ಬಳ್ಳಾರಿ: ವಿರೋಧ ಲೆಕ್ಕಿಸದೇ ದೇವದಾರಿ ಗಣಿಗೆ ಅನುಮತಿ!


Team Udayavani, Jun 19, 2024, 3:21 PM IST

ಬಳ್ಳಾರಿ: ವಿರೋಧ ಲೆಕ್ಕಿಸದೇ ದೇವದಾರಿ ಗಣಿಗೆ ಅನುಮತಿ!

ಉದಯವಾಣಿ ಸಮಾಚಾರ
ಬಳ್ಳಾರಿ: ಅಪರೂಪದ ಸಸ್ಯ ಹಾಗೂ ಜೀವಸಂಕುಲಗಳಿರುವ ಸಂಡೂರಿನ ದೇವದಾರಿ ಪ್ರದೇಶದಲ್ಲಿ ಕುದುರೆಮುಖ (ಕೆಐಒಸಿಎಲ್‌) ಕಂಪನಿಗೆ ಗಣಿಗಾರಿಕೆಗೆ ಅನುಮತಿ ನೀಡುವಾಗ ಅರಣ್ಯ ಇಲಾಖೆ ವಿರೋಧದ ವರದಿಯನ್ನು
ಮರೆ ಮಾಚಿರುವುದು ಸ್ಥಳೀಯ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದೆ.

ಈ ದೇವದಾರಿ ಪ್ರದೇಶ ಕುಮಾರಸ್ವಾಮಿ ದೇವ ಸ್ಥಾನಕ್ಕೆ ಎರಡೂವರೆ ಕಿ.ಮೀ. ದೂರ ದಲ್ಲಿದೆ. ಅದಕ್ಕೆ ಹೊಂದಿಕೊಂಡು ಈಗಾಗಲೇ ವಿ.ಎಸ್‌. ಲಾಡ್‌, ಎನ್‌ಎಂಡಿಸಿ ಗಣಿಗಾರಿಕೆಗಳಿವೆ. ಈ ಹಿಂದೆ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಸಂಡೂರಿನ ಕುಮಾರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಹಾಲಿ ಕೇಂದ್ರ ಉಕ್ಕು ಸಚಿವ ಎಚ್‌.ಡಿ. ಕುಮಾರಸ್ವಾಮಿ, ಈ ದೇವಸ್ಥಾನದಿಂದ ಮೂರು ಕಿ.ಮೀ. ವ್ಯಾಪ್ತಿ ಪ್ರದೇಶದಲ್ಲಿ ಗಣಿಗಾರಿಕೆಗೆ ನಿಷೇಧ ಹೇರುವುದಾಗಿ ಮಾತುಕೊಟ್ಟಿದ್ದರು ಎನ್ನಲಾಗಿದೆ.

ಸಿಎಂ ಆದಾಗ ಅನುಮತಿ ನೀಡಿರಲಿಲ್ಲ: ಈ ಹಿಂದೆ ನಡೆದ ಅಕ್ರಮ ಗಣಿಗಾರಿಕೆಯಿಂದಾಗಿ ಸಂಡೂರಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ. ಸುಮಾರು 500 ಹೆಕ್ಟೇರ್‌ನಷ್ಟು ಗಣಿಪ್ರದೇಶ ಖಾಲಿ ಬಿದ್ದಿದ್ದು, ಅಲ್ಲಿ ಗಣಿಗಾರಿಕೆಗೆ ಅನುಮತಿ ನೀಡಬಹುದಿತ್ತು. ಆದರೆ, ಹಿಂದೆ ಕುಮಾರಸ್ವಾಮಿಯವರೇ ಎರಡು ಬಾರಿ ಸಿಎಂ ಆಗಿದ್ದಾಗ ಅನುಮತಿ ನೀಡದೇ ಈಗ ಕೇಂದ್ರ ಸಚಿವರಾಗುತ್ತಿದ್ದಂತೆ ಕಡತಕ್ಕೆ ಸಹಿ ಹಾಕಲು ಏನು ಕಾರಣ ಎಂಬುದು ಸ್ಥಳೀಯ ಹೋರಾಟಗಾರ ಶ್ರೀಶೈಲ ಆಲ್ದಳ್ಳಿ ಸೇರಿ ಹಲವರ ಪ್ರಶ್ನೆಯಾಗಿದೆ.

