ವಸ್ತು ಸಂಗ್ರಹಾಲಯಕ್ಕೆ ಬ್ರೂಸ್‌ಫೂಟ್‌ ಹೆಸರಿಡಲು ತೀರ್ಮಾನ

ಸಂಗನಕಲ್ಲು ಬೆಟ್ಟಗಳಲ್ಲಿ ದೊರೆತ ವಸ್ತುಗಳ ಸಂಗ್ರಹ

Team Udayavani, Jan 25, 2020, 12:36 PM IST

25-January-9

ಬಳ್ಳಾರಿ: ತಾಲೂಕಿನ ಸಂಗನಕಲ್ಲು ಬೆಟ್ಟಗಳಲ್ಲಿ ದೊರೆತ ವಸ್ತುಗಳು ಸೇರಿದಂತೆ ಪ್ರಾಗೈತಿಹಾಸದ ಅಪೂರ್ವ ವಸ್ತುಗಳನ್ನು ಇಲ್ಲಿನ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣದ ಕಲಾ ಪ್ರದರ್ಶನಾಲಯದಲ್ಲಿ ಸಂಗ್ರಹಿಸಿಡಲಾಗಿದ್ದು, ಇದಕ್ಕೆ ರಾಬರ್ಟ್‌ ಬ್ರೂಸ್‌ಫೂಟ್‌ ಸಂಗನಕಲ್ಲು ಪ್ರಾಚ್ಯವಸ್ತು ಸಂಗ್ರಹಾಲಯವೆಂದು ಹೆಸರಿಡಲು ತೀರ್ಮಾನಿಸಲಾಗಿದೆ.

ಜಿಲ್ಲೆಯ ಕೆಲವು ಪ್ರದೇಶಗಳು ಪ್ರಾಗೈತಿಹಾಸಿಕ ಕಾಲದ ನೆಲೆಗಳಾಗಿದ್ದವು. ಸಂಗನಕಲ್ಲು
ಬೆಟ್ಟಗಳಲ್ಲಿ ದೊರೆತ ವಸ್ತುಗಳು ಸೇರಿದಂತೆ ಪ್ರಾಗೈತಿಹಾಸದ ಅಪೂರ್ವ ವಸ್ತುಗಳನ್ನು ಈ ಸಂಗ್ರಹಾಲಯದಲ್ಲಿಡಲಾಗಿದೆ. ಇದರ ಅಭಿವೃದ್ಧಿಗೆ ಸಂಬಂಧಿ ಸಿದ ಕಾರ್ಯಗಳು ಈಗಾಗಲೇ ಕೈಗೊಳ್ಳಲಾಗಿದೆ. ತಾಲೂಕಿನ ಸಂಗನಕಲ್ಲು ಗ್ರಾಮದ ಬಳಿಯ ಬೆಟ್ಟಗಳು ಪ್ರಾಚೀನ ಮಾನವನ ವಾಸದ ಕುರುಹುಗಳನ್ನು ಹೊಂದಿವೆ. ಒಂದು ಸಾವಿರ ಎಕರೆ ಪ್ರದೇಶದಲ್ಲಿರುವ ಬೆಟ್ಟಗಳು ಐದು ಸಾವಿರ ವರ್ಷಗಳ ಹಿಂದಿನ ಇತಿಹಾಸ ಹೇಳುತ್ತವೆ.

