ಜೀತ ನಿರ್ಮೂಲನೆ ಜಾಗೃತಿಯಿಂದ ಸಾಧ್ಯ

ಹಳ್ಳಿಗಳಲ್ಲಿ ಇಂದಿಗೂ ಬಿಟ್ಟಿ ಚಾಕರಿ ಮಾಡುವುದು ಜೀತ ಪದ್ಧತಿಗಿಂತ ನಿಕೃಷ್ಟವಾಗಿದೆ

Team Udayavani, Feb 12, 2020, 4:49 PM IST

12-February-26

ದಾವಣಗೆರೆ: ಸಾಲ ತೀರುವಳಿ, ಸಂಪ್ರದಾಯ ಎನ್ನುವಂತೆ ಜೀತಪದ್ಧತಿಯನ್ನ ಜಾಗೃತಿ ಮೂಲಕ ನಿರ್ಮೂಲನೆ ಮಾಡಬೇಕು ಎಂದು ಜೀವಿಕ- ಜೀತ ವಿಮುಕ್ತಿ ಕರ್ನಾಟಕದ ಸಂಸ್ಥಾಪಕಿ ಕಿರಣ್‌ ಕಮಲ್‌ ಪ್ರಸಾದ್‌ ತಿಳಿಸಿದ್ದಾರೆ.

ಮಂಗಳವಾರ ಜೀವಿಕ- ಜೀತ ವಿಮುಕ್ತಿ ಕರ್ನಾಟಕದ ವತಿಯಿಂದ ಬಿಟ್ಟಿ ಚಾಕರಿ ಮಾಡುವವರ ಕಾನೂನು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಟ್ಟಿ ಚಾಕರಿ ಪದ್ಧತಿಯನ್ನೇ ಜೀತ ಎಂದು ಪರಿಗಣಿಸಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ಜೀವಿಕ- ಜೀತ ವಿಮುಕ್ತಿ ಕರ್ನಾಟಕ ಸಂಸ್ಥೆ ಪ್ರಾರಂಭಿಸಲಾಗಿದೆ.

ಮಾಹಿತಿಯಂತೆ ಉತ್ತರ ಕರ್ನಾಟಕದಲ್ಲಿ 15ಸಾವಿರ ಜನ ಈಗಲೂ ಹಣ, ಏನನ್ನೂ ಪಡೆಯದೆ ಉಚಿತವಾಗಿ ಕೆಲಸ ಮಾಡುತ್ತಿದ್ದಾರೆ. ಅಂದರೆ ಜೀತ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಈ ಕೆಲಸ ಮಾಡುವಂತಹವರಿಗೆ ಯಾವುದೇ ಜಮೀನು, ಮನೆ ಇರುವುದಿಲ್ಲ. ಸಾಲಕ್ಕಾಗಿ ಅಥವಾ ಸಂಪ್ರದಾಯದ ಹೆಸರಿನಲ್ಲಿ ಮುಂದುವರೆಯುತ್ತಿರುವ ಜೀತ ಪದ್ಧತಿಯನ್ನ ಒಗ್ಗಟ್ಟಿನಿಂದ ಮತ್ತು ಜಾಗೃತಿ ಕಾರ್ಯಕ್ರಮಗಳ ಮೂಲಕ ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.

ಜೀತ ಪದ್ಧತಿಯಲ್ಲಿ ಕೆಲಸ ಮಾಡುವಂತಹವರಿಗೆ ಸರ್ಕಾರ ನಿಗದಿ ಮಾಡಿದ ಕನಿಷ್ಟ ದಿನಗೂಲಿ ದೊರೆಯುವುದಿಲ್ಲ. ಅಂತಹ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುವುದಿಲ್ಲ. ಸರ್ಕಾರದಿಂದ ಪುನರ್ವಸತಿ ಹಣ ಬರುತ್ತಾದರೂ, ಶೈಕ್ಷಣಿಕವಾಗಿ ಹಿಂದುಳಿದಂತಹವರು ದಬ್ಟಾಳಿಕೆಗೆ ಹೆದರಿ ದಾನದ ಕಾಳಿಗಾಗಿ ಬಿಟ್ಟಿ ಚಾಕರಿ ಮಾಡುವುದು ಇದೆ. ಒಗ್ಗಟ್ಟಿನಿಂದ ಪ್ರತಿರೋಧ ಒಡ್ಡಿದರೆ ಮಾತ್ರವೇ ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.

