ಕುರುಗೋಡು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ


Team Udayavani, Apr 19, 2022, 1:20 PM IST

ಕುರುಗೋಡು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಕುರುಗೋಡು: ಕೂಡಲೇ ರಾಜ್ಯ ಸರ್ಕಾರವು ಭತ್ತ ಖರೀದಿ ಕೇಂದ್ರ ತೆರೆಯುವಂತೆ ಹಾಗೂ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಪಟ್ಟಣದ ಕರ್ನಾಟಕ ರೈತ ಸಂಘ ಹಾಗೂ ನೂರಾರು ರೈತರು ಕುರುಗೋಡಿನ ಎಪಿಎಂಸಿ ಮುಂದುಗಡೆಯಿಂದ ಮುಖ್ಯ ವೃತ್ತದವರೆಗೆ ಬಂಡಿ, ಟ್ರ್ಯಾಕ್ಟರ್ ಮೂಲಕ ಆಗಮಿಸಿ ಮುಖ್ಯವೃತ್ತದಲ್ಲಿ ರಸ್ತೆಗೆ ಭತ್ತ ಸುರಿಯುವುದರ ಮುಖಾಂತರ ಪ್ರತಿಭಟನೆ ಮಾಡಿದರು.

ರಾಜ್ಯ ಸಮಿತಿ ಅಧ್ಯಕ್ಷರಾದ ಶರಣಪ್ಪ ಹಾಗೂ ಉಪಾಧ್ಯಕ್ಷ ಅಮರೇಶ ಮಾತನಾಡಿ ರಾಜ್ಯ ಸರ್ಕಾರವು ಬೆಲೆ ನಿಗದಿ ಮಾಡುವಂತೆ ನಾವುಗಳು ಕೂಡಾ ಬೆಲೆ ನಿಗದಿ ಕಾರ್ಯ ಮಾಡುತ್ತೇವೆ. ಬ್ಯಾಂಕ್ ಕೊಟ್ಟ ಸಾಲಕ್ಕೆ ಬೆಳೆದ ಬೆಳೆಯನ್ನು ಬ್ಯಾಂಕ್ ಮುಂದೆ ಹಾಕುವ ಕೆಲಸ ಮಾಡುತ್ತೇವೆ ಎಂದರು.

ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಕೃಷಿ ವಿಜ್ಞಾನಿಗಳು ಇದ್ದು, ಈ ತಿಂಗಳಲ್ಲಿ ಬಿತ್ತನೆ ಮಾಡಬೇಕು, ಈ ಔಷಧಿಯನ್ನು ಸಿಂಪಡಿಸಬೇಕೆಂದು ಹೇಳುತ್ತಾರೆ ಹೊರೆತು ಯಾವುದೇ ರೀತಿಯಿಂದ ರೈತರಿಗೆ ಮಾರ್ಗದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಯಾವೊಬ್ಬ ರೈತರು ಕೂಡಾ ಕೃಷಿ ವಿಜ್ಞಾನಿಗಳನ್ನು ನೋಡಿಲ್ಲ. ವಿಜ್ಞಾನಿಗಳು ಸಂಬಳವನ್ನು ತೆಗೆದುಕೊಂಡು ರೈತರಿಗೂ ತಮಗೂ ಯಾವುದೇ ಸಂಬಂಧವಿಲ್ಲದಂತೆ ಎ.ಸಿ.ರೂಂನಲ್ಲಿ ಆರಾಮಾಗಿ ಜೀವನ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದ ಅಧಿಕಾರಿಗಳು ಕೃಷಿಗೆ ಒತ್ತು ನೀಡಬೇಕು, ರೈತರಿಗೆ ಗೌರವ ನೀಡಬೇಕು. ಅಧಿಕಾರಿಗಳೆಲ್ಲ ರೈತರು ಬೆಳೆದ ಬೆಳೆಯನ್ನೆ ತಿನ್ನಬೇಕೇ ಹೊರತು ಬಂಗಾರವಾಗಲಿ, ನೋಟುಗಳನ್ನಾಗಿ ತಿನ್ನಲು ಆಗದು. ಆದ್ದರಿಂದ ರೈತ ದೇಶದ ಬೆನ್ನೆಲುಬು ಅಂತಾರೆ ಅಂತವರಿಗೆ ಬೆನ್ನಿಗೆ ಚೂರಿ ಹಾಕುವ ಕೆಲಸ ಬಿಡಬೇಕು ಎಂದರು.

