ಕೋವಿಡ್ ಕಾಟದಿಂದಾಗಿ ಕೆಲಸವಿಲ್ಲದೇ ಸಂಕಷ್ಟ: ಬಾಣಸಿಗರ ಬದುಕು ಬೀದಿಗೆ


Team Udayavani, May 29, 2021, 10:13 AM IST

ಕೋವಿಡ್ ಕಾಟದಿಂದಾಗಿ ಕೆಲಸವಿಲ್ಲದೇ ಸಂಕಷ್ಟ: ಬಾಣಸಿಗರ ಬದುಕು ಬೀದಿಗೆ

ಸಿರುಗುಪ್ಪ: ಕಾರಬೂಂದಿ, ಲಾಡು, ಜಿಲೇಬಿ, ಮೈಸೂರ್‌ಪಾಕ್‌, ಜಹಾಂಗೀರ್‌, ಪಲಾವ್‌, ಚಿತ್ರನ್ನಾ, ಮೊಸರನ್ನ, ಅನ್ನ, ಸಾಂಬಾರ್‌, ಸಾರು, ಮಜ್ಜಿಗೆ ತಯಾರಿಸಿ ತಮ್ಮ ಜೀವನವನ್ನು ಸಾಗಿಸುತ್ತಿದ್ದ ತಾಲೂಕಿನ 200ಕ್ಕೂ ಹೆಚ್ಚು ಬಾಣಸಿಗರು ಯಾವುದೇ ಅಡುಗೆ ಮಾಡುವ ಕೆಲಸವಿಲ್ಲದೆ, ಆದಾಯವಿಲ್ಲದೆ ಅವರ ಬದುಕು ಬೀದಿಗೆ ಬಂದಿದೆ.

ಕಳೆದ ಒಂದು ವರ್ಷದಿಂದ ಕೊರೊನಾ ಮಹಾಮಾರಿಯ ಕಾಟದಿಂದಾಗಿ ಅದ್ಧೂರಿ ಮದುವೆ ಸಮಾರಂಭಗಳು ನಡೆಯುತ್ತಿಲ್ಲ. ಅದ್ಧೂರಿ ವಿವಾಹ ಭೋಜನದ ಖಾದ್ಯಗಳನ್ನು ಸಾವಿರಾರು ಆಮಂತ್ರಿತರಿಗೆ ಸಿದ್ಧಪಡಿಸಿ ಕೂಲಿ ಹಣ ಪಡೆಯುತ್ತಿದ್ದ ಬಾಣಸಿಗರಿಗೆ ಈಗ ಕೆಲಸವಿಲ್ಲ, ಕೂಲಿಯೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮದುವೆ ಸೇರಿದಂತೆ ಇತರೆ ಎಲ್ಲ ಶುಭಸಮಾರಂಭಗಳನ್ನು ಸರ್ಕಾರ ನಿಷೇಧ ಮಾಡಿರುವುದರಿಂದ ಯಾವುದೇ ಸಮಾರಂಭಗಳು ನಡೆಯುತ್ತಿಲ್ಲ. ಹೀಗಾಗಿ ಅವರು ತಮ್ಮ ಕುಟುಂಬದ ಹೊಟ್ಟೆ ತುಂಬಿಸಿಕೊಳ್ಳಲು ಪರದಾಡುವಂತಾಗಿದೆ.

