Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ


Team Udayavani, Oct 17, 2024, 12:06 PM IST

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

ಬಳ್ಳಾರಿ: ವಾಲ್ಮೀಕಿ ಜನಾಂಗದ ಅಭಿವೃದ್ಧಿಗಾಗಿ ಹಾಗು ಏಳ್ಗೆಗೆ ಮಾಜಿ ಸಿಎಂ ಯಡಿಯೂರಪ್ಪ ನವರು ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದರು. ಅಂತಹ ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಬಳ್ಳಾರಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗೇಂದ್ರ ಬಿಡುಗಡೆ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರಗಳನ್ನು ಬೀಳಿಸಲು ನಮ್ಮನ್ನು ಬಂಧಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ಮಾತು ಕೇಳಿ ಇಡೀ ಬಳ್ಳಾರಿ ಜನ ನಗುವ ಪರಿಸ್ಥಿತಿ ಬಂದಿದೆ. 2011 ಸೆಪ್ಟಂಬರ್ ನಲ್ಲಿ ನನ್ನನ್ನು ಜೈಲಿಗೆ ಹಾಕಿದ್ದು ಯುಪಿಎ ಸರ್ಕಾರ. 2012 ರಲ್ಲಿ ನಾಗೇಂದ್ರ ಬಂಧನವಾದರು. ಆಗ ಯಾವ ಸರ್ಕಾರ ಇತ್ತು, ಯುಪಿಎ ಸರ್ಕಾರ ಇರಲಿಲ್ಲವೇ? ಎಂದು ರೆಡ್ಡಿ ಪ್ರಶ್ನಿಸಿದರು.

2012 ರಲ್ಲಿ ಆನಂದ್ ಸಿಂಗ್, ಸುರೇಶ್ ಬಾಬು, ನಾಗೇಂದ್ರ, ಸತೀಶ್ ಶೈಲ್ ಸೇರಿ ಐದು ಶಾಸಕರನ್ನು ಬಂಧಿಸಲಾಯಿತು. ನಾಗೇಂದ್ರ ಬಂಧನಾವಾದಾಗ ಯುಪಿಎ ಸರ್ಕಾರವಿತ್ತು, ಆಗ ನಾಗೇಂದ್ರ ಎರಡು ವರ್ಷ ಜೈಲಿನಲ್ಲಿದ್ದರು. ಹೀಗಾಗಿ ಹಿಂದೆ ಯುಪಿಎ ಸರ್ಕಾರ ಬಂಧನ ಮಾಡಿದ್ದನ್ನು ನಾಗೇಂದ್ರ ಮರೆಯಬಾರದು. ಈ ರೀತಿ ಹುಚ್ಚುಚ್ಚಾಗಿ ಮಾತಾಡಬಾರದು, ಮಾತಾಡಿದರೆ ನಾನು ಜನತೆ ಮುಂದೆ ಎಲ್ಲವನ್ನೂ ಬಿಚ್ವಿಡುವೆ ಎಂದು ರೆಡ್ಡಿ ಹೇಳಿದರು.

