Actor: ದರ್ಶನ್ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ
ಜೈಲು ಅಧಿಕಾರಿಗಳಿಗೆ ತಲುಪಿದ ದರ್ಶನ್ ಎಂಆರ್ಐ ವರದಿ
Team Udayavani, Oct 23, 2024, 11:19 PM IST
ಬಳ್ಳಾರಿ: ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಬೆನ್ನು ನೋವಿನ ಎಂಆರ್ಐ, ಸಿಟಿ ಸ್ಕ್ಯಾನಿಂಗ್ ವರದಿ ಬುಧವಾರ ಜೈಲು ಅಧಿಕಾರಿಗಳಿಗೆ ವೈದ್ಯರು ತಲುಪಿಸಿದ್ದಾರೆ.
ದರ್ಶನ್ಗೆ ಇತ್ತೀಚೆಗೆ ಬೆನ್ನು ನೋವು ಹೆಚ್ಚಾದ ಹಿನ್ನೆಲೆಯಲ್ಲಿ ತಜ್ಞ ವೈದ್ಯರು ತಪಾಸಣೆ ಮಾಡಿ ನೀಡಿದ್ದ ವರದಿಯಂತೆ ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಜಿಲ್ಲಾಸ್ಪತ್ರೆ ಸರ್ಜನ್ ಡಾ| ಎನ್. ಬಸಾರೆಡ್ಡಿ, ನ್ಯೂರೋ ಸರ್ಜನ್ ಡಾ| ವಿಶ್ವನಾಥ್ ಅವರ ನೇತೃತ್ವದಲ್ಲಿ ಮಂಗಳವಾರ ಎಂಆರ್ಐ, ಸಿಟಿ ಸ್ಕ್ಯಾನಿಂಗ್ಗೆ ಒಳಪಡಿಸಲಾಗಿತ್ತು.
ದರ್ಶನ್ಗೆ ಬೆನ್ನು ನೋವಿನ ಡಿಸ್ಕ್ (ಸಯಾಟಿಕ್) ಎಂಬ ಗಂಭೀರ ಸಮಸ್ಯೆಯಿದ್ದು, ಕೂಡಲೇ ಚಿಕಿತ್ಸೆಗೆ ಒಳಪಡಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ವರದಿಯಲ್ಲಿ ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಜತೆ ಚರ್ಚಿಸಿ, ವರದಿ ಆಧರಿಸಿ ಸರ್ಜರಿ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಎಂದು ಜೈಲು ಅಧಿ ಕಾರಿಗಳಿಗೆ ಮಂಗಳವಾರ ಹೈಕೋರ್ಟ್ ಆದೇಶಿಸಿತ್ತು. ಆದರೆ, ಈವರೆಗೆ ನಮಗೆ ಯಾವುದೇ ಲಿಖೀತ ರೂಪದಲ್ಲಿ ಆದೇಶ ಬಂದಿಲ್ಲ ಎಂದು ಜೈಲು ಅ ಧೀಕ್ಷಕಿ ಲತಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ
BY Election: ಸಂಡೂರು ಬಂಡಾಯ ಶಮನ ಮಾಡಿದ ಜನಾರ್ದನ ರೆಡ್ಡಿ
BY-Election: ಸಂಡೂರಿಲ್ಲಿ ಬಿಜೆಪಿಗೆ ಬಂಡಾಯದ ಬಿಸಿ
Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ
Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.