ರೈತರು, ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳ ವಹಿವಾಟಿನ ಮೇಲೆ ತೀವ್ರವಾದ ಪ್ರಹಾರ ಮಾಡಿರುವ ಕೊರೊನಾ ಈಗ ಬಾಣಸಿಗರ ಬದುಕಿನ ಮೇಲೆ ಸಂಕಷ್ಟದ ಛಾಯೆ ಆವರಿಸುವಂತೆ ಮಾಡಿದೆ. ತಾಲೂಕಿನಲ್ಲಿ ಮದುವೆ ಸೇರಿದಂತೆ ಇತರೆ ಶುಭಸಮಾರಂಭಗಳಲ್ಲಿ ಸಾವಿರಾರು ಮಂದಿಗೆ ಅಡುಗೆ ಮಾಡಲು 200ಕ್ಕೂ ಹೆಚ್ಚು ಜನ ಬಾಣಸಿಗರಿದ್ದು, ಕೋವಿಡ್‌ 19 2ನೇ ಅಲೆಯು ತೀವ್ರವಾಗಿ ಹೆಚ್ಚಾಗುತ್ತಿದ್ದು, ಹಳ್ಳಿಗಳಿಗೂ ವ್ಯಾಪಿಸುತ್ತಿದೆ, ಶುಭಸಮಾರಂಭಗಳ ಮೇಲೆ ತಾಲೂಕಾಡಳಿತ ಮತ್ತು ಪೊಲೀಸ್‌ ಇಲಾಖೆ ಕಟ್ಟೆಚ್ಚರ ವಹಿಸಿದೆ. ಲಾಕ್‌ಡೌನ್‌ ಘೋಷಣೆಯಾದ ಮೇಲೆ ಇಂತಹ ಸಮಾರಂಭಗಳ ಮೇಲೆ ಸರ್ಕಾರ ಹದ್ದಿನಕಣ್ಣಿಟ್ಟಿದೆ.

ನಿಗದಿತ ಮದುವೆಗೂ ಅವಕಾಶ ಇಲ್ಲದಂತಾಗಿದ್ದು, ರುಚಿಕಟ್ಟಾಗಿ ಅಡುಗೆ ತಯಾರಿಸಿ ಉಣಬಡಿಸಲು ನೆರವಾಗುತ್ತಿದ್ದ ಬಾಣಸಿಗರ ಮೇಲೆ ಈ ನಿಯಮ ಬರೆ ಎಳೆದಂತಾಗಿದೆ. ಕೇವಲ 3 ತಿಂಗಳ ಅವ ಧಿಯಲ್ಲಿಯೇ ನಡೆಯುವ ಮದುವೆಯ ಸುಗ್ಗಿ ಕಾಲದಲ್ಲಿ ಹತ್ತಾರು ಮದುವೆಯಲ್ಲಿ ಅಡುಗೆ ಮಾಡಿ ವರ್ಷಕ್ಕೆ ಆಗುವಷ್ಟು ಕುಟುಂಬದ ಎಲ್ಲ ಖರ್ಚುವೆಚ್ಚದ ಗಳಿಕೆ ಮಾಡುತ್ತಿದ್ದ ನಮಗೆ ದುಡಿಮೆ ಇಲ್ಲದಂತಾಗಿದೆ. ಮದುವೆಗೆ ಈಗಂತು ಅನುಮತಿ ಇಲ್ಲದಿರುವುದರಿಂದ ಯಾರು ಕರೆಯುತ್ತಿಲ್ಲ. ಇದರಿಂದಾಗಿ ಅಡುಗೆ ಸಿದ್ಧಪಡಿಸಲು ಸಾಧ್ಯವಿಲ್ಲ. ಹೀಗಾಗಿ ನಮಗೆ ಕೂಲಿ ದೊರೆಯುತ್ತಿಲ್ಲವೆಂಬ ಅಳಲು ಬಾಣಸಿಗರದ್ದಾಗಿದೆ.

ಅಸಂಘಟಿತ ವಲಯವಾಗಿರುವ ಬಾಣಸಿಗರಿಗೂ ಸರ್ಕಾರ ಪರಿಹಾರ ಘೋಷಣೆ ಮಾಡಬೇಕು, ನಮ್ಮದೇನು ದೊಡ್ಡ ಸಂಖ್ಯೆಯಲ್ಲ, ಸಂಕಷ್ಟದ ಪರಿಸ್ಥಿತಿಯಲ್ಲಾದರೂ ಸರ್ಕಾರ ನಮ್ಮ ಬಾಣಸಿಗರಿಗೆ ಪ್ಯಾಕೇಜ್‌ ಘೋಷಣೆ ಮಾಡುವುದರ ಮೂಲಕ ನೆರವಿನ ಹಸ್ತ ಚಾಚಬೇಕು. ನಂದವಾರ ಮಲ್ಲಿಕಾರ್ಜುನ, ಬಾಣಸಿಗ.

 

-ಆರ್‌. ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.