ಸೈಕ್ಲೋನ್‌: ಮುಂಗಾರು ಕೈಕೊಡುವ ಸಾಧ್ಯತೆ

19 ವರ್ಷಗಳ ಹಿಂದಿನ ಘಟನೆ ಮೆಲುಕು ಹಾಕಿದ ತುಂಗಭದ್ರಾ ಜಲಾಶಯದ ತಂತ್ರಜ್ಞರು

Team Udayavani, May 23, 2022, 2:55 PM IST

cubic

ಬಳ್ಳಾರಿ: ಅಂತರಾಜ್ಯಗಳ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ 19 ವರ್ಷಗಳ ಬಳಿಕ ಸೈಕ್ಲೋನ್‌ ಪರಿಣಾಮದಿಂದ ಮುಂಗಾರು ಹಂಗಾಮಿಗೂ ಮುನ್ನವೇ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದಿರುವುದು ರೈತರಲ್ಲಿ ಸಂತಸ ಮೂಡಿಸಿದರೆ, ಮತ್ತೂಂದೆಡೆ ಸೈಕ್ಲೋನ್‌ ಪ್ರಭಾವದಿಂದ ಮುಂಗಾರು ಕೈಕೊಡುವ ಸಾಧ್ಯತೆಗಳನ್ನೂ ಅಲ್ಲಗೆಳೆಯುವಂತಿಲ್ಲ.

ಹೌದು…! ಇಂಥಹದ್ದೊಂದು ಮುನ್ನೆಚ್ಚರಿಕೆಯ ಆತಂಕವನ್ನು ತುಂಗಭದ್ರಾ ಜಲಾಶಯದ ಇಂಜಿನೀಯರ್‌ಗಳೇ ವ್ಯಕ್ತಪಡಿಸಿದ್ದಾರೆ. ಬರೋಬ್ಬರಿ 19 ವರ್ಷಗಳ ಹಿಂದೆ ಸುಮಾರು 2003-04 ಅಥವಾ 2004-05ನೇ ಸಾಲಿನಲ್ಲೂ ಮುಂಗಾರು ಹಂಗಾಮುಗೂ ಮುನ್ನವೇ ಸೈಕ್ಲೋನ್‌ ಪ್ರಭಾವದಿಂದ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿತ್ತು. ಸೈಕ್ಲೋನ್‌ನ್ನು ಮಾನ್ಸೂನ್‌ ಎನ್ನಲೂ ಬರಲ್ಲ. ಸೈಕ್ಲೋನ್‌ ಪ್ರಭಾವದಿಂದ ಬೀಸುವ ಬಿರುಗಾಳಿ ಪರಿಣಾಮ ಮಾನ್ಸೂನ್‌ ಮೋಡಗಳು ಸಹ ಮುಂದಕ್ಕೆ ಹೋಗುವ ಸಾಧ್ಯತೆಗಳು ದಟ್ಟವಾಗಿದ್ದು, ಮುಂಗಾರು ಕೈಕೊಟ್ಟರೂ ಅಚ್ಚರಿಪಡುವಂತಿಲ್ಲ. 19 ವರ್ಷಗಳ ಹಿಂದೆಯೂ ಹೀಗೆ ಆಗಿತ್ತು. ಸೈಕ್ಲೋನ್‌ ಪರಿಣಾಮ ಅವ ಗೆ ಜಲಾಶಯಕ್ಕೆ ಒಂದಷ್ಟು ನೀರು ಹರಿದು ಬರಬಹುದಾದರೂ, ಕೃಷಿಗೆ ನೀಡುವಷ್ಟು, ನದಿಗೆ ಹರಿಸುವಷ್ಟು ಸಿಗುವುದು ಅನುಮಾನ. 19 ವರ್ಷಗಳ ಹಿಂದೆಯೂ ಹೀಗೆ ಆಗಿದ್ದರಿಂದ ಆ ವರ್ಷ 2ನೇ ಬೆಳೆಗೆ ನೀರು ಕೊಡಲು ಆಗಿಲ್ಲ ಎಂದು ಜಲಾಶಯದ ತಾಂತ್ರಿಕ ತಜ್ಞರೊಬ್ಬರು ಅಂದಿನ ದಿನಗಳನ್ನು ಮೆಲುಕು ಹಾಕಿದರು.