ಪ್ರತಿಭಟನೆಯನ್ನು ಉದ್ದೇಶಿಸಿ ಕುರುಗೋಡು ತಾಲೂಕು ಸಮಿತಿ ಅಧ್ಯಕ್ಷ ಕೆ.ಕಲ್ಗುಡೆಪ್ಪ ಮಾತನಾಡಿ ಕುರುಗೋಡಿನಲ್ಲಿ ಆದಷ್ಟು ಬೇಗನೇ ಭತ್ತ ಖರೀದಿ ಕೇಂದ್ರ ತೆರೆಯಬೇಕೆಂದು ಆಗ್ರಹಿಸಿದರು. ಜೊತೆಗೆ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಮಾಡಬೇಕೆಂದರು.

ಪ್ರತಿಭಟನೆಯಲ್ಲಿ ನವಕರ್ನಾಟಕ ಯುವಶಕ್ತಿಯ ವಿರುಪಾಕ್ಷಿ, ನಾರಾಯಣಿ ಯಡಿಗಿರಿ, ಕುರುಗೋಡಿನ ಮುಖಂಡ ಚಾನಾಳ್ ಅಮರೇಶ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಸಂಘಕ್ಕೆ ಬೆಂಬಲ ಸೂಚಿಸಿದರು.

ಪ್ರತಿಭಟನಾ ಸ್ಥಳಕ್ಕೆ ಕುರುಗೋಡಿನ ತಹಶೀಲ್ದಾರ್ ಕೆ.ರಾಘವೇಂದ್ರರಾವ್ ಮತ್ತು ಪಿಎಸ್ಐ ಮಣಿಕಂಠ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ಕೆ.ರಾಮಚಂದ್ರ, ಹನುಮಂತಪ್ಪ ನಾಯಕ, ತಾಲೂಕು ಸಮಿತಿಯ ಉಪಗೌರವಾಧ್ಯಕ್ಷರಾದ ಪಿ.ಮರಿಬಸಪ್ಪ, ಉಪಾಧ್ಯಕ್ಷ ಎಸ್.ಗುರು, ಪ್ರಧಾನ ಕಾರ್ಯದರ್ಶಿ ಕೆ.ಗಿರೀಶ್ ಗೌಡ, ಸಹಕಾರ್ಯದರ್ಶಿ ಎ.ಕರಿಬಸಪ್ಪ, ಖಜಾಂಚಿ ಎಂ.ಗಾದಿಲಿಂಗಪ್ಪ, ಕುರುಗೋಡು ತಾಲೂಕು ಯುವ ಘಟಕದ ಅಧ್ಯಕ್ಷ ಹೆಚ್.ಬಸವರಾಜ, ಉಪಾಧ್ಯಕ್ಷ ಮಂಜುನಾಥ, ಕಾರ್ಯದರ್ಶಿ ಎಸ್.ದೇವೇಂದ್ರಪ್ಪ, ವದ್ದಟ್ಟಿ ಗ್ರಾಮ ಘಟಕದ ಅಧ್ಯಕ್ಷ ಎಂ.ರಾಜಶೇಖರ, ಉಪಾಧ್ಯಕ್ಷರಾದ ಜಿ.ನಾಗರಾಜ, ಬಾದನಹಟ್ಟಿ ಗ್ರಾಮ ಘಟಕದ ಅಧ್ಯಕ್ಷರಾದ ಕುಮಾರಗೌಡ,  ಉಪಾಧ್ಯಕ್ಷರಾದ ಚಿದಾನಂದ, ಕಾರ್ಯದರ್ಶಿ ಜೀರು ಮಲ್ಲಪ್ಪ, ಸಹಕಾರ್ಯದರ್ಶಿ ನಾಯಕರ ರುದ್ರಪ್ಪ, ಸದಸ್ಯರಾದ ಎಸ್.ಬಸವ, ಎ.ಚಿದಾನಂದ, ಗೂಳ್ಯದ ಶಿವರಾಜ, ವಿಘ್ನೇಶ್ವರ, ಸೋಮೇಶ, ಹೂಗಾರ್ ತಿಮ್ಮಪ್ಪ ಇನ್ನಿತರರು ಸೇರಿದಂತೆ ಪಟ್ಟಣದ ಸುತ್ತ ಮುತ್ತಲಿನ ಗ್ರಾಮಗಳ ನೂರಾರು ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Bellary; Darshan IT interrogation in jail

Bellary; ಜೈಲಿನಲ್ಲಿಂದು ದರ್ಶನ್‌ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.