ಕಂಪ್ಲಿ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ
200 ಕೋಟಿ ರೂ. ವೆಚ್ಚದಲ್ಲಿ 100 ಪೊಲೀಸ್ ಠಾಣೆಗಳ ನಿರ್ಮಾಣ: ಸಚಿವ ಆರಗ ಜ್ಞಾನೇಂದ್ರ
Team Udayavani, Apr 17, 2022, 4:36 PM IST
ಕಂಪ್ಲಿ: ಕಂಪ್ಲಿಯಲ್ಲಿ 2.70 ಕೋಟಿ ರೂ.ವೆಚ್ಚದಲ್ಲಿ ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ಸಂಜೆ ಶಂಕುಸ್ಥಾಪನೆ ನೆರವೇರಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಕಂಪ್ಲಿ ಸೇರಿದಂತೆ ನಾಲ್ಕು ಕಡೆ ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ರಾಜ್ಯದಲ್ಲಿ ಪೊಲೀಸರಿಗೆ 2 ಬೆಡ್ರೂಂಗಳ 20 ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ 2 ಬೆಡ್ರೂಂಗಳ 10 ಸಾವಿರ ಮನೆಗಳನ್ನು ನಿರ್ಮಿಸಿ ಪೊಲೀಸರಿಗೆ ಹಂಚಿಕೆ ಮಾಡಲಾಗಿದೆ. ಉಳಿದ 10 ಸಾವಿರ ಮನೆಗಳ ನಿರ್ಮಾಣ ಕಾರ್ಯ ನಡೆದಿದೆ ಎಂದರು.
ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ಈಗಾಗಲೇ ವಿಧಿ ವಿಜ್ಞಾನ ಪ್ರಯೋಗಾಲಯ ಆರಂಭಿಸಲಾಗಿದ್ದು, ಶಿವಮೊಗ್ಗದಲ್ಲಿಯೂ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ವಿವರಿಸಿದ ಅವರು ಆರೋಪಗಳ ದೃಢಪಡುವಿಕೆ ಶೇಕಡಾವಾರು (ಕನ್ವಿನ್ಷನ್ ರೇಟ್) ಪ್ರಮಾಣ ತೀರಾ ಕಡಿಮೆ ಇದೆ. ವಿಧಿ ವಿಜ್ಞಾನ ಪ್ರಯೋಗಾಲಯಗಳು ಬಲಪಡಿಸಿದರೆ ಪೊಲೀಸರ ಸಾಕ್ಷಾಧಾರಗಳು ಸ್ಟ್ರಾಂಗ್ ಆಗಲು ಸಾಧ್ಯ ಎಂದರು. ಸೈಬರ್ ವಿಭಾಗವನ್ನು ಬಲಪಡಿಸುವುದಕ್ಕೆ ಎಲ್ಲ ರೀತಿಯ ಯಂತ್ರಗಳನ್ನು ಪೊಲೀಸ್ ಇಲಾಖೆ ಖರೀದಿಸಿದೆ. ಪ್ರತಿ ಜಿಲ್ಲೆಯಲ್ಲಿ ಸೈಬರ್ ವಿಭಾಗಗಳನ್ನು ಆರಂಭಿಸಲಾಗಿದ್ದು, ಸಿಬ್ಬಂದಿಗೆ ವಿಶೇಷ ತರಬೇತಿ ಸಹ ನೀಡಲಾಗಿದೆ ಎಂದರು. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮವಹಿಸಲಾಗುತ್ತಿದೆ ಎಂದು ವಿವರಿಸಿದ ಅವರು ಪೊಲೀಸ್ ಇಲಾಖೆ ಸದೃಢಗೊಳಿಸುವುದರ ಮೂಲಕ ನಮ್ಮ ಸರಕಾರ ಜನರ ರಕ್ಷಣೆಗೆ ಹಾಗೂ ಅವರು ನೆಮ್ಮದಿಯಿಂದ ಜೀವನ ನಡೆಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.
ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಕರಾವಳಿ ಕಾವಲು ಪಡೆಗೆ 12 ಪಡೆಗಳ ಅಗತ್ಯವಿದೆ ಎಂದು ತಿಳಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಕೇಳಿಕೊಂಡಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿ 50 ಎಕರೆ ಜಾಗ ಗುರುತಿಸಿ ಸಂಪುಟ ಸಭೆಯಲ್ಲಿ ಅನುಮೋದಿಸಿ ತನ್ನಿ ಎಂದಿದ್ದಾರೆ ಎಂದರು.
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮವೆಸಗಿರುವುದಕ್ಕೆ ಸಂಬಂ ಧಿಸಿದಂತೆ ಕಲಬುರಗಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಷಿಪ್ರಗತಿಯಲ್ಲಿ ವಿಚಾರಣೆ ನಡೆಸುವಂತೆ ತಿಳಿಸಲಾಗಿದೆ. ಈಗಾಗಲೇ ಈ ಪ್ರಕರಣವನ್ನು ಸಿಒಡಿಗೆ ವಹಿಸಲಾಗಿದ್ದು, ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು. ಕಷ್ಟಪಟ್ಟು ಓದಿದವರಿಗೆ ನ್ಯಾಯ ಒದಗಿಸಿಕೊಡಲಾಗುವುದು ಎಂದರು. ಈ ಸಂದರ್ಭದಲ್ಲಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ, ಜಿಲ್ಲಾಧಿ ಕಾರಿ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಜಿಪಂ ಸಿಇಒ ಜೆ. ಲಿಂಗಮೂರ್ತಿ, ವೈ.ಎಂ. ಸತೀಶ್, ಪುರಸಭೆ ಅಧ್ಯಕ್ಷೆ ಶಾಂತಲಾ ವಿದ್ಯಾಧರ, ಡಿವೈಎಸ್ಪಿ ಎಸ್.ಎಸ್. ಕಾಶೀಗೌಡ, ಪಿಐ ಸುರೇಶ್ ಎಚ್. ತಳವಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು
Bellary; ಜೈಲಿನಲ್ಲಿಂದು ದರ್ಶನ್ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು
Darshan ಭೇಟಿಗೆ ಮಾಹಿತಿ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು
Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.