ನಾಗೇಂದ್ರ ಮೇಲೆ ದೊಡ್ಡ ದೊಡ್ಡ ಆರೋಪವಿದೆ ಎಂದು ಚಾರ್ಜ್ ಶೀಟ್ ನೋಡಿದರೆ ಗೊತ್ತಾಗ್ತದೆ. ಬಿಜೆಪಿ ಮೇಲೆ ಗೂಬೆ ಕೂರಿಸಿ ಹೀರೊಯಿಸಂ ತೋರಿಸೋಕೆ ಹೋಗಬೇಡಿ. ವಾಲ್ಮೀಕಿ ನಿಗಮದ ಹಣವನ್ನು ವೈಯಕ್ತಿಕವಾಗಿ ಬಳಿಸಿದ್ದಾರೆ. ವಿಮಾನ ಪ್ರಯಾಣ, ಪೆಟ್ರೋಲ್ ಡಿಸೆಲ್, ಮನೆ ವಿದ್ಯುತ್ ಬಿಲ್, ಲ್ಯಾಂಬರ್ಗಿನಿ ಕಾರ್ ಗೆ ತೆಗೆದುಕೊಂಡಿದ್ದರು. ಸಾಕ್ಷಿ ಸಮೇತ, ಬ್ಯಾಂಕ್ ನವರು ದಾಖಲೆ ಮುಂದಿಟ್ಟುಕೊಂಡು ಸೀಜ್ ಮಾಡಲಾಗಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕೊಪ್ಪಳ ರಾಯಚೂರಿಗೆ ಖರ್ಚು ಮಾಡಿದ್ದಾರೆ. 14 ಕೋಟಿಗೂ ಹೆಚ್ಚು ಹಣವನ್ನು ಬಳ್ಳಾರಿಯ ಮೂವರು ಶಾಸಕರಿಗೆ ಹಣ ಹಂಚಲು ಕೊಟ್ಟಿದ್ದಾರೆ. ಶಾಸಕರಾದ ನಾರಾ ಭರತ್ ರೆಡ್ಡಿ, ಗಣೇಶ್, ಎನ್.ಟಿ. ಶ್ರೀನಿವಾಸ್ ಗೆ 14 ಕೋಟಿಗೂ ಹೆಚ್ಚು ಹಣ ಹಂಚಲು ಕೊಟ್ಟಿದ್ದಾರೆ‌ ಒಬ್ಬೊಬ್ಬ ಕಾರ್ಯಕರ್ತರಿಗೆ ತಲಾ ಹತ್ತು ಸಾವಿರ ಕೊಟ್ಟಿದ್ದಾರೆ. ತೆಲಂಗಣದಲ್ಲೂ ನಮ್ಮ ವಾಲ್ಮಿಕಿ ನಿಗಮದ ಹಣ ಖರ್ಚಾಗಿದೆ. 20.19 ಕೋಟಿ ಹಾಗೂ ನಾಲ್ಕು ಕೋಟಿ ಮದ್ಯ ಖರೀದಿ, 50 ಲಕ್ಷ ಓಡಾಟಕ್ಕೆ ಖರ್ಚು ಮಾಡಿದ್ದಾರೆ. ಇದೆಲ್ಲವೂ ಇಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ. ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಭ್ರಷ್ಟ ಸರ್ಕಾರವಾಗಿದೆ. ಇದು ಬ್ಯಾಂಕ್ ಮಾಡಿರೋ ಹಗರಣ ಎಂದು ನಾಗೇಂದ್ರ ನಾಚಿಕೆಗೇಡಿನ ಹೇಳಿಕೆ ಕೊಟ್ಟಿದ್ದಾರೆ. ಇಡಿ ತನಿಖೆ ಇನ್ನೂ ಮುಗಿದಿಲ್ಲ, ಇನ್ನೂ ಆಳ ತನಿಖೆ ಮಾಡಲಿದ್ದಾರೆ ಎಂದರು.

ನಾಳೆ (ಅ.18) ಸಂಡೂರಿನಲ್ಲಿ ಮನೆ ಗೃಹ ಪ್ರವೇಶ ನಡೆಯಲಿದೆ. ನಾಳೆಯಿಂದ ಚುನಾವಣೆ ಕೆಲಸ ಶುರುವಾಗುತ್ತದೆ. ನನಗೂ ಒಂದು ಜವಾಬ್ದಾರಿ ಇದೆ, ಅದನ್ನ ನಾನು ನಿಭಾಯಿಸುವೆ ಎಂದರು.

ಜನಾರ್ದನ ರೆಡ್ಡಿ ನಾಗೇಂದ್ರ ಅವರಿಂದ ಸಂಡೂರು ಹೈ ವೋಲ್ಟೇಜ್ ಅಗುತ್ತಿದೆಯಾ ಎಂಬ ಪ್ರಶ್ನೆಗೆ ನಾಗೇಂದ್ರನಲ್ಲಿ ಈಗಾಗಲೇ ಹೈ ಓಲ್ಟೇಜ್ ಇದೆ. ಚುನಾವಣೆ ಕಣವನ್ನು ಅವರೇನು ಹೈವೋಲ್ಟೇಜ್ ಮಾಡುವುದು ಬೇಡ. ಈಗ ಅವರಲ್ಲಿರುವ ವೋಲ್ಟೆಜ್ ಇನ್ನೂ ಹೆಚ್ಚಾಗಿ ಬ್ಲಾಸ್ಟ್ ಆಗದಿದ್ದರೆ ಸಾಕು ಎಂದು ಜನಾರ್ದನ ರೆಡ್ಡಿ ಲೇವಡಿ ಮಾಡಿದರು.

ಟಾಪ್ ನ್ಯೂಸ್

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

6(1)

Kinnigoli: ಮೂರು ಕಾವೇರಿ ಜಂಕ್ಷನ್‌ನಲ್ಲೇ ಬೃಹತ್‌ ಟ್ಯಾಂಕ್‌!

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.