ಮಠಗಳು ಇಲ್ಲದಿದ್ದರೆ ಶಿಕ್ಷಣ ಒದಗಿಸುವುದು ಅಸಾಧ್ಯವಾಗುತ್ತಿತ್ತು: ಸಿಎಂ ಬೊಮ್ಮಾಯಿ


Team Udayavani, Feb 4, 2023, 6:52 PM IST

ಮಠಗಳು ಇಲ್ಲದಿದ್ದರೆ ಶಿಕ್ಷಣ ಒದಗಿಸುವುದು ಅಸಾಧ್ಯವಾಗುತ್ತಿತ್ತು: ಸಿಎಂ ಬೊಮ್ಮಾಯಿ

ಹೂವಿನ ಹಡಗಲಿ: ಮಠಗಳು ಇಲ್ಲದೇ ಹೋಗಿದ್ದರೆ ರಾಜ್ಯದಲ್ಲಿ ಶಿಕ್ಷಣ ಒದಗಿಸುವುದು ಕಷ್ಟವಾಗುತ್ತಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮೈಲಾರದಲ್ಲಿ ಹಮ್ಮಿಕೊಂಡಿದ್ದ 7 ಕೋಟಿ ವಸತಿ ಶಾಲೆ ಉದ್ಘಾಟನಾ ಸಮಾರಂಭದಲ್ಲಿ ಶಾಲೆ ಉದ್ಘಾಟಿಸಿ, ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಮಠ ಮಾನ್ಯಗಳ ಕೊಡುಗೆ ಬಹಳ ದೊಡ್ಡದು. ಎಲ್ಲಾ ಮಠಗಳು ಎಲ್ಲಾ ವರ್ಗದ ಮಕ್ಕಳಿಗೆ ಎಲ್ಲಾ ಮಠಗಳು ಅನ್ನ ದಾಸೋಹ, ಶಿಕ್ಷಣ, ಆಶ್ರಯ ಕೊಡುತ್ತಿವೆ. ಒಂದು ವೇಳೆ ಸ್ವತಂತ್ರ ನಂತರ ಮಠಗಳು ಇಲ್ಲದೇ ಹೋಗಿದ್ದರೆ ರಾಜ್ಯದ ಸಮಾಜದ ಶಿಕ್ಷಣದಿಂದ ವಂಚಿತವಾಗುತ್ತಿತ್ತು ಎಂದರು.

ಸರ್ಕಾರದ ಒಟ್ಟು ಕಾರ್ಯಕ್ರಮಗಳಲ್ಲಿ ಕೆಳಮಟ್ಟದ ಸಮುದಾಯಗಳು ಸರ್ಕಾರದ ಕಾರ್ಯಕ್ರಮಗಳಲ್ಲಿ ಪಾಲು ಪಡೆಯಲು ಆಗದ ಕಾರಣಕ್ಕೆ ಮಠಮಾನ್ಯಗಳಿಗೆ ಅನುದಾನ ಕೊಡಬೇಕು. ಹಾಗೆ ಮಾಡಿದರೆ ಮಠಗಳು ಬಡ ಮಕ್ಕಳಿಗೆ ಶಿಕ್ಷಣ, ಅನ್ನ ದಾಸೋಹ ಮಾಡುತ್ತವೆ ಎಂದು ಅವರು ತಿಳಿಸಿದರು.

ಕುರಿಗಾಹಿಗಳಿಗೆ ಕುರಿಗಾರರ ಮನೆ ಕಟ್ಟಲು ಕಾರ್ಯಕ್ರಮ ರೂಪಿಸಿದ್ದೆವು. 354 ಕೋಟಿ ರೂ.ನಲ್ಲಿ 20 ಸಾವಿರ ಸಂಘಗಳ ಮೂಲಕ ಕುರಿಗಾಹಿಗಳಿಗೆ 20 ಕುರಿ ನೀಡುವ ಕಾರ್ಯಕ್ರಮಕ್ಕೆ ಅನುಮೋದನೆ ನೀಡಿದ್ದು, ಶೀಘ್ರ ಇದನ್ನು ಅನುಷ್ಠಾನ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕಾಯಕ ಸಮಾಜಗಳಿಗೆ ಹೆಚ್ಚಿನ ನೆರವು ನೀಡಿದರೆ ಸ್ವಾವಲಂಬಿ ಬದಕು ಕಟ್ಟಿಕೊಳ್ಳಲು ಸಾಧ್ಯ. ಕುರುಬರು, ಕಂಬಾರ, ಬಡಿಗೆ, ಚಮ್ಮಾರ ಸೇರಿದಂತೆ ಎಲ್ಲಾ ವೃತ್ತಿನಿರತರ ಅಭಿವೃದ್ಧಿಗೆ ಕಾಯಕ ಯೋಜನೆ ರೂಪಿಸಿದ್ದೇವೆ. ದುಡ್ಡೇ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ ಎಂಬುದನ್ನು ಸಾಬೀತು ಮಾಡಲು ನಾವು ಸಿದ್ಧ ಎಂದು ಅವರು ತಿಳಿಸಿದರು.

