ಕುರುಗೋಡು : ಭರವಸೆಗಳ ಹುಸಿ : ಸಚಿವ ತವರಲ್ಲೇ ಬಸ್ ಗಳ ಸಮಸ್ಯೆ, ವಿದ್ಯಾರ್ಥಿಗಳ ಕಳವಳ


Team Udayavani, Jun 20, 2022, 3:57 PM IST

kurugodu

ಕುರುಗೋಡು : ಗಣಿ ನಾಡು ಬಳ್ಳಾರಿ ಜಿಲ್ಲೆಯು ಬಿಸಿಲಿನ ನಗರ ಎಂದು ಪ್ರಸಿದ್ದಿಗೊಂಡಿದ್ದು, ಜಿಲ್ಲೆಯ ಹೃದಯ ಭಾಗವಾಗಿರುವ ಐತಿಹಾಸಿಕ ಬೀಡು ಕುರುಗೋಡು ಪಟ್ಟಣವೂ ಗತ ವೈಭವ ಸಾರುವ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಯ ಅನೇಕ ಶೀಲಾನ್ಯಾಸಗಳು ಹಾಗೂ ದೇವರ ವಿಗ್ರಹಗಳನ್ನು ಹೊಂದಿದ್ದು, ಮುಖ್ಯವಾಗಿ ಪಟ್ಟಣದ ಆರಾಧ್ಯ ದೈವ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನಕ್ಕೆ ಹೊರ ರಾಜ್ಯ ಮತ್ತು ವಿದೇಶಿಗರ ತಂಡ ವೀಕ್ಷಣೆಗೆ ಹರಿದು ಬರುತ್ತಲೇ ಇರುತ್ತವೆ, ಇನ್ನೂ ನೂತನ ತಾಲೂಕು ಆಗಿದ್ದು, ಹಲವಾರು ಇಲಾಖೆಗಳು ನಿರ್ಮಾಣಗೊಂಡಿವೆ ಸಾವಿರಾರು ಪ್ರಯಾಣಿಕರು ವಾಣಿಜ್ಯ ವ್ಯಾಪಾರಗಳಿಗೆ ಬಂದ್ರೆ ಇನ್ನೂ ವಿದ್ಯಾರ್ಥಿಗಳು ಗ್ರಾಮೀಣ ಭಾಗದಿಂದ ಪಟ್ಟಣಕ್ಕೆ ಶಿಕ್ಷಣ ಪಡೆಯಲು ಬರುತ್ತಾರೆ. ಆದರೆ ಪಟ್ಟಣದಲ್ಲಿ ಬಸ್ ಡಿಪೋ ಇದ್ರೂ ಬಸ್ ಗಳ ಸಮಸ್ಯೆ ಬಹಳ ಕಾಡುತಿದ್ದು, ಸಾರಿಗೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರ ತವರಲ್ಲೇ ಬಸ್ ಗಳ ಸಮಸ್ಯೆ ಎದುರಾಗಿರುವುದು ನಿಜಕ್ಕೂ ದುರಂತ ಎಂದು ಸಾರ್ವಜನಿಕ ಸ್ಥಳಗಳಲ್ಲಿ ಕೇಳಿ ಬರುತ್ತಿದೆ.

ಹೌದು ಬಳ್ಳಾರಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಹತ್ತಿರವಿರುವ ತಾಲೂಕು ಎಂದರೆ ಕುರುಗೋಡು ತಾಲೂಕು ಬಳ್ಳಾರಿ ಮತ್ತು ಕುರುಗೋಡು ತಾಲೂಕಿಗೆ ಅವಿನಾಭಾವ ನಂಟು ಇದೆ ಕಾರಣ ಬಳ್ಳಾರಿ ತಾಲೂಕಿನ ಹಲವು ಗ್ರಾಮಗಳು ಕುರುಗೋಡು ತಾಲೂಕಿಗೆ ಒಳಪಡುತ್ತಿದ್ದೂ ಈ ಹಿಂದೆ ಕೂಡ ಕುರುಗೋಡು ವಿಧಾನಸಭಾ ಕ್ಷೇತ್ರವಾಗಿದ್ದಾಗ ಬಳ್ಳಾರಿ ಗ್ರಾಮೀಣ ಭಾಗದ ಅನೇಕ ಮತಗಳು ಕೂಡ ಕುರುಗೋಡಿಗೆ ಇದ್ದಿದ್ದು ಆದ್ದರಿಂದ ಬಳ್ಳಾರಿ ಮತ್ತು ಕುರುಗೋಡಿಗೆ ನಂಟು ಇದೆ ಎನ್ನಲಾಗುತ್ತದೆ.

ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಪ್ರೇಮಿಗಳು ಸಚಿವ ಬಿ. ಶ್ರೀರಾಮುಲು ಅವರಿಗೆ ಅನೇಕ ಬಾರಿ ಲಿಖಿತ ರೂಪದಲ್ಲಿ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು ಬೇಡಿಕೆ ಈಡೇರಿಲ್ಲ ಎಂಬ ಮಾತು ವಿದ್ಯಾರ್ಥಿಗಳಿಂದ ಕೇಳಿ ಬರುತ್ತಿದೆ.

ಇದನ್ನೂ ಓದಿ : ಮೋದಿ ಆಶೀರ್ವಾದವಿದ್ದರೆ ನವ ಕರ್ನಾಟಕದ ಕನಸು ನನಸು: ಸಿಎಂ ಬೊಮ್ಮಾಯಿ

ಕುರುಗೋಡು ಪಟ್ಟಣಕ್ಕೆ ಗ್ರಾಮೀಣ ಭಾಗದ ವಿದ್ಯಾವಂತರು ಎಸ್.ಎಸ್.ಎಲ್.ಸಿ, ಪಿಯುಸಿ. ಪದವಿ, ಸ್ನಾತಕೋತ್ತರ ಪದವಿ ಪಡೆಯಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ನಿತ್ಯ ಬಸ್ ಸಮಸ್ಯೆಯಿಂದ ಪರದಾಡಬೇಕಾಗಿದೆ.

ಕುರುಗೋಡು ಡಿಪೋದಲ್ಲಿ ಒಟ್ಟು 41 ಬಸ್ ಗಳು ಇದ್ದು, ಇದರಲ್ಲಿ ಬರೆ ಡಕೋಟಾ ಬಸ್ ಗಳೆ ಜಾಸ್ತಿ. ರಸ್ತೆಯಲ್ಲಿ ಸಂಚರಿಸುವಾಗ ದಾರಿ ಮಧ್ಯದಲ್ಲೇ ಅನೇಕ ಬಾರಿ ಕೈ ಕೊಟ್ಟಿವೆ ಇದರಿಂದ ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆಯಾಗಿದೆ.

ಈಗಾಗಲೇ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳು ಬಸ್ ಸಮಸ್ಯೆಯಿಂದ ಅನೇಕ ಬಾರಿ ಪ್ರತಿಭಟನೆಗಳು ನಡೆಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆಗಳು ಕೂಡ ಇವೆ.

ಪಟ್ಟಣದ ಮುಷ್ಟಗಟ್ಟೆ, ವಿರಾಪುರ, ಕ್ಯಾದಿಗೆಹಾಳ್, ಪಟ್ಟಣ ಶೇರಗು, ಗುತ್ತಿಗನೂರು, ಒರ್ವಾಯಿ, ಗೆಣಿಕೇಹಾಳ್, ವದ್ದಟ್ಟಿ, ಕೋಳೂರು, ಸೋಮಸಮುದ್ರ ಸೇರಿದಂತೆ ಇನ್ನೂ ಅನೇಕ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಸರಿಯಾಗಿ ಬಸ್ ಇಲ್ಲದಂತಾಗಿದೆ. ಇದರಿಂದ ಶಿಕ್ಷಣ ಪಡೆದು ಕೊಳ್ಳಲು ತುಂಬಾ ತೊಂದರೆ ಆಗುತ್ತಿದೆ.

ಅಲ್ಲದೆ ಪಟ್ಟಣದ ಜನತೆ ಕೂಡ ದೂರದ ಜಿಲ್ಲೆ ಮತ್ತೆ ತಾಲೂಕುಗಳಿಗೆ ತೆರಳುವುದಕ್ಕೆ ಕೂಡ ಸರಿಯಾದ ಸಮಯಕ್ಕೆ ಬಸ್ ಇಲ್ಲದ ಕಾರಣ ಮುಖ್ಯ ವೃತ್ತದಲ್ಲೇ ಬಿರು ಬಿಸಿಲಿನಲ್ಲೇ ನಿಂತು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳು ಬಸ್ ಸಮಸ್ಯೆಯಿಂದ ಸರಿಯಾದ ಸಮಯಕ್ಕೆ ತರಗತಿಗಳು ಮುಗಿಸಿಕೊಂಡು ಮನೆಗೆ ತಲಪದೇ ಇರುವ ಕಾರಣ ಪೋಷಕರು ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸಿ ಕೃಷಿ ಕೆಲಸಗಳಿಗೆ ದೂಡುತ್ತಿರುವುದು ವಿಪರ್ಯಾಸವಾಗಿದೆ.

ಇದನ್ನೂ ಓದಿ :ಉತ್ತಮ ಇಳುವರಿಗಾಗಿ ಕೊಟ್ಟಿಗೆ ಗೊಬ್ಬರದತ್ತ ರೈತರ ಚಿತ್ತ

ಶಾಸಕರ ನಿರ್ಲಕ್ಷ್ಯ :

ಕ್ಷೇತ್ರದ ಶಾಸಕ ಜೆ. ಎನ್. ಗಣೇಶ್ ಅವರಿಗೆ ಅನೇಕ ಬಾರಿ ದೂರವಾಣಿ ಮೂಲಕ ಹಾಗೂ ಲಿಖಿತ ರೂಪದಲ್ಲಿ ಬಸ್ ಒದಗಿಸುವಂತೆ ಮನವಿ ಮಾಡಿದರು ಯಾವುದೇ ಪ್ರಯೋಜನೆ ವಾಗಿಲ್ಲ ಅಲ್ಲದೆ ಶಾಲೆ ಕಾಲೇಜ್ ಕಡೆ ಕಾರ್ಯಕ್ರಮ ಗಳಿಗೆ ಬಂದಾಗ ಕೂಡ ತಿಳಿಸಿದರು ಸದ್ಯದ ಮಟ್ಟಿಗೆ ಅಧಿಕಾರಿಗಳ ಹತ್ತಿರ ಮಾತನಾಡಿ ಶೀಘ್ರವೇ ಬಸ್ ಕಲ್ಪಿಸಲಾಗುವುದು ಎಂದು ಹೇಳಿದವರೇ ಲಾಸ್ಟ್ ಬಸ್ ಗ್ರಾಮೀಣ ಭಾಗಕ್ಕೆ ಹೋಗುತ್ತಿದ್ದವೋ ಇಲ್ವೋ ಎಂದು ತಿಳಿದುಕೊಳ್ಳುವಲ್ಲಿ ಶಾಸಕರು ಎಡವಿದ್ದರೆ

ತರಗತಿಗಳು ಮಿಸ್ :

ದೂರದಿಂದ ಪಟ್ಟಣಕ್ಕೆ ಬರುವ ವಿದ್ಯಾರ್ಥಿಗಳು ಬೆಳಿಗ್ಗೆ ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ಬೆಳಿಗ್ಗೆ ನಡೆಯುವ ತರಗತಿಗಳು 1 ರಿಂದ 2 ಮಿಸ್ ಆಗುತ್ತವೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಕೊಕ್ಕೆ ಬಿದ್ದಂತಾಗುತ್ತದೆ.

