ರೈತಣ್ಣನ ಶುಚಿರುಚಿ ಊಟಕ್ಕೆ ಶ್ಲಾಘನೆ

ಜಿಲ್ಲಾಧಿಕಾರಿ ಮಾಲಪಾಟಿ-ಎಸ್ಪಿ ಅಡಾವತ್‌ ಭೇಟಿ

Team Udayavani, Apr 10, 2022, 2:42 PM IST

food

ಬಳ್ಳಾರಿ: ಎಪಿಎಂಸಿ ಆವರಣದ ರೈತ ಭವನದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿಂದ ನಡೆಸುತ್ತಿರುವ ರೈತಣ್ಣನ ಊಟಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪವನ್‌ಕುಮಾರ್‌ ಮಾಲಪಾಟಿ, ಎಸ್‌ಪಿ ಸೈದುಲು ಅಡಾವತ್‌ ಅವರು ರೈತರೊಂದಿಗೆ ಶನಿವಾರ ಊಟ ಸವಿದರು.

ಬಳಿಕ ಮಾತನಾಡಿದ ಡಿಸಿ ಪವನ್‌ಕುಮಾರ್‌ ಮಾಲಪಾಟಿ, ಎಸ್‌ಪಿ ಸೈದುಲು ಅಡಾವತ್‌, ಸಂಸ್ಥೆಯಿಂದ ಒಳ್ಳೆಯ ಶುಚಿ-ರುಚಿ ಊಟವನ್ನು ನೀಡುವ ಮಹತ್ಕಾರ್ಯ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ.

ಜತೆಗೆ ರೈತರ ಆರೋಗ್ಯಕ್ಕಾಗಿ ಉಚಿತ ಆಸ್ಪತ್ರೆ ಸೇವೆ ನೀಡುತ್ತಿರುವ ಸಂಸ್ಥೆ ಕಾರ್ಯ ಕೊಂಡಾಡಿದರು. ಸರ್ಕಾರದಿಂದ ಬೇಕಾದ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು. ಇದಕ್ಕೂ ಮುನ್ನ ಸಂಸ್ಥೆಯ ಅಧ್ಯಕ್ಷ ಸಿ. ಶ್ರೀನಿವಾಸ್‌ ರಾವ್‌, ಗೌರವ ಕಾರ್ಯದರ್ಶಿ ಯಶ್‌ವಂತ್‌ರಾಜ್‌ ನಾಗಿರೆಡ್ಡಿ ಅವರು, ಡಿಸಿ ಪವನ್‌ಕುಮಾರ ಮಾಲಪಾಟಿ, ಎಸ್‌ಪಿ ಸೈದುಲು ಅಡಾವತ್‌ ಅವರಿಗೆ ಯೋಜನೆ ಸಂಪೂರ್ಣ ಮಾಹಿತಿಯನ್ನು ಪರಿಚಯಿಸಿದರು.

2021 ನವೆಂಬರ್‌ 10ರಂದು ರೈತಣ್ಣನ ಮಧ್ಯಾಹ್ನದ ಬಿಸಿ ಊಟ ಯೋಜನೆಯನ್ನು ಆರಂಭಿಸಿದ್ದು ನೆರೆಯ ಕರ್ನೂಲ್‌, ಅನಂತಪುರ, ರಾಯದುರ್ಗ ಮತ್ತು ಬಳ್ಳಾರಿ ತಾಲೂಕು ಮತ್ತು ಜಿಲ್ಲೆಯ ಸುಮಾರು 50 ಸಾವಿರ ರೈತರು ಇದರ ಉಪಯೋಗವನ್ನು ಪಡೆಯುತ್ತಿದ್ದಾರೆ. ಇದರೊಂದಿಗೆ ರೈತಣ್ಣನ ಆರೋಗ್ಯಕ್ಕಾಗಿ ಸಂಸ್ಥೆಯ ಉಚಿತ ಆಸ್ಪತ್ರೆಯನ್ನು ಸಹ ರೈತರು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದರೊಂದಿಗೆ ರಾತ್ರಿ ವೇಳೆ ಬಳ್ಳಾರಿಯಲ್ಲಿ ತಂಗುವ ರೈತರಿಗಾಗಿ ರೈತಣ್ಣನ ಹಾಸಿಗೆ ವ್ಯವಸ್ಥೆಯನ್ನು ಆರಂಭಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಈ ವೇಳೆ ಬುಡಾ ಅಧ್ಯಕ್ಷ ಪಿ. ಪಾಲಣ್ಣ, ಎಪಿಎಎಂಸಿ ಅಧ್ಯಕ್ಷ ಬಿ. ಉಮೇಶ್‌, ಎಪಿಎಂಸಿ ನಿರ್ದೇಶಕ ಕಾಂಡ್ರ ಬಾಬು, ಸಂಸ್ಥೆಯ ಉಪಾಧ್ಯಕ್ಷರಾದ ಬಿ.ಮಹಾರುದ್ರಗೌಡ, ಎ.ಮಂಜುನಾಥ್‌, ರಮೇಶ್‌ ಬುಜ್ಜಿ, ಕೆ.ಸಿ.ಸುರೇಶ್‌ ಬಾಬು, ಮಾಜಿ ಅಧ್ಯಕ್ಷ ವಿ. ರವಿಕುಮಾರ್‌, ಜಂಟಿ ಕಾರ್ಯದರ್ಶಿ ಎಸ್‌.ದೊಡ್ಡನಗೌಡ, ಸೊಂತ ಗಿರಿಧರ್‌, ವಿವಿಧ ಸಮಿತಿಗಳ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು ಇದ್ದರು.

ಟಾಪ್ ನ್ಯೂಸ್

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Bellary; Darshan IT interrogation in jail

Bellary; ಜೈಲಿನಲ್ಲಿಂದು ದರ್ಶನ್‌ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.