ಹಕ್ಕುಗಳನ್ನು ಅರಿತಾಗ ಮೋಸಕ್ಕೆ ಕಡಿವಾಣ

ವಿಶ್ವ ಗ್ರಾಹಕರ ದಿನಾಚರಣೆಯಲ್ಲಿ ನ್ಯಾ| ಸತೀಶ ಬಾಳಿ ಕರೆ

Team Udayavani, Mar 17, 2022, 5:33 PM IST

consumer rights

ಬಳ್ಳಾರಿ: ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಮೊದಲು ಅರಿತುಕೊಂಡಾಗ ಮಾತ್ರ ಮೋಸ ಹೋಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸತೀಶ ಜೆ.ಬಾಳಿ ಹೇಳಿದರು.

ನಗರದ ಬಿಡಿಎಎ ಫುಟ್ಬಾಲ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಆಹಾರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಹಕರು ಮೊದಲು ತಮ್ಮ ಹಕ್ಕುಗಳನ್ನು ಅರಿತುಕೊಳ್ಳುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಗ್ರಾಹಕರ ದಿನಾಚರಣೆಯು ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳಲು ವಿಶೇಷ ವೇದಿಕೆಯಾಗಿದೆ ಎಂದರು. ಇತ್ತೀಚಿನ ದಿನಮಾನಗಳಲ್ಲಿ ಡಿಜಿಟಲ್‌ ಪೇಮೆಂಟ್‌ನ್ನು ಎಲ್ಲೆಡೆಯು ನಾವು ಕಾಣುತ್ತಿದ್ದೇವೆ. ಇಡೀ ಜಮಾನವೇ ಒಂದು ರೀತಿಯಲ್ಲಿ ಡಿಜಿಟಲ್‌ ಪೇಮೆಂಟ್‌ ಜಮಾನ ಆಗಿಬಿಟ್ಟಿದೆ. ತ್ವರಿತಗತಿಯಲ್ಲಿ ಹಣ ವರ್ಗಾವಣೆಗೆ ಈ ಡಿಜಿಟಲ್‌ ಪೇಮೆಂಟ್‌ ಎಷ್ಟು ಅನುಕೂಲಕರವೋ ಅಷ್ಟೇ ಇದರಿಂದ ಮೋಸಕ್ಕೆ ಒಳಗಾಗುವುದುಂಟು ಎಂದ ಅವರು, ಡಿಜಿಟಲ್‌ ಪೇಮೆಂಟ್‌ ಬಗ್ಗೆ ಮಾಹಿತಿ ಗೊತ್ತಿಲ್ಲದವರೂ ಯಾವುದೇ ಕಾರಣಕ್ಕೂ ಅದನ್ನು ಉಪಯೋಗಿಸಬಾರದು. ಕಾರಣ ತಮ್ಮ ಖಾತೆಯನ್ನು ಹ್ಯಾಕ್‌ ಮಾಡಿ ಹಣ ಲಪಟಾಯಿಸುವವರಿರುತ್ತಾರೆ. ಹಾಗಾಗಿ ಗ್ರಾಹಕರು ತಮ್ಮ ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌ ಮತ್ತು ತಮ್ಮ ಖಾತೆ ವಿವರಗಳನ್ನು ಅಪರಿಚಿತ ವ್ಯಕ್ತಿಗಳಿಗೆ ನೀಡಬಾರದು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್‌.ತಿಪ್ಪೇಸ್ವಾಮಿ ಮಾತನಾಡಿ, ಗ್ರಾಹಕರ ಹಕ್ಕುಗಳು ಮತ್ತು ಅಗತ್ಯತೆಗಳ ಬಗ್ಗೆ, ಗ್ರಾಹಕರು ತಮಗಾಗುವ ಸಾಮಾಜಿಕ ಅನ್ಯಾಯಗಳ ವಿರುದ್ಧ ಹೋರಾಡಲು ಸಾಧ್ಯವಾಗುವ ನಿಟ್ಟಿನಲ್ಲಿ ಜಾಗತಿಕವಾಗಿ ಜಾಗೃತಿ ಮೂಡಿಸಲು ಈ ವಿಶ್ವ ಗ್ರಾಹಕರ ದಿನಾಚರಣೆ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಗ್ರಾಹಕರು ಮೋಸ ಹೋಗುವುದನ್ನು ತಪ್ಪಿಸಲು ಮತ್ತು ಅವರಿಗೆ ಸಮರ್ಪಕವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಗ್ರಾಹಕರ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದೆ ಎಂದು ವಿವರಿಸಿದ ಅವರು ಗ್ರಾಹಕರ ಹಕ್ಕುಗಳ ಕುರಿತು ಮತ್ತು ವಿಶ್ವ ಗ್ರಾಹಕರ ದಿನಾಚರಣೆಯ ಪ್ರಾಮುಖ್ಯತೆ ಕುರಿತು ಮಾಧ್ಯಮಗಳು ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ. ಯರ್ರೇ ಗೌಡ ಮಾತನಾಡಿ, ಗ್ರಾಹಕರಿಗೆ ತಮ್ಮ ಹಕ್ಕುಗಳಿಗೆ ಧಕ್ಕೆ ಬಂದಾಗ ಸಂಬಂಧಿಸಿದ ಇಲಾಖೆಗೆ ಅಥವಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಕೊಡುವ ಕೆಲಸ ಮಾಡಬೇಕು. ಗ್ರಾಹಕರಿಗೆ ಅನ್ಯಾಯವೆಸಗಿದವರಿಗೆ ಶಿಕ್ಷೆ ಕೊಡಿಸುವ ಕೆಲಸವೂ ಪರಿಣಾಮಕಾರಿಯಾಗಿ ಆಗಬೇಕು ಅಂದಾಗ ಮಾತ್ರ ಗ್ರಾಹಕರ ಹಿತರಕ್ಷಣಾ ಕಾಯ್ದೆಯ ಉದ್ದೇಶ ಈಡೇರಲು ಸಾಧ್ಯ ಎಂದರು. ‘ನ್ಯಾಯೋಚಿತ ಡಿಜಿಟಲ್‌ ಹಣಕಾಸು’ ವಿಷಯಕ್ಕೆ ಸಂಬಂಧಿ ಸಿದಂತೆ ಹಿರಿಯ ವಕೀಲ ಅಂಕಲಯ್ಯ ವಿಶೇಷ ಉಪನ್ಯಾಸ ನೀಡಿದರು.