ಬಸ್ ಪಾಸ್ ಇದ್ರೂ ಸರಿಯಾಗಿ ಉಪಯೋಗ ಇಲ್ಲ :

ಅತಿ ಹೆಚ್ಚು ಹಣ ನೀಡಿ ವರ್ಷ ಪೂರ್ತಿ ಪ್ರಯಾಣಿಸಲಾಗದೆ ಸರಕಾರದ ಸೌಲಭ್ಯಕ್ಕನುಗುಣವಾಗಿ ವಿದ್ಯಾರ್ಥಿಗಳು ವಾರ್ಷಿಕ ಬಸ್ ಪಾಸ್ ಮಾಡಿಸಿದ್ರು ಸರಿಯಾಗಿ ಉಪಯೋಗ ಆಗುತ್ತಿಲ್ಲ. ಕೆಲವೊಮ್ಮೆ ಬಸ್ ಬಾರದೆ ಸಂದರ್ಭದಲ್ಲಿ ಖಾಸಗಿ ವಾಹನಗಳಲ್ಲಿ ದುಬಾರಿ ಹಣ ನೀಡಿ ತೆರಳಬೇಕಾಗಿದೆ.

ಪರೀಕ್ಷೆ ಸಂದರ್ಭದಲ್ಲಿ ತುಂಬಾ ಕಷ್ಟ :
ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳು ಕಾಲೇಜ್ ನಲ್ಲಿ ನಡೆಯುವ ಇಂಟ್ರನಾಲ್ ಹಾಗೂ ವಾರ್ಷಿಕ ಪರೀಕ್ಷೆಗಳ ಸಂದರ್ಭದಲ್ಲಿ ಸರಿಯಾಗಿ ಬಸ್ ಬಾರದ ಕಾರಣ ಹಲವು ವಿದ್ಯಾರ್ಥಿಗಳು ಬೈಕ್ ಡ್ರಾಪ್ ತಗೊಂಡು ಹೋದ್ರೆ ಇನ್ನೂ ಹಲವು ವಿದ್ಯಾರ್ಥಿಗಳು ಸೇರಿ ತಲಾ ಒಬ್ಬರಿಗೆ ಇಷ್ಟು ಅಂತ ಮಾತನಾಡಿಕೊಂಡು ಟಾಟಾ ಎಸ್ ನಲ್ಲಿ ಹೋಗಿ ಬರಬೇಕಾಗಿದೆ.

ಶಿಕ್ಷಕರಿಂದ ಹೊಡೆತ :

ಕ್ಲಾಸ್ ಗಳಿಗೆ ಬಸ್ ಸಮಸ್ಯೆಯಿಂದ ತಡವಾಗಿ ಹೋದ್ರೆ ಕ್ಲಾಸ್ ಶಿಕ್ಷಕರು ಕ್ಲಾಸ್ ಒಳಗಡೆ ಕರೆದುಕೊಳ್ಳದೆ ಹೊರಗಡೆ ನಿಲ್ಲಿಸಿ ಶಿಕ್ಷೆ ಕೊಡುತ್ತಾರೆ. ಇಲ್ಲಾಂದ್ರೆ ಹೊಡೆಯುತ್ತಾರೆ. ಇತರ ನಿತ್ಯ ಅನುಭವಿಸಿ ದಿನ ಬಸ್ ಸಮಸ್ಯೆ ಅಂತ ಹೇಳಿ ಸಾಕಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಳುತ್ತಾರೆ.

ಬರೆ ಆಶ್ವಾಸನೆ :

ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ಮಾಡಿದಾಗ ಮಾತ್ರ ಅಧಿಕಾರಿಗಳು ಹಾಗೂ ಜನ ಪ್ರತಿನಿದಿಗಳು ಇಂದಿನಿಂದ ಸರಿಯಾದ ಸಮಯಕ್ಕೆ ಬಸ್ ಬರುತ್ತದೆ ಎಂದು ಭರವಸೆ ನೀಡಿ ಹೋಗುತ್ತಾರೆ. ಅವಾಗ ಸದ್ಯದ ಮಟ್ಟಿಗೆ ಎರಡು -ಮೂರು ದಿನ ಮಾತ್ರ ಸರಿಯಾಗಿ ಬರುತ್ತದೆ ಮತ್ತೆ ಅದೇ ತರ ಸಮಸ್ಯೆ ಶುರುವಾಗುತ್ತದೆ ವರ್ಷದಲ್ಲಿ ಅನೇಕ ಬಾರಿ ಪ್ರತಿಭಟನೆ ಮಾಡಿ ಮನವಿ ಮಾಡಿದರು ಪ್ರಯೋಜನೆ ವಾಗಿಲ್ಲ. ಬರೆ ಕೇವಲ ಭರವಸೆ ಯಲ್ಲಿ ಕೈ ತೊಳಿಯುತ್ತಾರೆ.

