BY-Election: ಸಂಡೂರಿಲ್ಲಿ ಬಿಜೆಪಿಗೆ ಬಂಡಾಯದ ಬಿಸಿ
Team Udayavani, Oct 20, 2024, 10:02 PM IST
ಬಳ್ಳಾರಿ: ಸಂಡೂರು ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಎಸ್.ದಿವಾಕರ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತು ಕೇಳಿಬಂದಿದೆ.
2023ರ ಸಾರ್ವತ್ರಿಕ ಚುನಾವಣೆ ಹಾಗೂ 2024ರ ಉಪಚುನಾವಣೆಗೆ ಪಕ್ಷದ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ನಡುವೆ, ಬಿಜೆಪಿ ಮುಖಂಡರಾದ ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿ ಅವರು ಭಾನುವಾರ ಬಳ್ಳಾರಿಯ ತಮ್ಮ ನಿವಾಸಕ್ಕೆ ಅವರನ್ನು ಕರೆಸಿ ಮಾತನಾಡಿದ್ದರೂ ದಿವಾಕರ್ ತಮ್ಮ ನಿಲುವು ಬದಲಿಸಿಲ್ಲ. ಮುಂದಿನ ನಡೆ ಕುರಿತು ಗುರುವಾರ ತಿಳಿಸುವುದಾಗಿ ಹೇಳಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರೆಡ್ಡಿ ಪಕ್ಷದಿಂದ ಸ್ಪರ್ಧಿಸಿದ್ದ ದಿವಾಕರ್, ಶೇ.18ರಷ್ಟು (31,375) ಮತ ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ
Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ
Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ
Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ
Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್ ಅಳಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.