ಮೇ 3ರ ವರೆಗೆ ಲಾಕ್‌ಡೌನ್‌ ಸಡಿಲಿಕೆ ಬೇಡ

ಯಥಾಸ್ಥಿತಿ ಮುಂದುವರಿಸಲು ಶಾಸಕ ರೆಡ್ಡಿ ಮನವಿ |ರೇಷನ್‌ ಕಿಟ್‌ ವಿತರಣೆಗೆ ಚಾಲನೆ

Team Udayavani, Apr 20, 2020, 12:15 PM IST

20-April-09

ಬಳ್ಳಾರಿ: ಮಾರ್ಕಂಡೇಯ ದೇವಸ್ಥಾನದ ಆವರಣದಲ್ಲಿ ಶಾಸಕ ಸೋಮಶೇಖರ ರೆಡ್ಡಿ ರೇಷನ್‌ ಕಿಟ್‌ಗಳನ್ನು ವಿತರಿಸಿದರು.

ಬಳ್ಳಾರಿ: ಕೋವಿಡ್ ವೈರಸ್‌ ನಿಯಂತ್ರಿಸುವ ಸಲುವಾಗಿ ಜಾರಿಗೊಳಿಸಿರುವ ಲಾಕ್‌ಡೌನ್‌ನ್ನು ಯಾವುದೇ ಕಾರಣಕ್ಕೂ ಸಡಿಲಗೊಳಿಸದೆ ಮೇ 3ರವರೆಗೆ ಮುಂದುವರಿದರೆ ಒಳ್ಳೆಯದು ಎಂದು ನಗರ ಶಾಸಕ ಜಿ. ಸೋಮಶೇಖರರೆಡ್ಡಿ ಹೇಳಿದರು.

ನಗರದ ಮಾರ್ಕಂಡೇಯ ದೇವಸ್ಥಾನದ ಆವರಣದಲ್ಲಿ ಪದ್ಮಶಾಲಿ ಸಮುದಾಯದಿಂದ ಸಮುದಾಯದ ಬಡಜನರಿಗೆ ರೇಷನ್‌ಕಿಟ್‌ ವಿತರಣೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ವೈರಸ್‌ ನಿಯಂತ್ರಣಕ್ಕೆ ಯಾವುದೇ ಔಷಧವಿಲ್ಲ. ಲಾಕ್‌ಡೌನ್‌ನ್ನು ಯಾವುದೇ ಕಾರಣಕ್ಕೂ ಸಡಿಲಗೊಳಿಸದೆ ಮೇ 3ರವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಸಬೇಕು. ಮೇಲಾಗಿ ಲಾಕ್‌ಡೌನ್‌ನ್ನು ರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ತಂತ್ರಜ್ಞಾನದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಿರುವ ಅಮೆರಿಕಾ, ಇಟಲಿ, ಸ್ಪೇನ್‌ ಸೇರಿ ಇನ್ನಿತರೆ ದೇಶಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸದ ಕಾರಣ ಸಾವಿರಾರು ಸಂಖ್ಯೆಯಲ್ಲಿ ಜನರು ಮೃತಪಟ್ಟಿದ್ದಾರೆ. ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ನಮ್ಮ ದೇಶ ಸುರಕ್ಷಿತವಾಗಿ ಇರೋದು ಎಂದ ಶಾಸಕ ಸೋಮಶೇಖರ ರೆಡ್ಡಿ, ಲಾಕ್‌ಡೌನ್‌ ಸಡಿಲಿಕೆ ವಿಚಾರದಲ್ಲಿ ಸಿಎಂ ಯಡಿಯೂರಪ್ಪನವರದ್ದು ಯಾವುದೇ ತಪ್ಪಿಲ್ಲ. ಕೂಲಿ ಕೆಲಸ ಮಾಡುವ ಬಡಜನರು ಹಸಿವಿನಿಂದ ಬಳಲುತ್ತಾರೆ ಎಂಬ ಉದ್ದೇಶದಿಂದ ಲಾಕ್‌ಡೌನ್‌ ಸಡಿಲಿಕೆ ಮಾಡಿದ್ದರು.

ಎಲ್ಲವೂ ಬೇಡ ಎಂದಿದ್ದಕ್ಕೆ ಸಡಿಲಿಕೆಯನ್ನು ಹಿಂಪಡೆದಿದ್ದಾರೆ. ಇದು ಜನಾಭಿಪ್ರಾಯವಾಗಿದೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ದೇಶದ ಇತಿಹಾಸದಲ್ಲಿ ನರೇಂದ್ರ ಮೋದಿಯವರಂಥ ಪ್ರಧಾನಿ ಸಿಕ್ಕಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದರೆ ಇಡಿ ದೇಶವೇ ಮನ್ನಣೆ ನೀಡುತ್ತದೆ ಎಂದವರು ಕೊಂಡಾಡಿದರು. ಇದಕ್ಕೂ ಮುನ್ನ ಪದ್ಮಶಾಲಿ ಸಮುದಾಯದ ಬಡಜನರಿಗೆ ಅಕ್ಕಿ, ಬೇಳೆ, ಎಣ್ಣೆ, ಸೋಪು ಸೇರಿ ಇತರೆ ವಿವಿಧ ದಿನಸಿ ವಸ್ತುಗಳುಳ್ಳ ರೇಷನ್‌ ಕಿಟ್‌ಗಳನ್ನು ವಿತರಿಸಲಾಯಿತು.

ಈ ವೇಳೆ ಪಾಲಿಕೆ ಸದಸ್ಯ ಮೋತ್ಕರ್‌ ಶ್ರೀನಿವಾಸ್‌, ಕೆಎಂಎಫ್‌ ನಿರ್ದೇಶಕ ವೀರಶೇಖರರೆಡ್ಡಿ, ಸಮುದಾಯದ ಮುಖಂಡ ಅವ್ವಾರು ಮಂಜುನಾಥ್‌ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.