ಆಹಾರ ಇಲಾಖೆ ಜಂಟಿ ನಿರ್ದೇಶಕ ಸಿ. ಶ್ರೀಧರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಸೋಮಶೇಖರಪ್ಪ ಕೆ.ಹಂದಿಗೋಳ, ಮಾರ್ಲಾ ಶಶಿಕಲಾ, ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಅಮೃತಾ ಪಿ.ಚವ್ಹಾಣ, ಜಿಲ್ಲಾ ಪರಿವೀಕ್ಷಣ ಅಂಕಿತಾಧಿಕಾರಿ ಡಾ| ಎಂ.ಕೆ.ಶಮ್ಸುದ್ದೀನ್‌ ನಸೀರ್‌ ಸೇರಿದಂತೆ ಅನೇಕರು ಇದ್ದರು. ನ್ಯಾಯಬೆಲೆ ಅಂಗಡಿಗಳು ಕಾಮನ್‌ ಸರ್ವಿಸ್‌ ಸೆಂಟರ್‌ಗಳಾಗಿ ಪರಿವರ್ತಿಸಿ ಎಲ್ಲ ಸೌಲಭ್ಯಗಳು ಸದರಿ ಅಂಗಡಿಗಳ ಮುಖಾಂತರ ಒದಗಿಸುತ್ತಿರುವ ಹಿನ್ನೆಲೆಯಲ್ಲಿ ರೇಶನ್‌ ಅಂಗಡಿಗಳ ಮಾಲೀಕರಿಗೆ ತರಬೇತಿ ನೀಡಲಾಯಿತು.

ಟಾಪ್ ನ್ಯೂಸ್

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

Transportation agency issue; Minister Ramalinga Reddy challenged BJP

Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Bellary; Darshan IT interrogation in jail

Bellary; ಜೈಲಿನಲ್ಲಿಂದು ದರ್ಶನ್‌ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು

1-darshan

Darshan ಭೇಟಿಗೆ ಮಾಹಿತಿ‌ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

8

Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

7

Bunts Hostel ವೃತ್ತ: ಫುಟ್‌ಪಾತ್‌ ಇಲ್ಲದೆ ಅಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.