ಕೆಲಸದಲ್ಲಿ ದೇವರ ಕಾಣುವುದೇ ಕಾಯಕ: ಜಿಲ್ಲಾಧಿಕಾರಿ ಬೀಳಗಿ


Team Udayavani, Feb 2, 2020, 4:25 PM IST

2-Febraury-26

ದಾವಣಗೆರೆ: ನೌಕರಿ ಮತ್ತು ಕಾಯಕಗಳೆರೆಡು ಪರಸ್ಪರ ಭಿನ್ನವಾಗಿದ್ದು, ನಾವು ಮಾಡುವ ಕೆಲಸದಲ್ಲೇ ದೇವರನ್ನು ಕಂಡಾಗ ಆ ಕೆಲಸ ಕಾಯಕವಾಗುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಡಿವಾಳ ಮಾಚಿದೇವ ಸಮಾಜ ಮತ್ತು ಜಿಲ್ಲಾ ಸವಿತಾ ಸಮಾಜದ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಮಡಿವಾಳ ಮಾಚಿದೇವ ಸಮುದಾಯ ಭವನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಶ್ರೀ ಮಡಿವಾಳ ಮಾಚಿದೇವ ಮತ್ತು ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಮಹಾತ್ಮರ ಕಾಯಕ ಮತ್ತು ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆದಾಗ ನಾವು ಆಚರಿಸುವ ಜಯಂತಿ ಅರ್ಥಪೂರ್ಣವಾಗುತ್ತವೆ ಎಂದರು.

ಲಿಂಗ ಹಿಡಿದು ಧ್ಯಾನ ಮಾಡಿದರೆ ಮಾತ್ರ ದೇವರನ್ನು ಕಾಣಲು ಸಾಧ್ಯ ಎಂದುಕೊಳ್ಳದೇ ನಾವು ಮಾಡುವ ಕೆಲಸದಲ್ಲೇ ದೇವರನ್ನು ಕಾಣುವ ಪ್ರಯತ್ನ ಮಾಡಬೇಕು. ದೇವರು ದಯಪಾಲಿಸಿರುವ ಕೆಲಸವನ್ನು ನಿಷ್ಟೆಯಿಂದ ಮಾಡಿ, ಆ ಕೆಲಸದ ಫಲವನ್ನು ಕೇವಲ ನಾವು ಮತ್ತು ನಮ್ಮವರಿಗಷ್ಟೇ ಎಂದುಕೊಳ್ಳದೇ ಸಮಾಜಕ್ಕೆ ದಾಸೋಹ ನೀಡಿದರೆ ಅದು ಕಾಯಕ ಆಗುತ್ತದೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ಸಂಭವಿಸಿದ ಅತಿವೃಷ್ಟಿ ಹಿನ್ನಲೆಯಲ್ಲಿ ಶ್ರೀ ಮಡಿವಾಳ ಮಾಚಿದೇವ ಮತ್ತು ಶ್ರೀ ಸವಿತಾ ಮಹರ್ಷಿ ಜಯಂತಿ ಸರಳವಾಗಿ ಆಚರಿಸುವ ಮೂಲಕ ಕಾರ್ಯಕ್ರಮದ ಅನುದಾನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು. ಪ್ರಕೃತಿ ವಿಕೋಪದಿಂದ ನಲುಗಿರುವ ಜನರಿಗೆ ನಮ್ಮ ಜಿಲ್ಲೆಯಿಂದ ಸಹಾಯ ನೀಡುವ ಉದ್ದೇಶದಿಂದ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಪಂಚಾಯತ್‌ ಸಿಇಓ ಪದ್ಮ ಬಸವಂತಪ್ಪ ಮಾತನಾಡಿ, ಮಹನೀಯರು ಸಮಾನತೆ, ಸೌಹಾರ್ದತೆಯ ತತ್ವಗಳನ್ನು ಸಾಮಾನ್ಯ ಜನರಿಗೆ ಅರ್ಥವಾಗುವಂತೆ ಸಾಮಾನ್ಯ ಭಾಷೆಯಲ್ಲಿ ವಚನಗಳನ್ನು ರಚಿಸುವುದರ ಮೂಲಕ ಶರಣರೆನಿಸಿಕೊಂಡಿದ್ದಾರೆ. ಅಂತಹ ಶರಣರ ತತ್ವ ಪದಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಆಚರಣೆಗಳನ್ನು ಸಾರ್ಥಕಗೊಳಿಸಬೇಕು ಎಂದು ತಿಳಿಸಿದರು.