ಈ ಬೆಟ್ಟಗಳಲ್ಲಿ ನವಶಿಲಾಯುಗದಿಂದ ಕಬ್ಬಿಣದ ಯುಗದವರೆಗಿನ ಮನುಷ್ಯ ನೆಲೆಯ ಅವಶೇಷಗಳಿವೆ. ಶಿಲಾ ಉಪಕರಣಗಳು, ಮಡಕೆಗಳು, ಉತ್ಖನದ ವೇಳೆ ದೊರೆತ ಇತ್ಯಾದಿ ವಸ್ತುಗಳನ್ನು ನಗರದ ಸಾಂಸ್ಕೃತಿಕ ಸಮುತ್ಛಯ ಆವರಣದಲ್ಲಿರುವ ಕಲಾ ಪ್ರದರ್ಶನಾಲಯ ಕಟ್ಟಡದಲ್ಲಿ ಸಂಗ್ರಹಿಸಿಡಲಾಗಿದೆ. ಮ್ಯೂಜಿಯಂ ಕೆಳಮಹಡಿಯಲ್ಲಿ ಮಾನವನ ಜೈವಿಕ, ಸಾಂಸ್ಕೃತಿಕ ವಿಕಸನ ಹಾಗೂ ಆದಿಮಾನವ ಮೂಲ ನೆಲೆಯಾದ ಆಫ್ರಿಕಾದಿಂದ ಜಗತ್ತಿನ ಇತರ ಭೂ ಭಾಗಕ್ಕೆ ವಲಸೆ ಹೋದ ಎಂಬುದರ ಮಾಹಿತಿ ಇದೆ. ಆದಿ ಮಾನವನ ವಿಕಸನದ ವಿವಿಧ ಹಂತಗಳ ಬುರಡೆ ಮಾದರಿಯ ಪ್ರತಿರೂಪಗಳಿವೆ. ಭಾರತದ ಪ್ರಾಚೀನತೆ, ಸಾಂಸ್ಕೃತಿಕ ಬೆಳವಣಿಗೆ, ಶಿಲಾಯುಗದ ವಿವಿಧ ಹಂತಗಳು ಹಾಗೂ ಕೃಷಿ ಜೀವನದ ಆರಂಭದವರೆಗಿನ ಬೆಳವಣಿಗೆಗಳ ಇತಿಹಾಸವನ್ನು ಮ್ಯೂಜಿಯಂನಲ್ಲಿ ನೋಡಬಹುದಾಗಿದೆ. ಉತ್ತರ ಕರ್ನಾಟಕ ಹಾಗೂ ಆಂಧ್ರದ ರಾಯಲಸೀಮಾ ಭಾಗದಲ್ಲಿ ದೊರೆತಿರುವ ಪ್ರಾಗೈತಿಕಹಾಸದ ವಸ್ತುಗಳು ಮ್ಯೂಜಿಯಂನಲ್ಲಿಡಲಾಗಿದೆ.

ಬ್ರೂಸ್‌ಫೂಟ್‌ ಹೆಸರು ನಾಮಕರಣ: ದೇಶದಲ್ಲಿ ಆದಿಮಾನವನ ನೆಲೆಗಳನ್ನು ಗುರುತಿಸಿದ ಮೊದಲ ವ್ಯಕ್ತಿ ರಾಬರ್ಟ್‌ ಬ್ರೂಸ್‌ಫೂಟ್‌. ಸಂಗನಕಲ್ಲು ನವಶಿಲಾಯುಗದ ಕುರಿತು ಅಧ್ಯಯನ ಮಾಡಿದ, ಬಳ್ಳಾರಿ, ಚಿತ್ರದುರ್ಗ ಭಾಗದಲ್ಲಿ ಪೂರ್ವ ಶಿಲಾಯುಗದ ಸ್ಥಳಗಳನ್ನು ಗುರುತಿಸಿದ, ಹಸುವಿನ ಸಗಣಿಯ ರಾಶಿಯಿಂದ ಸುಟ್ಟು ನಿರ್ಮಿಸಲಾಗಿರುವ ಬೂದಿ ದಿಬ್ಬಗಳು ನವಶಿಲಾಯುಗದ ಸಂಸ್ಕೃತಿ ಪ್ರತೀಕವಾಗಿವೆ ಎಂದು ಪ್ರತಿಪಾದಿಸಿದ ಮೊದಲ ವ್ಯಕ್ತಿಯೂ ಅವರು ಈ ಹಿನ್ನೆಲೆಯಲ್ಲಿ ರಾಬರ್ಟ್‌ ಬ್ರೂಸಫೂಟ್‌ ಸಂಗನಕಲ್ಲು ಪ್ರಾಚ್ಯವಸ್ತು ಸಂಗ್ರಹಾಲಯ ಎಂದು ಹೆಸರಿಡಲು ಮ್ಯೂಜಿಯಂ ಸಮಿತಿ ತೀರ್ಮಾನಿಸಲಾಗಿದೆ.

ಟಾಪ್ ನ್ಯೂಸ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

1-sp

Ballari: ನೂತನ ಎಸ್ ಪಿಯಾಗಿ ಶೋಭಾ ರಾಣಿ ನೇಮಕ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.