ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ

ಅಂಬೇಡ್ಕರ್‌ ವೃತ್ತದಿಂದ 20 ಮೀಟರ್‌ ಉದ್ದದ ರಸ್ತೆ ಸಂಪೂರ್ಣ ಹಾಳು

Team Udayavani, Oct 11, 2020, 7:35 PM IST

ballary-tdy-1

ಸಿರುಗುಪ್ಪ: ನಗರದಲ್ಲಿ ಹಾದುಹೋಗುವ 150 ಎ ಚಾಮರಾಜನಗರ-ಬೀದರ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಗರದ ಅಂಬೇಡ್ಕರ್‌ ವೃತ್ತದಿಂದ 20ಮೀಟರ್‌ ಉದ್ದದ ರಸ್ತೆಯು ತೀವ್ರವಾಗಿಹದಗೆಟ್ಟು ಹೋಗಿದ್ದು, ಇಲ್ಲಿ ವಾಹನಗಳು ಸಂಚರಿಸಲು ತೀವ್ರ ತೊಂದರೆ ಯಾಗಿದ್ದು, ತಗ್ಗುದಿನ್ನೆಗಳಿಂದ ಕೂಡಿದ ರಸ್ತೆಯಲ್ಲಿ ನರ್ತಿಸುತ್ತ ಹೋಗುವುದು ಸಾಮಾನ್ಯವಾಗಿದೆ.

ಮಳೆಗಾಲ ಆರಂಭವಾಗುತ್ತಿದ್ದಂತೆ ಈ ವೃತ್ತದ ಸುತ್ತಮುತ್ತ ರಸ್ತೆಯಲ್ಲಿ ತಗ್ಗುದಿನ್ನೆಗಳು ಬೀಳುವುದು ಸಾಮಾನ್ಯವಾಗಿದೆ. ಇದರಿಂದಾಗಿ ಮಳೆಗಾಲದಲ್ಲಿತಗ್ಗುದಿನ್ನೆಗಳಲ್ಲಿ ವಾಹನ ಸವಾರರು, ಸರ್ಕಸ್‌ಮಾಡುತ್ತ ವಾಹನ ಚಲಾಯಿಸುತ್ತಾರೆ, ಸ್ವಲ್ಪ ಆಯತಪ್ಪಿದರೂ ನೆಲಕ್ಕೆ ಬಿದ್ದು ಗಾಯಗೊಳ್ಳುವುದು ಸಾಮಾನ್ಯವಾಗಿದೆ. ಅಲ್ಲದೆ ಈ ರಸ್ತೆಯ ಅಕ್ಕಪಕ್ಕದಲ್ಲಿರುವ ಅಂಗಡಿಗಳಿಗೂಧೂಳು ನಿರಂತರವಾಗಿ ಆವರಿಸುತ್ತಿದ್ದು, ಅಂಗಡಿ ಮಾಲೀಕರು ಅಸ್ತಮಾ, ಕೆಮ್ಮು ಮುಂತಾದ ಕಾಯಿಲೆಗಳಿಂದ ನರಳುತ್ತಿದ್ದಾರೆ.

ಹೇಳಿಕೇಳಿ ಇದು ರಾಷ್ಟ್ರೀಯ ಹೆದ್ದಾರಿಯಾಗಿರುವುದರಿಂದ 5 ಸಾವಿರಕ್ಕೂ ಹೆಚ್ಚು ಭಾರಿ ಸರಕು ಸಾಗಿಸುವ ಲಾರಿಗಳು, ಬಸ್‌ಗಳು, ಲಘುವಾಹನಗಳು, ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದು, ರಸ್ತೆಯು ಮತ್ತಷ್ಟು, ಇನ್ನಷ್ಟು ಹದಗೆಡಲು ಕಾರಣವಾಗಿದೆ. ಆದರೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಇಲ್ಲಿ ಕೇವಲ ಗುಂಡಿ ಮುಚ್ಚುವ ಕೆಲಸ ಮಾಡಿ ಕೈತೊಳೆದುಕೊಳ್ಳುತ್ತಿದ್ದಾರೆ. ಭಾರಿವಾಹನಗಳ ಓಡಾಟದಿಂದ ಮತ್ತೆ ಮತ್ತೆ ಗುಂಡಿಗಳು ಬೀಳುವುದು ಮಾಮೂಲಾಗಿದೆ. ರಸ್ತೆಗೆ ಹಾಕಿದ್ದ ಸಂಪೂರ್ಣಡಾಂಬರ್‌ ಕಿತ್ತುಹೋಗಿದ್ದು, ಜಲ್ಲಿಕಲ್ಲುಗಳು ಕಾಣಿಸಿಕೊಂಡಿದ್ದು, ಭಾರಿ ವಾಹನಗಳು ಸಂಚರಿಸುವಾಗಟೈರ್‌ ಅಡಿಯಿಂದ ಜಲ್ಲಿಕಲ್ಲುಗಳು ದ್ವಿಚಕ್ರವಾಹನ ಸವಾರರಿಗೆ ಸಿಡಿದು ಅನೇಕರು ಗಾಯಗೊಂಡ ಘಟನೆಗಳು ನಡೆದಿವೆ.

ಸಿಸಿ ರಸ್ತೆ ನಿರ್ಮಾಣಕ್ಕೆ ಒತ್ತಾಯ: ಈ ವೃತ್ತದಲ್ಲಿ ಪದೇ ಪದೇ ಡಾಂಬರ್‌ ಕಿತ್ತುಹೋಗುತ್ತಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ಅನಾನೂಕೂಲವಾಗುತ್ತಿದೆ. ಆದ್ದರಿಂದ ಇಲ್ಲಿ ಸಿ.ಸಿ.ರಸ್ತೆಯನ್ನು ನಿರ್ಮಾಣ ಮಾಡಿದರೆಅನುಕೂಲವಾಗುತ್ತದೆ ಎಂಬುದು ಈಭಾಗದ ಜನರ ಅಭಿಪ್ರಾಯವಾಗಿದೆ.

ಅಂಬೇಡ್ಕರ್‌ ವೃತ್ತದ ಭಾಗದಲ್ಲಿ ವರ್ಷದ 9 ತಿಂಗಳು ರಸ್ತೆಯು ಹದಗೆಟ್ಟು ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗುತ್ತದೆ. ಆದ್ದರಿಂದ ಇಲ್ಲಿ ಉತ್ತಮವಾದ ಸಿ.ಸಿ.ರಸ್ತೆಯನ್ನು ನಿರ್ಮಾಣ ಮಾಡಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಕಾರಿಗಳು ಕ್ರಮ ಕೈಗೊಳ್ಳಬೇಕು. -ಗಂಗಾಧರ, ಮಲ್ಲಯ್ಯ, ನಿವಾಸಿಗಳು

ನಗರದಲ್ಲಿ ಹದಗೆಟ್ಟಿರುವ ಹೆದ್ದಾರಿಯನ್ನು ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. -ರಾಘವೇಂದ್ರ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಎಇಇ

 

-ಆರ್‌. ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.