
ರೆಡ್ಡಿ ಸಹೋದರರೊಂದಿಗೆ ಸೇರಿ ಪ್ರತ್ಯೇಕ ಪಕ್ಷ ಸ್ಥಾಪಿಸುವ ಅಪಪ್ರಚಾರ; ದಿವಾಕರ ಬಾಬು
Team Udayavani, Dec 2, 2022, 12:50 PM IST

ಬಳ್ಳಾರಿ: ಮಾಜಿ ಸಚಿವ ಜನಾರ್ಧನರೆಡ್ಡಿ ಅವರೊಂದಿಗೆ ಸೇರಿ ಪ್ರತ್ಯೇಕ ಪಕ್ಷ ಮಾಡುತ್ತೇವೆ ಎಂದು ಅಫ್ರಚಾರ ಮಾಡುತ್ತಿರುವ ಅನಧಿಕೃತ ಯೂಟ್ಯೂಬ್ ಚಾನಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಮಾಜಿ ಸಚಿವ ಮುಂಡ್ಲೂರು ದಿವಾಕರ ಬಾಬು ಸ್ಪಷ್ಟಪಡಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಾಜಿ ಸಚಿವ ಜನಾರ್ಧನರೆಡ್ಡಿ ವಿರುದ್ಧ ಮೊದಲಿನಿಂದಲೂ ಹೋರಾಟ ಮಾಡುತ್ತಿದ್ದೇನೆ. ಅವರು ಮಾಡುತ್ತಿರುವ ತಪ್ಪುಗಳನ್ನು ಖಂಡಿಸಿದ್ದೇನೆ. ಅಂತದ್ದರಲ್ಲಿ ರೆಡ್ಡಿ ಸಹೋದರರೊಂದಿಗೆ ಸೇರಿ ನಾನು ಪ್ರತ್ಯೇಕ ಪಕ್ಷ ರಚಿಸುವುದಾಗಿ ಅನಧಿಕೃತ ಯೂಟ್ಯೂಬ್ ಚಾನಲ್ ನಲ್ಲಿ ಅಪಪ್ರಚಾರ ಮಾಡುತ್ತಿದೆ. ಹಾಗಾಗಿ ಅನಧಿಕೃತ ಎಲ್ಲ ಯೂಟ್ಯೂಬ್ ಚಾನಲ್ ಗಳ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡಲಾಗುವುದು. ಜತೆಗೆ ಆ ಚಾನಲ್ ವಿರುದ್ಧ ಮಾನನಷ್ಟ ಮೊಕದ್ಧಮೆ ಹೂಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ;ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತ ಮತದಾರರನ್ನು ಕೈಬಿಟ್ಟಿಲ್ಲ: ಸಿಎಂ ಬೊಮ್ಮಾಯಿ
ರೆಡ್ಡಿ ಸಹೋದರರೊಂದಿಗೆ ನಾನು ಎಂದೂ ಮಾತನಾಡಿಲ್ಲ. ಅವರೂ ನನ್ನ ಹತ್ರ ಬರಲ್ಲ. ದೂರವಾಣಿಯಲ್ಲಂತೂ ಮಾತನಾಡಲ್ಲ. ಈ ಕುರಿತು ದಾಖಲೆಗಳಿದ್ದರೆ ಕೊಡಬೇಕು ಎಂದು ಅವರು ತಿಳಿಸಿದರು.
ನನ್ನ ಬಗ್ಗೆ ಅಪಪ್ರಚಾರ ಯಾರು ಮಾಡಿದ್ದಾರೋ ಗೊತ್ತಿಲ್ಲ. ಅಂತಹವರು ಕಾಂಗ್ರೆಸ್ ಪಕ್ಷದ ಒಳಗೂ-ಹೊರಗೂ ಇರಬಹುದು. ಸುದ್ದಿಯಲ್ಲಿ ಬಿಜೆಪಿಯವರೂ ಇರುವುದರಿಂದ ಅವರೂ ಇರಬಹುದು. ಎಲ್ಲವೂ ನಿಧಾನವಾಗಿ ಹೊರಬೀಳಲಿದೆ ಎಂದರು.
ಜೋಡೋ ಯಾತ್ರೆಯಿಂದ ಸಕ್ರಿಯ ರಾಜಕೀಯಕ್ಕೆ: ಈ ಹಿಂದೆ ರಾಜಕೀಯ ಎಂಬುದು ಸಮಾಜ ಸೇವೆಯಾಗಿತ್ತು. ಈಗ ಅಂತಹ ರಾಜಕೀಯವಿಲ್ಲ. ಸದ್ಯ ದೇಶದಲ್ಲಿ ರಾಜಕೀಯ ಪರಿಸ್ಥಿತಿ ಕೆಟ್ಟಿದೆ. ಅದನ್ನು ಸರಿಪಡಿಸುವ ಸಲುವಾಗಿ ಎಐಸಿಸಿ ಮುಖಂಡ ರಾಹುಲ್ ಗಾಂಧಿಯವರು ದೇಶಾದ್ಯಂತ ಭಾರತ್ ಜೋಡೋ ಪಾದಯಾತ್ರೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೆಲ ವರ್ಷಗಳಿಂದ ಸೈಲೆಂಟ್ ಆಗಿದ್ದ ನಾನು ಪುನಃ ರಾಜಕೀಯದಲ್ಲಿ ಸಕ್ರಿಯವಾಗಿದ್ದೇನೆ ಎಂದು ತಿಳಿಸಿದರು.
ಮುಂಬರುವ 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ ಆಕಾಂಕ್ಷಿಯಾಗಿದ್ದು, ಟಿಕೇಟ್ ಗಾಗಿ ಅರ್ಜಿ ಸಲ್ಲಿಸಿದ್ದೇನೆ. ನಾನು ಸೇರಿ 24 ಜನರು ಅರ್ಜಿ ಸಲ್ಲಿಸಿದ್ದಾರೆ. ನನಗೆ ಟಿಕೇಟ್ ಸಿಕ್ಕರೆ ನನ್ನ ಅಳಿಯ (ನಾರಾ ಭರತ್ ರೆಡ್ಡಿ) ಸ್ಪರ್ಧಿಸಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.