ಆಗ್ರಹ :

ಸದ್ಯ ಬೇಸಿಗೆಯ ರಜೆ ಮುಗಿಸಿಕೊಂಡು ಈಗಾಗಲೇ ಎಲ್ಲ ಕಡೆ ಶಾಲಾ -ಕಾಲೇಜ್ ಪ್ರಾರಂಭವಾಗಿದ್ದು, ದೂರದ ತಾಲೂಕು ಗಳಿಗೆ ಗ್ರಾಮೀಣ ಭಾಗದಿಂದ ಅತಿ ಹೆಚ್ಚು ವಿದ್ಯಾರ್ಥಿ ಗಳು ವಿದ್ಯಾಭ್ಯಾಸ ಕ್ಕೆ ತೆರಳುತ್ತಿದ್ದೂಅವರಿಗೆ ಸರಿಯಾದ ಸಮಯಕ್ಕೆ ಬಸ್ ಒದಗಿಸಬೇಕು ಒಂದು ವೇಳೆ ಇಲ್ಲವಾದರೆ ರಸ್ತೆಗಿಳಿದು ಪ್ರತಿಭಟನೆಮಾಡುವುದು ಅನಿವಾರ್ಯ ಎಂದು ವಿದ್ಯಾರ್ಥಿಗಳ ಆಗ್ರಹ ವಾಗಿದೆ.

ಬಸ್ ಸಮಸ್ಯೆ ಬಹಳ ಇದೆ. ಇದರಿಂದ ಮನೆಯ ಪೋಷಕರಿಂದ ಮತ್ತು ಶಿಕ್ಷಕರಿಂದ ಕಿರಿ ಕಿರಿ. ಬೆಳಿಗ್ಗೆ, ಮದ್ಯಾಹ್ನ, ಸಂಜೆ ಬರಬೇಕಾದರೆ ಗಂಟೆ ಗಟ್ಟಲೆ ಬಸ್ ನಿಲ್ದಾಣ ದಲ್ಲಿ ಕಾಯಬೇಕಾಗಿದೆ.ಹಲವು ಬಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿದಿಗಳಿಗೆ ತಿಳಿಸಿದರು ಪ್ರಯೋಜನೆ ಆಗಿಲ್ಲ. ವಿದ್ಯಾಭ್ಯಾಸ ಪಡೆಯುವುದಕ್ಕೆ ತುಂಬಾ ತೊಂದ್ರೆ ಆಗುತ್ತಿದೆ.

– ಶಿವುಕುಮಾರ್, ರಾಜು, ರಾಮಾಂಜಿನಿ, ಗಣೇಶ್ ವಿದ್ಯಾರ್ಥಿಗಳು ಕುರುಗೋಡು.

ನಮ್ಮ ಘಟಕದಲ್ಲಿ 41 ಬಸ್ ಇವೆ. ಹಾಗಾಗೇ ರಿಪೇರಿ ಬಂದಾಗ ಮಾಡಿಸಿ ಹಳ್ಳಿಗಳ ಮೇಲೆ ಕಳಿಸುತ್ತೇವೆ. ಸದ್ಯ ಶಾಲಾ -ಕಾಲೇಜ್ ಇಲ್ಲದಕ್ಕಾಗಿ ಕಳಿಸೋಕೆ ಆಗಿಲ್ಲ. ಇವಾಗ ಪ್ರಾರಂಭವಾಗಿದ್ದರಿಂದ ಸರಿಯಾದ ಸಮಯಕ್ಕೆ ಕಳಿಸುತ್ತೇವೆ.

– ಗಂಗಾಧರ್ ಬಸ್ ಘಟಕದ ವ್ಯವಸ್ಥಾಪಕರು ಕುರುಗೋಡು

– ಸುಧಾಕರ್ ಮಣ್ಣೂರು

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.