ಗಾಂಧೀಜಿಯವರನ್ನು ಕಾಂಗ್ರೆಸ್‌ ಮತಕ್ಕಾಗಿ ಬಳಕೆ ಮಾಡಿಕೊಂಡಿದೆ. ಬಿಜೆಪಿ ಮುಸ್ಲಿಂ ವಿರೋಧಿಯಲ್ಲ. ಅಬ್ದುಲ್‌ ಕಲಾಂ ಅವರನ್ನು ಬಿಜೆಪಿ ಸರ್ಕಾರ ದೇಶದ ರಾಷ್ಟ್ರಪತಿಯನ್ನಾಗಿ ಮಾಡಿದೆ. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಈ ದೇಶದ ಯಾವೊಬ್ಬ ನಾಗರಿಕರಿಗೆ ಸಮಸ್ಯೆ ಇಲ್ಲ. ಅದರಲ್ಲೂ ಮುಸಲ್ಮಾನರಿಗೆ ಯಾವುದೇ ಸಮಸ್ಯೆಯಾಗಲ್ಲ. ಕಾಂಗ್ರೆಸ್‌ನವರು ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅದನ್ನು ನಂಬಬಾರದು. ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಇರುವುದು ಸಹಜ. ನಿಮ್ಮ ಅಸಮಾಧಾನಗಳಿದ್ದರೆ ರಸ್ತೆಯಲ್ಲಿ ಮಾತನಾಡದೆ ನೇರವಾಗಿ ನಮಗೆ ಬಂದು ತಿಳಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಇದಕ್ಕೂ ಮುನ್ನ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾದ ಚನ್ನಬಸವನಗೌಡರಿಗೆ ಬಿಜೆಪಿ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎರಡನೇ ಬಾರಿಗೆ ಪದಗ್ರಹಣ ಮಾಡಿದ ಚೆನ್ನಬಸನಗೌಡ ಪಾಟೀಲ್‌ ಮಾತನಾಡಿ, ಕಳೆದ 30 ತಿಂಗಳ ಅವಧಿಯಲ್ಲಿ ಪಕ್ಷವನ್ನು ಜಿಲ್ಲೆಯಲ್ಲಿ ಸಮರ್ಥವಾಗಿ ಸಂಘಟಿಸಲು ಎಲ್ಲರೂ ನೀಡಿದ ಸಹಕಾರ ಸ್ಮರಣೀಯವಾಗಿದೆ ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ರಾಮಲಿಂಗಪ್ಪ ಮಾತನಾಡಿ, ಕಳೆದೆರಡು ತಿಂಗಳಿಂದ ಪಕ್ಷದ ಜಿಲ್ಲಾ ಅಧ್ಯಕ್ಷ ಸ್ಥಾನದ ನೇಮಕದ ಕುರಿತು ಇದ್ದ ಸುದ್ದಿಗೆ ತೆರೆ ಬಿದ್ದಿದೆ. ಹಣ ಬಲ, ತೋಳ್ಬಲಕ್ಕೆ ಪಕ್ಷ ಮಣಿಯಲ್ಲ. ನಾನೂ ಜಿಲ್ಲಾಧ್ಯಕ್ಷ ಆಗಬೇಕೆಂದು ಬಯಸಿದ್ದೆ ಆದರೆ, ಪಕ್ಷ ತೀರ್ಮಾನಿಸಿದ್ದನ್ನು ನಾನು ಸದಾ ಸ್ವಾಗತಿಸುವೆ. ಜಿಲ್ಲಾ, ತಾಲೂಕು, ಪದಾಧಿಕಾರಿಗಳ, ಕಾರ್ಯಕರ್ತರನ್ನು ಪಕ್ಷ ಗುರುತಿಸಲಿದೆ ಎಂದರು.

ಹರಪನಹಳ್ಳಿ ಶಾಸಕ ಜಿ. ಕರುಣಾಕರೆಡ್ಡಿ, ಸಂಸದ ವೈ. ದೇವೇಂದ್ರಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‌ ಕುಮಾರ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್‌ ತೆಂಗಿನಕಾಯಿ, ಅಶೋಕ್‌ ಗಸ್ತಿ, ಮಾಜಿ ಶಾಸಕರಾದ ಚಂದ್ರನಾಯ್ಕ, ನೇಮಿರಾಜ್‌ ನಾಯ್ಕ, ಜಿಪಂ ಉಪಾಧ್ಯಕ್ಷೆ ದೀನಾ ಮಂಜುನಾಥ್‌, ಪಕ್ಷದ ಮುಖಂಡರುಗಳಾದ ಡಾ| ಮಹಿಪಾಲ್‌, ಎಸ್‌. ಗುರುಲಿಂಗನಗೌಡ, ಮುರಹರಿಗೌಡ, ಗುತ್ತಿಗನೂರು ವಿರುಪಾಕ್ಷಗೌಡ, ಗೋನಾಳ್‌ ರಾಜಶೇಖರ ಗೌಡ, ಎಚ್‌. ಹನುಮಂತಪ್ಪ, ಬಿ. ಶಿವಕುಮಾರ್‌, ಮೋತ್ಕರ್‌ ಶ್ರೀನಿವಾಸ್‌, ವೀರಶೇಖರ ರೆಡ್ಡಿ, ಓಬಳೇಶ್‌, ಎ.ಎಂ. ಸಂಜಯ್‌, ಅನಿಲ್‌ ನಾಯ್ಡು, ಶ್ರೀನಿವಾಸ್‌ ಪಾಟೀಲ್‌ ಇತರರಿದ್ದರು.

ಶಾಸಕರು ಗೈರು: ಶಾಸಕರಾದ ಸೋಮಲಿಂಗಪ್ಪ, ಸೋಮಶೇಖರ ರೆಡ್ಡಿ, ಗೋಪಾಲಕೃಷ್ಣ, ಸಚಿವ ಆನಂದ್‌ ಸಿಂಗ್‌, ಮಾಜಿ ಸಂಸದರಾದ ಸಣ್ಣ ಪಕ್ಕೀರಪ್ಪ ಮೊದಲಾದವರು ಸಮಾರಂಭಕ್ಕೆ ಗೈರಾಗಿದ್ದರು.

ಟಾಪ್ ನ್ಯೂಸ್

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

2

Theft Case: ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.