ಕವಿಗೋಷ್ಠಿಯಲ್ಲಿ ಅಮ್ಮನ ವರ್ಣನೆ

ಸಿರಿಗನ್ನಡ ವೇದಿಕೆಯಿಂದ ಅಂತರ್ಜಾಲದಲ್ಲಿ ಕಾರ್ಯಕ್ರಮ ಆಯೋಜನೆ

Team Udayavani, May 18, 2020, 4:48 PM IST

17-May-09

ಬಳ್ಳಾರಿ: ಸಿರಿಗನ್ನಡ ವೇದಿಕೆ ಆಯೋಜಿಸಿದ್ದ ಅಂತರ್ಜಾಲ ಕವಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಕವಿಗಳು ಮತ್ತು ಕವಿಯತ್ರಿಯರು

ಬಳ್ಳಾರಿ: ಜಿಲ್ಲಾ ಸಿರಿಗನ್ನಡ ವೇದಿಕೆ ಹಾಗೂ ಮಹಿಳಾ ಘಟಕ ಜಂಟಿಯಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಅಂತರ್ಜಾಲ ಕವಿಗೋಷ್ಠಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ವಿಶ್ವ ಮಾತೃ ದಿನ ಹಾಗೂ ವಿಶ್ವ ಕುಟುಂಬ ದಿನಾಚರಣೆ ಅಂಗವಾಗಿ ನಡೆದ ಆನ್‌ಲೈನ್‌ ಕವಿಗೋಷ್ಠಿಯಲ್ಲಿ ನಾಡಿನ 18ಕ್ಕೂ ಹೆಚ್ಚು ಕವಿ-ಕವಿಯತ್ರಿಯರು ಕವಿತೆ ವಾಚಿಸಿದರು. ಅಮ್ಮನನ್ನು ಕೊಂಡಾಡುವ, ಮಾತೆಯ ತ್ಯಾಗ, ಮಮತೆ, ವಾತ್ಸಲ್ಯವನ್ನು ಹೆಚ್ಚು ಜನರು ವರ್ಣಿಸಿದರೆ ಒಬ್ಬರು ಅಪ್ಪನನ್ನು ಹೊಗಳಿ ಕವಿತೆ ವಾಚಿಸಿದ್ದು ವಿಶೇಷವಾಗಿತ್ತು. ಬಿಜಾಪುರದ ಅಶೋಕ ನಡುವಿನಮನಿ, ಸುಮಾ ಗಾಜರೆ, ಕೋಲಾರದ ಟಿ. ಸುಬ್ಬರಾಮಯ್ಯ, ಹೂವಿನ ಹಡಗಲಿಯ ನಾಗಮಂಜುಳ ಜೈನ, ಶೋಭ ಮಲ್ಕಿ ಒಡೆಯರ್‌, ಪೀರ್‌ ಸಾಹೇಬ್‌ ಬೀರಬ್ಬಿ, ಮಡಿಕೇರಿಯ ಹೇಮಲತಾ ಪೂರ್ಣ ಪ್ರಕಾಶ್‌, ಕೊಪ್ಪಳದ ಪ್ರವೀಣ ಕಿತ್ತೂರ್‌, ಮಹಮ್ಮದ್‌ ಅಲಿ ಆರ್‌, ಹಗರಿಬೊಮ್ಮನಹಳ್ಳಿಯ ಕೆ.
ಶಾರದಾ, ಯಾದಗಿರಿಯ ಮಶಾಕ ತಾಳಿಕೋಟೆ, ಚಿಕ್ಕಬಳ್ಳಾಪುರದ ಉದಯ್‌ ಕಿರಣ್‌ ಬಿ, ಉತ್ತರ ಕನ್ನಡದ ಡಾ| ಕವಿತಾ ಹೆಬ್ಟಾರ್‌, ಕೊಡಗಿನ ವೀಣಾ ಎಸ್‌. ರಾವ್‌, ದಾವಣಗೆರೆಯ ಲಲಿತಾ ಯೋಗೀಶ್‌, ಚಿತ್ರದುರ್ಗದ ಜೆ.ಆರ್‌. ಶಿವಕುಮಾರ್‌, ಬಳ್ಳಾರಿಯ ಸರೋಜಾ ಬ್ಯಾತನಾಳ್‌, ಕೆ.ನೀಲಮ್ಮ, ಎಸ್‌.ಕೌಸ್ತುಭ ಭಾರದ್ವಾಜ್‌, ರಾಯಚೂರಿನ ಕೆ.ಎಂ. ಮುರುಗೇಶ್‌ ಮತ್ತು ಜಮಖಂಡಿಯ ದಾಮೋದರ ಬಡಿಗೇರ ಸ್ವರಚಿತ ಕವಿತೆಗಳನ್ನು ವಾಚಿಸಿದರು.

ನಗರದ ಮೇಧಾ ಸಂಗೀತ ಮಹಾವಿದ್ಯಾಲಯದ ಸಂಸ್ಥಾಪಕಿ, ವೀಣಾ ವಾದಕಿ ಸುನೀತಾ ಹರಿ ಅವರು ವೀಣಾ ವಾದನ ನುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ವೇದಿಕೆ ರಾಜ್ಯಾಧ್ಯಕ್ಷ ಎಂ.ಎಸ್‌. ವೆಂಕಟರಾಮಯ್ಯ ಮಾತನಾಡಿ, ಕೋವಿಡ್ ವೈರಸ್‌ ತಲ್ಲಣದ ನಡುವೆಯೂ ಹಲವು ಜಿಲ್ಲಾ ಘಟಕಗಳು ತಂತ್ರಜ್ಞಾನ ಬಳಸಿಕೊಂಡು ಸಾಹಿತ್ಯ ಚಟುವಟಿಕೆ ನಡೆಸುತ್ತಿವೆ. ಬಳ್ಳಾರಿ ಜಿಲ್ಲಾ ಘಟಕವು ರಾಜ್ಯಮಟ್ಟದ ಅಂತರ್ಜಾಲ ಕವಿಗೋಷ್ಠಿ ಆಯೋಜಿಸಿರುವುದು ಉತ್ತಮ ಕಾರ್ಯ ಎಂದು ಶ್ಲಾಘಿಸಿದರು.

ಸಿರಿಗನ್ನಡ ಮಹಿಳಾ ವೇದಿಕೆ ಜಿಲ್ಲಾಧ್ಯಕ್ಷೆ ಡಾ| ವೈ. ಸುಮಾ ಸ್ವಾಗತಿಸಿದರು. ಸಿರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷ, ಹಿರಿಯ ಪತ್ರಕರ್ತ ಸಿ. ಮಂಜುನಾಥ, ತಾಂತ್ರಿಕ ನಿರ್ವಹಣೆ ಹೊಣೆ ಹೊತ್ತಿದ್ದ ಯುವ ಕವಿ ಕೌಸ್ತುಭ ಭಾರದ್ವಾಜ್‌ ಮಾತನಾಡಿದರು. ಮೇಧಾ ಸಮೂಹ ವಿದ್ಯಾ ಸಂಸ್ಥೆಗಳ ಸಂಸ್ಥಾಪಕ ರಾಮಕಿರಣ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.