ವರದಿ ಮರೆಮಾಚಿದ ಸರ್ಕಾರ: ರಾಜ್ಯ ಸರ್ಕಾರ ದೇವದಾರಿ ಗಣಿ ಪ್ರದೇಶ 482.36
ಹೆಕ್ಟೇರ್‌ ವ್ಯಾಪ್ತಿಯನ್ನು ಕೆಐಒಸಿಎಲ್‌ ಕಂಪನಿಗೆ
ಮೀಸಲಿಟ್ಟು 2017ರಲ್ಲಿ ಅ ಧಿಸೂಚನೆ ಹೊರಡಿಸಿತ್ತು. ಭಾರತದಲ್ಲೇ ಅತ್ಯಂತ ಅಪರೂಪದ ಸಸ್ಯ, ಜೀವ ಸಂಕುಲಗಳಿರುವ ಈ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಅಂದಿನ ಅರಣ್ಯಾಧಿಕಾರಿಗಳು ವಿಸ್ತೃತ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ವರದಿಯನ್ನು ರಾಜ್ಯ ಸರ್ಕಾರ, ಕೇಂದ್ರಕ್ಕೆ ಕಳುಹಿಸಿದೆಯಾ? ಇಲ್ಲವೇ? ಅಥವಾ ಎಲ್ಲಿದೆ ಎಂಬುದು ತಿಳಿಯುತ್ತಿಲ್ಲ. ಒಂದು ವೇಳೆ ರಾಜ್ಯ ಸರ್ಕಾರ ವರದಿಯನ್ನು ಕೇಂದ್ರಕ್ಕೆ ಕಳುಹಿಸಿದ್ದರೆ,  ಕೇಂದ್ರದ ಸಚಿವಾಲಯದಲ್ಲಿ ವರ್ಷ ದಿಂದ ಬಾಕಿಯಿದ್ದ ಕಡತ ತಿರಸ್ಕರಿಸಲಾಗು ತ್ತಿತ್ತು. ಇದೀಗ ಸಚಿ ವರು ಸಹಿ ಹಾಕಿದ್ದಾರೆ ಎಂದರೆ ಅರಣ್ಯ ಅ ಧಿಕಾರಿ ಗಳು ನೀಡಿದ್ದ ವರದಿ ಎಲ್ಲಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿ ಸ ಬೇಕೆಂಬುದು
ಹೋರಾಟಗಾರರ ಒತ್ತಾಯ.

ದೇವದಾರಿ ಪ್ರದೇಶದಲ್ಲಿ ಅಪರೂಪದ ಮರಗಳು
ಸಂಡೂರಿನ ದೇವದಾರಿ ಗಣಿಪ್ರದೇಶದಲ್ಲಿ ಗಣಿಗಾರಿಕೆಯಿಂದ 99 ಸಾವಿರದಷ್ಟು ಮರಗಳಿಗೆ ಕೊಡಲಿಪೆಟ್ಟು ಬೀಳಲಿದೆ. ಈ
ಪ್ರದೇಶದಲ್ಲಿ ಅಪರೂಪದ ಮರಗಳಿವೆ. ಅದೇ ರೀತಿ ಈ ಪ್ರದೇಶದಲ್ಲಿ ಹಲವಾರು ವನ್ಯಜೀ ವಿ ಸಂಕುಲಗಳಿವೆ. ಈ ಕಾಡಿ
ನೊಂದಿಗೆ ಹೊಂದಿಕೊಂಡು ಜೀವಿಸುತ್ತಿರುವ ಜನರಿಗೆ, ಜೀವಿಗಳಿಗೆ ಗಣಿಗಾರಿಕೆ, ಅರಣ್ಯ \ನಾಶವಾಗಿ ದೀರ್ಘ‌ಕಾಲಿಕ ಕಾಯಿಲೆಗಳು
ಬರುವ ಸಾಧ್ಯತೆಯೂ ಇದೆ. ಹೀಗಾಗಿ ಗಣಿಗಾರಿಕೆಗೆ ಅನುಮತಿ ನೀಡದಂತೆ ಅರಣ್ಯ ಅಧಿ ಕಾರಿಗಳು ಸರ್ಕಾರಕ್ಕೆ ಸಲ್ಲಿಸಿದ್ದ ವರದಿ
ಯಲ್ಲಿ ಉಲ್ಲೇಖೀಸಿದ್ದರು. ಆದರೆ, ಈ ವರದಿ ಪರಿಗಣಿಸದೇ ಸಚಿವ ಎಚ್‌. ಡಿ.ಕುಮಾರ ಸ್ವಾಮಿ ಅವರು ಗಣಿಗಾ ರಿಕೆ ಕಡತಕ್ಕೆ ಸಹಿ
ಹಾಕಿರುವುದು ಕುತೂಹಲಕ್ಕೆ ಕಾರಣವಾಗಿದೆ.

*ವೆಂಕೋಬಿ ಸಂಗನಕಲು

ಟಾಪ್ ನ್ಯೂಸ್

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqewqe

Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

Siraguppa: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ

Siraguppa: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.