ನರೇಗಾದಲ್ಲಿ ಹ್ಯಾರಡ ಗ್ರಾಪಂ ಸಾಧನೆ

•ಉದ್ಯೋಗ ಸೃಷ್ಟಿಸುವಲ್ಲಿ ಗುರಿ ಮೀರಿ ಸಾಧನೆ •2ನೇ ಸ್ಥಾನ ಪಡೆದ ಸೋಗಿ ಗ್ರಾಪಂ

Team Udayavani, May 23, 2019, 7:51 AM IST

blary-tdy-2..

ಹೂವಿನಹಡಗಲಿ: ತಾಲೂಕಿನ ಹ್ಯಾರಡ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತಿರುವ ಕಾರ್ಮಿಕರು.

ಹೂವಿನಹಡಗಲಿ: ನರೇಗಾ ಯೋಜನೆಯಡಿ ತಾಲೂಕಿನಲ್ಲಿ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಹ್ಯಾರಡ ಗ್ರಾಪಂ ಮುಂಚೂಣಿಯಲ್ಲಿದೆ. ಈ ಯೋಜನೆಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ನಿರುದ್ಯೋಗ ಸಮಸ್ಯೆ ತೊಡೆದು ಹಾಕಿದ್ದಾರೆ. ಅಷ್ಟೇ ಅಲ್ಲದೇ ನರೇಗಾ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ್ದಕ್ಕೆ ಹ್ಯಾರಡ ಗ್ರಾಪಂ ಪಿಡಿಒ ಹಾಗೂ ಕೃಷಿ ನಿರ್ದೇಶಕರಿಗೆ ಪ್ರಶಸ್ತಿ ನೀಡಲಾಗಿದೆ.

2019- 20ನೇ ಸಾಲಿನಲ್ಲಿ ಗ್ರಾಮದ 962 ಕುಟುಂಬಗಳು ನರೇಗಾ ಯೋಜನೆಯಲ್ಲಿ ತೊಡಗಿಸಿಕೊಳ್ಳಲು ನೋಂದಣಿ ಮಾಡಿಸಿವೆ. ಸತತ ಬರಗಾಲಕ್ಕೆ ತುತ್ತಾಗುತ್ತಿದ್ದ ