ಮೋದಿ, ಮನಮೋಹನ ಸಿಂಗ್ ಇಬ್ಬರೂ ಉತ್ತಮ ನಾಯಕರು
Team Udayavani, Mar 18, 2023, 6:18 AM IST
ಬಳ್ಳಾರಿ: ಯುಪಿಎ ಅವಧಿಯಲ್ಲಿನ ಪ್ರಧಾನಿ ಮನಮೋಹನ್ ಸಿಂಗ್, ಇಂದಿನ ಪ್ರಧಾನಿ ನರೇಂದ್ರ ಮೋದಿ ಇಬ್ಬರೂ ತಮ್ಮದೇ ಆದ ನೆಲೆಯಲ್ಲಿ ಉತ್ತಮ ನಾಯಕರೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದಗ್ಗುಬಾಟಿ ಪುರಂದರೇಶ್ವರಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮನಮೋಹನ್ ಸಿಂಗ್ ಆಡಳಿತಾವಧಿಯಲ್ಲಿ ನಾನು ಕೇಂದ್ರ ಸಚಿವೆಯಾಗಿದ್ದೆ. ಅವರ ಕಾರ್ಯವೈಖರಿ ಉತ್ತಮವಾಗಿದ್ದು, ಹಾಲಿ ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಖರಿ ಸಹ ಮತ್ತೊಂದು ರೀತಿಯಲ್ಲಿ ಉತ್ತಮವಾಗಿದೆ. ಹಾಗಾಗಿ ತಮ್ಮದೇ ನೆಲೆಯಲ್ಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಬ್ಬರೂ ಉತ್ತಮ ನಾಯಕರು ಎಂದರು.
ಕಾಂಗ್ರೆಸ್ನಿಂದ ಹೊರಬಂದ ಮೇಲೆ ಬಿಜೆಪಿಯಲ್ಲಿ ಅಧಿಕಾರ ಇಲ್ಲ ಎಂಬ ನೋವಿಲ್ಲ. ಸದ್ಯ ಪಕ್ಷದಲ್ಲಿ ಮುಖಂಡರಾಗಿ ಕೆಲಸ ಮಾಡುತ್ತಿರುವುದು ತೃಪ್ತಿ ತಂದಿದೆ. ಜನರ ಸೇವೆ ಮಾಡಲು ಅಧಿಕಾರ ಬೇಕು ಎಂದೇನಿಲ್ಲ. ಬಿಜೆಪಿ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಲಿದೆ. ಕಾರ್ಯಕರ್ತರಾದ ಬಳಿಕವೇ ಅಧಿ ಕಾರ ಸಿಗಲಿದೆ. ಅಲ್ಲದೇ, ಸದ್ಯ ನಾನು ಯಾವ ಪಕ್ಷ ಸೇರುವ ಚಿಂತನೆಯಿಲ್ಲ. ನಾನು ಕೊನೆಯವರೆಗೂ ಬಿಜೆಪಿಯಲ್ಲೇ ಇರುತ್ತೇನೆ. ಸಾಮಾಜಿಕ ನ್ಯಾಯ ಎನ್ನುತ್ತಿರುವ ಕಾಂಗ್ರೆಸ್ ಈ ಹಿಂದೆ ಡಾ| ಜಿ.ಪರಮೇಶ್ವರ ಅವರನ್ನು ಸಿಎಂ ಮಾಡಲಿಲ್ಲ. ದಲಿತರನ್ನು ಮತ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ. ಧರ್ಮದ ಹೆಸರಲ್ಲಿ ಲಿಂಗಾಯತರನ್ನು ಒಡೆದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್: ಪ್ರಸಾದ,ಡ್ರೈಫ್ರೂಟ್ಸ್ ತಂದ ಪತ್ನಿ
Valmiki scam; ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಶ್ರೀರಾಮುಲು ದಾವೆ
Renukaswamy Case ಚಾರ್ಜ್ಶೀಟ್ನಲ್ಲಿ ಸಾಕ್ಷಿಗಳ ಹೇಳಿಕೆ ಕೇಳಿ ದಂಗಾದ ದರ್ಶನ್
Bellary: ಬಳ್ಳಾರಿ ಜೈಲಿಗೆ ಬಂದ ಶಿಗ್ಲಿ ಬಸ್ಯಾ; ದರ್ಶನ್ ಪರ ವಾದ ಮಾಡಲು ಸಿದ್ದ ಎಂದ ಬಸ್ಯಾ
Renukaswamy Case: ದರ್ಶನ್ ಕಸ್ಟಡಿ ಅಂತ್ಯ; ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್ ಗೆ ಹಾಜರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.