9-10ನೇ ತರಗತಿವರೆಗೂ ಆರ್‌ಟಿಇ ಕಾಯ್ದೆ ವಿಸ್ತರಿಸಿ


Team Udayavani, Oct 22, 2020, 5:49 PM IST

BALLARY-TDY-1

ಹೊಸಪೇಟೆ: ಆರ್‌ಟಿಇ ಕಾಯ್ದೆ ವಿಸ್ತರಣೆ ಹಾಗೂ ಪಿಯುಸಿ ಉಪನ್ಯಾಸಕರಿಗೆ ನೇಮಕಾತಿ ಪತ್ರ ಶೀಘ್ರದಲ್ಲಿ ವಿತರಣೆ ಮಾಡಬೇಕು ಎಂದು ಆಗ್ರಹಿಸಿ, ಎಸ್‌ಎಫ್‌ಐ ಪದಾಧಿ ಕಾರಿಗಳುಬುಧವಾರ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶಿಕ್ಷಣ-ವಿದ್ಯಾರ್ಥಿ ವಿರೋಧಿ ನೀತಿಯಿಂದರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿ ಹಾಗೂ ಯುವ ಸಮುದಾಯ ಶಿಕ್ಷಣ, ಉದ್ಯೋಗ ವಂಚಿತರಾಗಿ ನಿರುದ್ಯೋಗಿಗಳಾಗಿ ಬೀದಿಪಾಲಾಗುವ ಸ್ಥಿತಿ ನಿರ್ಮಾಣವಾಗಿದೆ. ದೇಶದಾದ್ಯಂತ ಶಿಕ್ಷಣವನ್ನು ಖಾಸಗೀಕರಣ, ವ್ಯಾಪಾರೀಕರಣ ಮಾಡುವುದರಮೂಲಕ ರಾಜ್ಯದಲ್ಲಿ,ದೇಶದಲ್ಲಿ ಮಧ್ಯಮವರ್ಗಕ್ಕೆ,  ಬಡವ, ದಲಿತ, ಅಲ್ಪಸಂಖ್ಯಾತರಿಗೆ ಶಿಕ್ಷಣವನ್ನು ಸರಕಾರವೇ ಮೊಟಕುಗೊಳಿಸುವಂತಹ ಕೆಲಸಕ್ಕೆ ಕೈಹಾಕಲು ಹೊರಟಿದೆ ಎಂದು ದೂರಿದರು.

ಆರ್‌ಟಿಇ ವಿಸ್ತರಣೆ: ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ 1 ನೇ ತರಗತಿಯಿಂದ 8ನೇ ತರಗತಿವರೆಗೆ ಪೂರೈಸಿರುವ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯಲ್ಲಿ 9 ತರಗತಿ ದಾಖಲಾತಿಗೆ ಹೆಚ್ಚಿನ ಹಣ ಕಟ್ಟಲು ಆಗದೇ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿವಂತಾಗಿದೆ. ಕೋವಿಡ್ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ವಿದ್ಯಾರ್ಥಿ ಪಾಲಕರು, ಹೆಚ್ಚುವರಿ ಶುಲ್ಕ ಕಟ್ಟಲಾಗದೆ ಬಹುತೇಕ ಮಕ್ಕಳು ಪಾಲಕರು ಶಾಲೆಯಿಂದ ಮಕ್ಕಳನ್ನು ಬಿಡಿಸಿ, ಸರ್ಕಾರಿ ಶಾಲೆಗೆ 9ನೇ ತರಗತಿ ದಾಖಲಾತಿ ಮಾಡುತ್ತಿದ್ದಾರೆ. ಇದರಿಂದಾಗಿ 8ನೇ ತರಗತಿವರೆಗೆ ಇಂಗ್ಲಿಷ್‌ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ 9ಮತ್ತು 10ನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕಾದ  ಅನಿವಾರ್ಯತೆ ನಿರ್ಮಾಣವಾಗಿದೆ. ಆದ್ದರಿಂದ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆರ್‌ ಟಿಇ ಕಾಯ್ದೆಯನ್ನು 9 ಮತ್ತು 10ನೇ ತರಗತಿವರೆಗೂ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿದರು.

ಅಕ್ಷರ ದಾಸೋಹ ಯೋಜನೆಯ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳ ಮನೆಯ ಬಾಗಿಲಿಗೆ ತಲುಪಿಸಲು ಎಸ್‌ಎಫ್‌ಐ ಆಗ್ರಹಿಸಿದೆ. ಕೋವಿಡ್ ಹಿನ್ನಲೆಯಲ್ಲಿ ಶಾಲೆಗಳು ಆರಂಭವಾಗದ ಹಿನ್ನಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಊಟ ನೀಡಲು ಬಂದಿರುವ ದಾಸ್ತಾನಿನ ದವಸಧಾನ್ಯಗಳು ಜಿಲ್ಲಾ ಕೇಂದ್ರಗಳಲ್ಲಿ ಆಹಾರದ ಉಗ್ರಣ ನಿಗಮ ದಲ್ಲಿ ಕೊಳೆಯುತ್ತಿವೆ. ಇದರಿಂದಾಗಿ ಬಡ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗದಿದ್ದರೆ ರೋಗ ನಿರೋಧಕ ಶಕ್ತಿಯನ್ನುಕಳೆದುಕೊಳ್ಳುವ ಸಾಧ್ಯತೆ ಇದೆ. ರಾಜ್ಯದ ಎಲ್ಲಾ ಸರಕಾರಿ ಶಾಲೆಗಳ ಮಕ್ಕಳಿಗೆ ಕಳೆದ ಮೇಯಿಂದ ನವಂಬರ್‌ ತಿಂಗಳವರೆಗೂ ಎಲ್ಲಾ ವಿದ್ಯಾರ್ಥಿಗಳಿಗೆ ಕೊಡಬೇಕಾದ ದವಸ-ಧಾನ್ಯಗಳನ್ನು ಕೇರಳರಾಜ್ಯದ ಮಾದರಿಯಲ್ಲಿ ಶಾಲೆಯ ಶಿಕ್ಷಕರ ಮೂಲಕ ವಿದ್ಯಾರ್ಥಿಗಳ ಮನೆಗೆ ತಲುಪಿಸಬೇಕೆಂದು ಒತ್ತಾಯಿಸಿದೆ. ಮುಖಂಡರಾದ ಜೆ.ಶಿವಕುಮಾರ್‌, ಹೆಚ್‌.ಎಂ.ಮಾರುತಿ ಹಾಗೂ ಕೆ.ಎ.ಪವನ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

Beggars baby

Begging-free ಇಂದೋರ್‌ ಗುರಿ: ಜ.1ರಿಂದ ಭಿಕ್ಷೆ ಕೊಟ್ಟರೆ ಶಿಕ್ಷೆ!

1-pppp

Pakistan ಶರಣಾದ ಚಿತ್ರ ಸೇನಾ ಕಚೇರಿಯಿಂದ ತೆರವು: ಕಾಂಗ್ರೆಸ್‌ ಕಿಡಿ

mohamad-yunus

Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್‌

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

1-dinnu

Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Beggars baby

Begging-free ಇಂದೋರ್‌ ಗುರಿ: ಜ.1ರಿಂದ ಭಿಕ್ಷೆ ಕೊಟ್ಟರೆ ಶಿಕ್ಷೆ!

1-pppp

Pakistan ಶರಣಾದ ಚಿತ್ರ ಸೇನಾ ಕಚೇರಿಯಿಂದ ತೆರವು: ಕಾಂಗ್ರೆಸ್‌ ಕಿಡಿ

mohamad-yunus

Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್‌

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.