![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 14, 2020, 12:42 PM IST
ಬಳ್ಳಾರಿ: ವುಂಕಿ ಮರಿಸಿದ್ದಮ್ಮ ಪ್ರೌಢಶಾಲೆಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಎಸ್ಸೆಸ್ಸೆಲ್ಸಿ ಅಣಕು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಬಳ್ಳಾರಿ: ನಗರದ ಬಸವೇಶ್ವರ ನಗರದಲ್ಲಿನ ವುಂಕಿ ಮರಿಸಿದ್ದಮ್ಮ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಅಣಕು ಪ್ರದರ್ಶನ ಶನಿವಾರ ನಡೆಯಿತು.
ಕಳೆದ ಮಾರ್ಚ್ ತಿಂಗಳಲ್ಲೇ ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳನ್ನು ಕೋವಿಡ್ ಸೋಂಕು ಆವರಿಸಿದ ಕಾರಣ ಪರೀಕ್ಷೆಯನ್ನು ರಾಜ್ಯ ಸರ್ಕಾರ ಮುಂದೂಡಿತ್ತು. ಇದೀಗ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ದಿನಾಂಕ ನಿಗದಿಪಡಿಸಿದ್ದು, ಜೂ.25ರಿಂದ ಜು.4ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಹೊಸ ರೀತಿ ನೀತಿಗಳ ಕುರಿತು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶಿಕ್ಷಣ ಇಲಾಖೆ ಪ್ರಾಯೋಗಿಕವಾಗಿ ಅಣಕು ಪರೀಕ್ಷೆ ಆಯೋಜಿಸಿದೆ ಎಂದು ಪರೀಕ್ಷೆಯ ಮೇಲ್ವಿಚಾರಕ ಜೆ.ಎಸ್.ಮನೋಹರ್ ತಿಳಿಸಿದ್ದಾರೆ.
ಅಣಕು ಪರೀಕ್ಷೆಯಲ್ಲಿ ಒಟ್ಟು 20 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೇಂದ್ರದ ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಈ ಅಣಕು ಪರೀಕ್ಷೆ ನಡೆಯಿತು. ವಿದ್ಯಾರ್ಥಿಗಳ ಜ್ವರ ತಪಾಸಣೆ, ಮಾಸ್ಕ್ ವಿತರಣೆ, ಕೈಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಿ ಕೊಠಡಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಯಿತು. ಕೊಠಡಿ ಮೇಲ್ವಿಚಾರಕರು ಮಾಸ್ಕ್ ಮತ್ತು ಗ್ಲೌಸ್ ಧರಿಸಿಯೇ ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳನ್ನು ವಿತರಿಸಿದರು.
ಅರ್ಧ ಗಂಟೆ ಕಾಲ ಪರೀಕ್ಷೆ ನಡೆಯಿತು. ಅಣಕು ಪರೀಕ್ಷೆ ಪ್ರಕ್ರಿಯೆ ಚಿತ್ರೀಕರಿಸಿದ್ದು, ಕೋವಿಡ್ ನಿಯಂತ್ರಣ ಕ್ರಮ ಕೈಗೊಳ್ಳುತ್ತಲೇ ಪರೀಕ್ಷೆ ಎದುರಿಸುವ ಬಗೆಯ ಕುರಿತು ಅಣಕು ಪರೀಕ್ಷೆಯ ವೀಡಿಯೋ ಜನರಲ್ಲಿ ಜಾಗೃತಿ ಮೂಡಿಸಲಿದೆಂದು ಅಣಕು ಪರೀಕ್ಷೆ ಮೇಲ್ವಿಚಾರಕರು ವಿವರಿಸಿದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.