ನಾಲ್ಕು ದಿನದಲ್ಲಿ 15 ಟಿಎಂಸಿ ನೀರು ಸಂಗ್ರಹ

ಸೈಕ್ಲೋನ್‌ ಪರಿಣಾಮ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಕಳೆದ ನಾಲ್ಕು ದಿನಗಳಲ್ಲಿ ಸುಮಾರು 15 ಟಿಎಂಸಿ ಅಡಿಗೂ ಹೆಚ್ಚು ನೀರು ಹರಿದು ಬಂದಿದೆ. ಮೇ 19 ರಂದು 3100, ಮೇ 20ಕ್ಕೆ 16040 ಕ್ಯೂಸೆಕ್‌ ಇದ್ದ ಒಳಹರಿವಿನ ಪ್ರಮಾಣ, ಮೇ 21ಕ್ಕೆ 61189 ಕ್ಯೂಸೆಕ್‌, ಮೇ 22ಕ್ಕೆ 89664 ಕ್ಯೂಸೆಕ್‌ ಹೆಚ್ಚಳವಾಗಿದ್ದು, ಕಳೆದ ನಾಲ್ಕು ದಿನಗಳಲ್ಲಿ 15ಕ್ಕೂ ಹೆಚ್ಚು ಟಿಎಂಸಿ ಅಡಿ ನೀರು ಹರಿದುಬಂದಿದ್ದು, ಜಲಾಶಯದಲ್ಲಿ 27.48 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇದೀಗ ಎರಡು ದಿನಗಳಿಂದ ಸೈಕ್ಲೋನ್‌ ಪ್ರಭಾವ ಕಡಿಮೆಯಾಗಿದ್ದು, ಇನ್ನೊಂದಿಷ್ಟು ನೀರು ಹರಿದು ಬರಬಹುದು. ಆದರೆ, ಇಷ್ಟು ಪ್ರಮಾಣದ ನೀರನ್ನು ಕೃಷಿಗೆ ಹರಿಸಲಾಗಲ್ಲ. ಮುಂಗಾರು ಬಂದರೆ ಸಮಸ್ಯೆಯಿಲ್ಲ. ಸೈಕ್ಲೋನ್‌ ಪ್ರಮಾಣ ಮುಂಗಾರು ಕೈಕೊಟ್ಟರೆ ತೊಂದರೆಯಾಗುವ ಸಾಧ್ಯತೆಯಿದೆ ಎಂಬುದು ಜಲಾಶಯದ ತಜ್ಞರ ಅಭಿಪ್ರಾಯ.