ಬೀದರ್‌ನ ಬಸವ ಅನುಭವ ಮಂಟಪದಲ್ಲಿ ಎಲ್ಲಾ ಶರಣರ ತತ್ವ ಆದರ್ಶಗಳನ್ನು ಹಾಗೂ ಶರಣರ ಜೀವನವನ್ನು ಸಾರುವ ಕುಟೀರಗಳಿವೆ. ಪ್ರಸ್ತುತ ರಾಜ್ಯದಲ್ಲಿ 31 ಶರಣರ ಜಯಂತಿ ಆಚರಿಸಲಾಗುತ್ತಿದ್ದು, ನಮ್ಮ ಜಿಲ್ಲೆಯಲ್ಲಿ ಎಲ್ಲಾ ಶರಣರ ಜಯಂತಿಗಳನ್ನು ಒಂದೇ ಕಡೆ ಆಚರಿಸಿ, ಅವರ ತತ್ವ ಆದರ್ಶಗಳನ್ನು ಇಂದಿನ ಯುವಜನಾಂಗಕ್ಕೆ ಪರಿಚಯಿಸುವ ಪ್ರಯತ್ನವಾಗಬೇಕೆಂದು ಸಲಹೆ ನೀಡಿದರು.

ಉಪನ್ಯಾಸ ನೀಡಿದ ಅನಿತ ದೊಡ್ಡಗೌಡರ್‌, ಅರಸುತನ ಮೇಲಲ್ಲ, ಮಡಿವಾಳ ವೃತ್ತಿ ಕೀಳಲ್ಲ ಎನ್ನುವ ಮಾತಿನಂತೆ ಮಡಿವಾಳ ಮಾಚಿದೇವರು ತಮ್ಮ ಛಲ ಕಾಯಕವನ್ನು ಜಗತ್ತಿಗೆ ತೋರಿಸಿದ್ದಾರೆ. ಅವರು ಶಿವ ಶರಣರ ಬಟ್ಟೆ ಸ್ವಚ್ಚಗೊಸುವ ಕಾಯಕದ ಜೊತೆ ಕ್ಷತ್ರಿಯರೂ ಆಗಿದ್ದರು ಎಂದರು.

12ನೇ ಶತಮಾನದಲ್ಲಿ ಮಹಿಳೆಯರ, ಮಕ್ಕಳ ಸ್ಥಿತಿ ಶೋಚನೀಯವಾಗಿತ್ತು. ಮಹಿಳೆಯರು ಅಸಹಾಯಕರು ಮತ್ತು ಅಶಕ್ತರಾಗಿದ್ದರು. ಇತಹ ಕಾಲದಲ್ಲಿ ವಚನಗಳು ತುಂಬಾ ಪ್ರಭಾವ ಬೀರಿದ್ದವು ಎಂದ ಅವರು, ಮಡಿವಾಳ ಮಾಚಿದೇವರ ಹುಟ್ಟು ಮತ್ತು ಅವರ ಜೀವನದ ಬಗ್ಗೆ ಅವರ ವಚನಗಳ ಮೂಲಕ ತಿಳಿಸಿಕೊಟ್ಟರು.

ವಕೀಲ ಎನ್‌. ರಂಗಸ್ವಾಮಿ, ಸವಿತ ಸಮಾಜದ ಮೂಲ ಪುರುಷ ಶ್ರಿ ವಿಷ್ಣು ನಾಮದಿಂದ ಸೃಷ್ಟಿಯಾದವರು ಸವಿತಾ ಮಹರ್ಷಿ. ಮನುಷ್ಯನಿಗೆ ಹುಟ್ಟಿನಿಂದ ಸಾಯುವವರೆಗೆ ಕ್ಷೌರಿಕರ ಅಗತ್ಯವಿದೆ. ಮನುಷ್ಯನ ಪಾಪ ತೊಳೆಯುವ ಕೆಲಸವನ್ನು ಕ್ಷೌ ರಿಕರು ಮಾಡುತ್ತಾರೆ. ಅಷ್ಟೇ ಅಲ್ಲದೆ ಸಂಗೀತ ವಾದ್ಯ ನುಡಿಸುವ ಕಾರ್ಯದಲ್ಲಿ ಹೆಚ್ಚು ಪ್ರಸಿದ್ದಿ ಹೊಂದಿದ ಸಮುದಾಯವಾಗಿದೆ. ಹಡಪದ ಅಣ್ಣಪ್ಪನವರು ತಮ್ಮ ನಿಷ್ಠೆಯ ಕಾಯಕ ಮಾಡುತ್ತಾ ಬಂದವರು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಸ್ವಾಗತಿಸಿದರು. ಉಮೇಶ್‌. ಎಚ್‌.ಜಿ ನಿರೂಪಿಸಿದರು. ಮಡಿವಾಳ ಮಾಚಿದೇವ ಸಮುದಾಯದ ಜಿಲ್ಲಾಧ್ಯಕ್ಷ ಬಾಲರಾಜ್‌, ಮಡಿವಾಳ ಸಂಘದ ಕಾರ್ಯದರ್ಶಿ ಧನಂಜಯ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ನಾಗೇಂದ್ರ, ಹಾಗೂ ವಿವಿಧ ಸಮಾಜದ ಮುಖಂಡರು ಮತ್ತು ಸಮಾಜದ ಜನರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.