Renukaswamy Case ಚಾರ್ಜ್ಶೀಟ್ನಲ್ಲಿ ಸಾಕ್ಷಿಗಳ ಹೇಳಿಕೆ ಕೇಳಿ ದಂಗಾದ ದರ್ಶನ್
Team Udayavani, Sep 10, 2024, 11:42 PM IST
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಕೋರ್ಟ್ಗೆ ಸಲ್ಲಿಕೆಯಾಗಿರುವ ಚಾರ್ಜ್ಶೀಟ್ ನಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಸಾಕ್ಷಿಗಳು ನೀಡಿರುವ ಹೇಳಿಕೆಗಳನ್ನು ಕೇಳಿ ದಂಗಾಗಿರುವ ಆರೋಪಿ ದರ್ಶನ್ ಮಂಗಳವಾರದ ಬೆಳಗಿನ ಉಪಾಹಾರವನ್ನೇ ಸೇವಿಸಲಿಲ್ಲ ಎನ್ನಲಾಗಿದೆ.
ಕೋರ್ಟ್ಗೆ ಸಲ್ಲಿಕೆಯಾಗಿರುವ ಚಾರ್ಜ್ಶೀಟ್ನಲ್ಲಿ 30 ಸಾಕ್ಷಿಗಳು ಪರೋಕ್ಷವಾಗಿ, ಮೂವರು ಪ್ರತ್ಯಕ್ಷವಾಗಿ ಹೇಳಿಕೆಗಳನ್ನು ನೀಡಿದ್ದು, ಇದನ್ನು ಕೇಳಿದ ದರ್ಶನ್ ಆತಂಕಕ್ಕೊಳಗಾಗಿದ್ದಾನೆ. ಜಾಮೀನು ಸಿಗುತ್ತದೋ, ಇಲ್ಲವೋ ಎಂದು ಪರದಾಡುತ್ತಿದ್ದಾನೆನ್ನಲಾಗಿದೆ.
ಕುಟುಂಬದ ಸದಸ್ಯರೊಂದಿಗೆ ದೂರವಾಣಿಯಲ್ಲಿ ಮಾತನಾಡ ಬಹುದಾದ ಪ್ರಿಸನ್ ಕಾಲ್ ಸಿಸ್ಟಮ್ ಅನ್ನು ಹೈ ಸೆಕ್ಯುರಿಟಿ ಸೆಲ್ನಲ್ಲೇ ಮಂಗಳವಾರ ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಲಾಗಿತ್ತು. ಅದರ ಮೂಲಕ ದರ್ಶನ್ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ್ದಾನೆ.
ರೇಣುಕಾಸ್ವಾಮಿ ಅಪಹರಣದ
ವೇಳೆ ತುಮಕೂರಲ್ಲೂ ಪಾರ್ಟಿ
ತುಮಕೂರು: ರೇಣುಕಾಸ್ವಾಮಿ ಕೊಲೆ ಆರೋಪಿಗಳು ಆತನನ್ನು ಚಿತ್ರದುರ್ಗದಿಂದ ಅಪಹರಿಸಿ ಬೆಂಗಳೂರಿಗೆ ಕರೆದೊಯ್ಯವ ವೇಳೆ ತುಮಕೂರಿಗೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಂಗಾಪುರದ ಲಕ್ಷ್ಮೀ ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ಪಾರ್ಟಿ ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ.
ಆರೋಪಿಗಳಾದ ರಾಘವೇಂದ್ರ, ಜಗದೀಶ್, ಅನುಕುಮಾರ್ ಪಾರ್ಟಿ ಮಾಡಿ ರೇಣುಕಾಸ್ವಾಮಿಯಿಂದಲೇ ಫೋನ್ ಪೇ ಮೂಲಕ 700 ರೂ. ಬಿಲ್ ಕೊಡಿಸಿದ್ದರು. ದಾರಿ ಮಧ್ಯೆ ಆತನ ಚಿನ್ನದ ಸರ, ವಾಚ್, ಉಂಗುರ, ಕರಡಿಗೆಯನ್ನು ಸುಲಿಗೆ ಮಾಡಿ ಹಲ್ಲೆ ಮಾಡಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಬಾರ್ನಲ್ಲಿ ಮದ್ಯ ಖರೀದಿಸಿದ್ದು, ಟೋಲ್ನಲ್ಲಿ ಹಣ ಪಾವತಿಸಿರುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜೈಲಿನಲ್ಲಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್, ಹೇಮಂತ್
Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್ಗೆ “ಕಾನೂನು ಸಲಹೆ’
Bellary: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್: ಪ್ರಸಾದ,ಡ್ರೈಫ್ರೂಟ್ಸ್ ತಂದ ಪತ್ನಿ
Valmiki scam; ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಶ್ರೀರಾಮುಲು ದಾವೆ
Bellary: ಬಳ್ಳಾರಿ ಜೈಲಿಗೆ ಬಂದ ಶಿಗ್ಲಿ ಬಸ್ಯಾ; ದರ್ಶನ್ ಪರ ವಾದ ಮಾಡಲು ಸಿದ್ದ ಎಂದ ಬಸ್ಯಾ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.