ಆವರಗೊಳ್ಳ ಗ್ರಾಮ ಪಂಚಾಯತಿ ಸದಸ್ಯ ದೊಡ್ಡಪ್ಪ ಮಾತನಾಡಿ, ದೊಡ್ಡವರ ಮನೆಕೆಲಸಗಳಿಗೆ, ಹಬ್ಬ-ಜಾತ್ರೆಗಳಲ್ಲಿ ಬಿಟ್ಟಿ ಚಾಕರಿ ಮಾಡಲು ಇಂದಿಗೂ ಬಳಸಿಕೊಳ್ಳುವುದು ಜನಾಂಗದ ಅಭಿವೃದ್ಧಿಗೆ ತಡೆಗೋಡೆಯಾಗಿದೆ. ಬಿಟ್ಟಿ ಚಾಕರಿ ಮಾಡುವಂತಹವರನ್ನ ಕೀಳಾಗಿ ಕಾಣುವಂತಹವರು ಮನೆಯಲ್ಲಿನ ದನ-ಕರು ಸತ್ತರೆ ಮಾತ್ರ ನೆನಪು ಮಾಡಿಕೊಳ್ಳುತ್ತಾರೆ ಎಂದು ಅಳಲು ತೋಡಿಕೊಂಡರು.

ಹಳ್ಳಿಗಳಲ್ಲಿ ಇಂದಿಗೂ ಬಿಟ್ಟಿ ಚಾಕರಿ ಮಾಡುವುದು ಇದೆ. ಜೀತ ಪದ್ಧತಿಗಿಂತ ನಿಕೃಷ್ಟವಾಗಿದೆ. ಜಾತ್ರೆಯಲ್ಲಿ 5ರಿಂದ 6 ಜನ ಒಂದು ವಾರ ಕೆಲಸ ಮಾಡಿದರೂ 100 ರೂಪಾಯಿ ಸಿಗುವುದಿಲ್ಲ. 10-20 ರೂಪಾಯಿಗೆ ಶವದ ಕೆಲಸ ಮಾಡುತ್ತೇವೆ. ಸತ್ತ ಜಾನುವಾರುಗಳನ್ನು ಎಸೆಯಲು ಅಲೆಯಬೇಕು. ಭಯದ ವಾತಾವರಣ, ಬಡತನದಿಂದ ಚಕಾರವೆತ್ತದೆ ಎಲ್ಲವನ್ನೂ ಸಹಿಸಬೇಕಾಗಿದೆ ಎಂದರು.

ಮನವಿ ಪತ್ರ ಸ್ವೀಕರಿಸಿದ ಉಪವಿಭಾಗಾಧಿಕಾರಿ ಡಾ| ಮಮತಾ ಹೊಸಗೌಡರ್‌, ಬಡತನದ ಕಾರಣಗಳಿಗಾಗಿ ಬಿಟ್ಟಿ ಚಾಕರಿ ಮಾಡುವುದು ವಿಷಾದನೀಯ. ಬೇಡಿಕೆಗಳ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತರಲಾಗುವುದು. ಸಂಧ್ಯಾ ಸುರಕ್ಷಾ, ವಿಧವಾ, ವೃದ್ಧಾಪ್ಯ ವೇತನ ಸೌಲಭ್ಯ ವಂಚಿತರಾದವರ ಪಟ್ಟಿ ನೀಡಿದರೆ ಸೌಲಭ್ಯ ದೊರಕಿಸುವುದಾಗಿ ಆಶ್ವಾಸನೆ ನೀಡಿದರು.

ಜೀವಿಕ ಜಿಲ್ಲಾ ಸಂಚಾಲಕ ಚಂದ್ರಪ್ಪ, ತಾಲೂಕು ಸಂಚಾಲಕ ಎನ್‌. ಮಂಜುನಾಥ್‌, ಬೇತೂರು ಮಂಜುನಾಥ್‌, ಬಾಬಣ್ಣ ಜಗಳೂರು, ಚಿಕ್ಕಮ್ಮ ಇತರರು ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.