ಹೊಸಪೇಟೆ-ಗುತ್ತಿ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ
ಬಳ್ಳಾರಿ-ಬೆಂಗಳೂರು ಮಧ್ಯೆ ಇಂಟರ್ಸಿಟಿ ರೈಲು ಆರಂಭಿಸಿ
Team Udayavani, Apr 4, 2022, 1:56 PM IST
ಬಳ್ಳಾರಿ: ಕೇಂದ್ರ ಸರ್ಕಾರದ ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ ಭಾಗವಹಿಸಿದ್ದ ಬಳ್ಳಾರಿಯ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕಾರ್ಯದರ್ಶಿ ಯಶ್ವಂತ್ರಾಜ್ ನಾಗಿರೆಡ್ಡಿ ಹಲವು ಬೇಡಿಕೆಗಳನ್ನು ಪ್ರಸ್ತಾಪಿಸಿ ಈಡೇರಿಸುವಂತೆ ಮನವಿ ಮಾಡಿದ್ದಾರೆ.
ರಾಜ್ಯದ ಸಂಸದರಾದ ಜಿ.ಎಂ.ಸಿದ್ದೇಶ್ವರ್, ಶಿವಕುಮಾರ್ ಉದಾಸಿ, ಕರಡಿ ಸಂಗಣ್ಣ, ವೈ.ದೇವೇಂದ್ರಪ್ಪ, ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆ, ಕೆ.ಸಿ.ರಾಮ ಮೂರ್ತಿ, ಪಿ.ಸಿ.ಗದ್ದಿಗೌಡರ್ ಇನ್ನಿತರೆ ರಾಜ್ಯದ ಸಂಸದರು ಮತ್ತು ಸಚಿವರು ಉಪಸ್ಥಿತರಿದ್ದ ಸಭೆಯಲ್ಲಿ ಯಶ್ವಂತ್ರಾಜ್ ಅವರು, ನಗರದ ಸುಧಾ ಕ್ರಾಸ್ ಬಳಿ ಫ್ಲ ಓವರ್ ನಿರ್ಮಾಣ ಮಾಡುವುದು, ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಲಿಫ್ಟ್ ಮತ್ತು ಎಸ್ಕ್ಲೇಟರ್ ಅಳವಡಿಸಲು ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸರ್ಕಾರದ ಕ್ರಮಗಳನ್ನು ಬೇಗನೆ ಪೂರೈಸಿ ಜನತೆಗೆ ಲಿಫ್ಟ್ ಮತ್ತು ಎಸ್ಕೆಲೇಟರ್ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಬಳ್ಳಾರಿ ಬೆಂಗಳೂರು ನಡುವೆ ಇಂಟರ್ಸಿಟಿ ರೈಲನ್ನು ಆರಂಭಿಸಬೇಕು.
ಹೊಸಪೇಟೆ-ಗುತ್ತಿ ನಡುವಿನ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರೈಸಬೇಕು. 2010 ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 900 ಎಕರೆ ರೈತರ ಭೂಮಿ ವಶಪಡಿಸಿಕೊಂಡು ಹನ್ನೆರೆಡು ವರ್ಷಗಳು ಕಳೆದರೂ ನಿರ್ಮಾಣವಾಗದ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೂಡಲೇ ಚಾಲನೆ ನೀಡಬೇಕು. ತೋರಣಗಲ್ಲು-ಬಳ್ಳಾರಿ ಮಧ್ಯದಲ್ಲಿ ಎಂಎಂಟಿಸಿ ಮತ್ತು ಮಿತ್ತಲ್ ಗ್ರೂಪ್ಗೆ ನೀಡಿರುವ ನೂರಾರು ಎಕರೆ ಭೂಮಿಯಲ್ಲಿ ತ್ವರಿತವಾಗಿ ಕೈಗಾರಿಕೆಗಳ ಸ್ಥಾಪನೆಯಾಗಬೇಕು, ಇಲ್ಲದೇ ಹೋದರೆ ರೈತರ ಭೂಮಿಯನ್ನು ರೈತರಿಗೆ ಹಿಂದಿರುಗಿಸಬೇಕು ಎಂದವರು ಮನವಿ ಮಾಡಿದ್ದಾರೆ.
ಇತ್ತೀಚಿನ ಕೇಂದ್ರದ ಆಯವ್ಯಯದಲ್ಲಿ ರಫ್ತು ಗೆ ಹೆಚ್ಚು ಒತ್ತು ನೀಡಲಾಗಿದ್ದು, ಇದರಿಂದಾಗಿ ರಾಜ್ಯದ ಮತ್ತು ದೇಶದ ಉದ್ಯಮಿಗಳಿಗೆ ಆರ್ಥಿಕ ಸಂಕಷ್ಟ ಎದುರಾಗುತ್ತದೆ. ಅದರ ಬದಲಾಗಿ ನಮ್ಮಲ್ಲಿಯೇ ಸಿದ್ಧವಸ್ತುಗಳನ್ನು ತಯಾರು ಮಾಡಿ ರಫ್ತು ಮಾಡಿದರೆ ನಮ್ಮ ಉದ್ಯಮಿಗಳಿಗೆ ಸಹಕಾರವಾಗುತ್ತದೆ ಅಲ್ಲದೇ ನಮ್ಮ ದೇಶದ ಬೊಕ್ಕಸಕ್ಕೂ ಹೆಚ್ಚಿನ ಆರ್ಥಿಕ ಹರಿವು ಬರುತ್ತದೆ ಎಂದು ಇನ್ನಿತರೆ ವಿಷಯಗಳನ್ನು ಸಭೆಯಲ್ಲಿ ಮಂಡಿಸಿ ತ್ವರಿತವಾಗಿ ಇತ್ಯರ್ಥ ಪಡಿಸುವಂತೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ
Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ
ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.