ಕೃಷಿಗೆ ಕನಿಷ್ಠ 55 ಟಿಎಂಸಿ ನೀರು ಬೇಕು

ನೆರೆಯ ಆಂಧ್ರ, ತೆಲಂಗಾಣ ಸೇರಿ ಅವಿಭಜಿತ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಒಂದು ಬೆಳೆಗೆ ಕನಿಷ್ಠ 40 ಟಿಎಂಸಿ ಅಡಿಗೂ ಹೆಚ್ಚು ನೀರು ಬೇಕಾಗಲಿದೆ. ಹಾಗಾಗಿ ಜಲಾಶಯದಲ್ಲಿ ಕನಿಷ್ಠ 55 ಟಿಎಂಸಿ ಅಡಿ ನೀರು ಸಂಗ್ರಹವಿದ್ದಲ್ಲಿ ಐಸಿಸಿ ಸಭೆಯಲ್ಲಿ ಮುಂದೆ ನೀರು ಹರಿದು ಬರುವ ಪ್ರಮಾಣವನ್ನು ಆಧರಿಸಿ ನಿರ್ಣಯಗಳನ್ನು ಕೈಗೊಂಡು ಕೃಷಿ ಚಟುವಟಿಕೆಗೆ ನೀರು ಕೊಡಬಹುದು. ಆದರೆ, ಜಲಾಶಯದಲ್ಲಿ ಸದ್ಯ 27 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಇನ್ನೊಂದು ಐದಾರು ಟಿಎಂಸಿಯಷ್ಟು ನೀರು ಹರಿದು ಬರಬಹುದು. ಇಷ್ಟು ಪ್ರಮಾಣದಲ್ಲಿ ಐಸಿಸಿ ಸಭೆ ನಡೆಸಿ ನಿರ್ಣಯ ಕೈಗೊಳ್ಳಲೂ ಆಗಲ್ಲ. ಇನ್ನೊಂದು 10-15 ದಿನಗಳ ಕಾಲ ನೀರು ಹರಿದು ಬಂದರೆ ಅನುಕೂಲವಾಗುತ್ತಿತ್ತು ಎನ್ನುತ್ತಾರೆ ತಂತ್ರಜ್ಞರು. ಸದ್ಯ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ 1605.56 ಅಡಿಯಿದ್ದು, 89964 ಕ್ಯೂಸೆಕ್‌ ಒಳಹರಿವು ಇದ್ದು, 255 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. 27.48 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಸೈಕ್ಲೋನ್‌ ರೂಪದಲ್ಲಿ ಕೃಪೆ ತೋರಿರುವ ವರುಣ, ಮುಂಗಾರನ್ನು ಮುಂದೂಡುವನೋ ಕೃಪೆ ತೋರುವನೋ ಕಾದು ನೋಡಬೇಕಾಗಿದೆ.

ಮುಂಗಾರು ಹಂಗಾಮುಗೂ ಮುನ್ನ ಸೈಕ್ಲೋನ್‌ ಬರಬಾರದು. ಇದರಿಂದ ಮಾನ್ಸೂನ್‌ ಮುಂದೂಡುವ ಸಾಧ್ಯತೆಗಳು ದಟ್ಟವಾಗಿದೆ. 19 ವರ್ಷಗಳ ಹಿಂದೆಯೂ ಅವಧಿಗೆ ಮುನ್ನವೇ ಸೈಕ್ಲೋನ್‌ ಪರಿಣಾಮದಿಂದ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು, ಅಂದು ಎರಡನೇ ಬೆಳೆಗೆ ನೀರು ಕೊಡಲಾಗಿಲ್ಲ. ಅಲ್ಲದೇ, ಸೈಕ್ಲೋನ್‌ ಪರಿಣಾಮದಿಂದ ಜಲಾಶಯಕ್ಕೆ ನಾಲ್ಕು ದಿನಗಳಲ್ಲಿ 20ಕ್ಕೂ ಹೆಚ್ಚು ಟಿಎಂಸಿ ನೀರು ಹರಿದು ಬಂದಿದ್ದು, ಇನ್ನು 10-15 ದಿನಗಳು ಮುಂದುವರೆದಿದ್ದರೆ ಅನುಕೂಲವಾಗುತ್ತಿತ್ತು. ಇದೀಗ ಸೈಕ್ಲೋನ್‌ ಕಡಿಮೆಯಾಗಿದ್ದು, ಮುಂಗಾರು ಹಂಗಾಮನ್ನೇ ಅವಲಂಬಿಸಬೇಕಾಗಿದೆ. -ಬಸಪ್ಪ ಜಾನೇಕರ್‌, ಮುಖ್ಯ ಅಭಿಯಂತರರು, ತುಂಗಭದ್ರಾ ಜಲಾಶಯ.

-ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.