ಕನ್ನಡದಲ್ಲಿ ಅನ್ಯಭಾಷೆ ಲಯ ಅಳವಡಿಕೆ ಸುಲಭ: ವಿಜಯಶಂಕರ್‌


Team Udayavani, Aug 1, 2020, 2:13 PM IST

ಕನ್ನಡದಲ್ಲಿ ಅನ್ಯಭಾಷೆ ಲಯ ಅಳವಡಿಕೆ ಸುಲಭ: ವಿಜಯಶಂಕರ್‌

ಹೊಸಪೇಟೆ: ವೆಬಿನಾರ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಬ್ಬಂದಿ ವರ್ಗ. 

ಹೊಸಪೇಟೆ: ಭಾಷಾಂತರದಿಂದ ಅನ್ಯಭಾಷೆಯ ಲಯವನ್ನು ಕನ್ನಡದಲ್ಲಿ ಅಳವಡಿಸಿಕೊಳ್ಳಲು ಸುಲಭವಾಗಲಿದೆ ಎಂದು ಕನ್ನಡ ಸಾಹಿತ್ಯದ ಖ್ಯಾತ ವಿಮರ್ಶಕ ಎಸ್‌.ಆರ್‌.  ವಿಜಯಶಂಕರ್‌ ಹೇಳಿದರು.

ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಕೇಂದ್ರ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ವೆಬಿನಾರ್‌ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಹಲವರ ಸಹಯೋಗದೊಡನೆ ಭಾಷಾಂತರ ರೂಪಿಸಿದಾಗ ಖಚಿತವಾದ ಭಾಷಿಕ ಲಯವೊಂದು ಸಿಗಲಿದೆ. ಅನ್ಯ ಭಾಷೆ ವಿಚಾರಗಳ ಲೋಕಕ್ಕೆ ಪ್ರವೇಶಿಸಲು ಭಾಷಾಂತರಗಳು ಕಿಟಕಿಗಳಂತೆ ಸಹಕರಿಸುತ್ತವೆ. ಅವುಗಳನ್ನು ಇನ್ನಷ್ಟು ತಿಳಿದುಕೊಳ್ಳಬೇಕಾದರೆ ಬಾಗಿಲುಗಳನ್ನು ತೆರೆದು ಹೊರ ಹೊಗಬೇಕಾಗುತ್ತದೆ. ಹೊಸದಾಗಿ ಭಾಷಾಂತರ ಆರಂಭ ಮಾಡುವವರು ಮೂಲಕೃತಿಯ ಓದಿನ ಸಮಗ್ರ ತಿಳಿವಳಿಕೆಯಿಂದ
ಮುಂದಾಗಬೇಕು ಎಂದರು.

ಕೇಂದ್ರದ ನಿರ್ದೇಶಕ ಡಾ. ಮೋಹನ ಕುಂಟಾರ್‌ ಮಾತನಾಡಿ, ಯಾವುದೇ ಅನುವಾದ ಕೃತಿಯೊಂದು ರೂಪುಗೊಳ್ಳಬೇಕಾದರೆ ಅನುವಾದಕರ ವೈಯಕ್ತಿಕ ಹಿತಾಸಕ್ತಿಗಳು ಮಾತ್ರ ಕಾರಣವಾಗಿರುವುದಿಲ್ಲ. ಅದನ್ನು ಮೀರಿ ಸಮಕಾಲೀನ ಸಮಾಜ, ರಾಜಕೀಯ, ಸಾಹಿತ್ಯ ಕ್ಷೇತ್ರದ ಆಶೋತ್ತರಗಳು ಕೂಡ ಪ್ರಮುಖ ಪಾತ್ರವಹಿಸುತ್ತವೆ. ಈ ಆಶೋತ್ತರಗಳಿಗನುಗುಣುವಾಗಿಯೇ ಅನುವಾದಗಳು ಯಾವುದೇ ಕಾಲಘಟ್ಟಕ್ಕನುಗುಣವಾಗಿ ವಿಭಿನ್ನವಾಗಿ ರೂಪುಗೊಳ್ಳುತ್ತವೆ. ಕಾಲಕ್ಕೆ ತಕ್ಕಂತೆ ಅನುವಾದಕರ ಆಸಕ್ತಿ ಹಾಗೂ ಇತರೆ ಒತ್ತಡಗಳಿಂದ ಭಾಷಾಂತರ ಪ್ರವೃತ್ತಿಗಳು ರೂಪುಗೊಳ್ಳುತ್ತವೆ ಎಂದು ಹೇಳಿದರು.

ಬಳಿಕ ನಡೆದ ಸಂವಾದದಲ್ಲಿ ಮುಂಬೈ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ| ಜಿ.ಎನ್‌. ಉಪಾಧ್ಯ, ಡಾ| ಯರ್ರಿಸ್ವಾಮಿ ಇತರರು ಭಾಗವಹಿಸಿದ್ದರು. ಕುಲಸಚಿವ ಡಾ| ಎ. ಸುಬ್ಬಣ್ಣ ರೈ ಸ್ವಾಗತಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಾಯಕ ನಿರ್ದೇಶಕ ಡಿ. ಪ್ರಭಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸುಮಾರು 184 ಜನ ಆಸಕ್ತರು ನೋಂದಣಿ ಮಾಡಿಕೊಂಡು ವೆಬಿನಾರ್‌ನಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.