ಕಾಗಿನೆಲೆ ಸ್ವಾಮೀಜಿ ನಿರಂಜನಾನಂದ ಪುರಿ ಸ್ವಾಮೀಜಿ ಸಮಾಜದ ಏಳಿಗೆ ಶ್ರಮಿಸುತ್ತಿದ್ದು ಸಮುದಾಯ ಭವನಕ್ಕೆ ಐದು ಕೋಟಿ ರೂ. ಅನುದಾನ ನೀಡುವೆ. ಭಕ್ತ ಕನಕದಾಸರ ನಾಡಿನಿಂದ ನಾನು ಬಂದಿದ್ದೇನೆ. ನಮ್ಮ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ 40 ಕೋಟಿ ರೂ. ಖರ್ಚುಮಾಡಿ ಕಾಗಿನೆಲೆಯಲ್ಲಿ ಅಭಿವೃದ್ಧಿ ಮಾಡಲಾಗಿದೆ ಎಂದರು.

ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಮಾತನಾಡಿ, ಮೈಲಾರದಲ್ಲಿ ಶಾಲೆ ಕಟ್ಟಲು ಬೇಕಾದ ಅನುದಾನ ಕೊಡಿಸುವಲ್ಲಿ ಮಾಜಿ, ಹಾಲಿ ಸಿಎಂ ಇಬ್ಬರೂ ಉದಾರವಾದ ಮನಸ್ಸು ಮಾಡಿದರು. ಈ ಶಾಲೆ ಕಟ್ಟಲು 5 ಕೋಟಿ ನಿರೀಕ್ಷೆಯಲ್ಲಿದ್ದ ನಮಗೆ ಅಂದಿನ ಸಿಎಂ ಆಗಿದ್ದ ಬಿ.ಎಸ್. ಯಡಿಯೂರಪ್ಪ ಅವರು 10 ಕೋಟಿ ರೂ. ಬರೆದರು. 10 ಕೋಟಿ ರೂ. ಮಂಜೂರು ಮಾಡಿ ಎಂದು ಪತ್ರ ಬರೆದ ಕೂಡಲೇ ಇಂದು ಇರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಆ ಪತ್ರವನ್ನು ತೆಗೆದುಕೊಂಡು ಕಚೇರಿಯಿಂದ ಕಚೇರಿಗೆ ಅಲೆದು ಅಗತ್ಯ ಕ್ರಮ ವಹಿಸಿ, ಅನುದಾನ ಒದಗಿಸುವಂತೆ ಮಾಡಿದರು ಎಂದು ಸ್ಮರಿಸಿದರು.

ಇದನ್ನೂ ಓದಿ:ಕೆಪಿಪಿಸಿ ನಕಲಿ ವೆಬ್ ಸೈಟ್ ಮಾಡಿ ಅಪಪ್ರಚಾರ; ಪೊಲೀಸ್ ಆಯುಕ್ತರಿಗೆ ದೂರು

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಕೋಟ್ಯಂತರ ಭಕ್ತರ ಶ್ರದ್ಧಾ ಕೇಂದ್ರ ಮೈಲಾರ. ಇಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ದಾಸೋಹ ಆರಂಭಿಸಿರುವುದು ಅತ್ಯುತ್ತಮ ಕೆಲಸವಾಗಿದೆ. ಇಲ್ಲಿನ ಇತರೆ ಅಭಿವೃದ್ದಿಗೆ ಸರ್ಕಾರ ಸಹಕಾರ ನೀಡಲಿದೆ. ಮಠ, ಮಾನ್ಯಗಳು ಶಿಕ್ಷಣ ಸೇರಿದಂತೆ ಇತರೆ ಸೇವೆ ಒದಗಿಸುವ ಮಠಗಳಿಗೆ ಅನುದಾನ ನೀಡುವುದು ತಪ್ಪಲ್ಲ ಎಂದರು.

ಹೈದರಾಬಾದ್ ಗಾದಿ ನಿರ್ವಹಣಾ ಸಂಘದ ಡಾ. ಸಾಯಿಕುಮಾರ ಬಾಬಾ ಸಾನ್ನಿಧ್ಯ ವಹಿಸಿದ್ದರು. ಸಚಿವರಾದ ಗೋವಿಂದ ಕಾರಜೋಳ, ಎಂ.ಟಿ.ಬಿ. ನಾಗರಾಜ, ಬೈರತಿ ಬಸವರಾಜ, ಸಿ.ಸಿ.ಪಾಟೀಲ್, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ವೈ. ದೇವೇಂದ್ರಪ್ಪ, ಶಾಸಕ ನೆಹರು ಓಲೇಕಾರ್, ಮುಖಂಡರಾದ ಓದೋ ಗಂಗಪ್ಪ, ವೈ. ಗೋವಿಂದಪ್ಪ, ವಿರುಪಾಕ್ಷಪ್ಪ, ಜಲಜಾನಾಯ್ಕ ಇತರರು ವೇದಿಕೆಯಲ್ಲಿದ್ದರು

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.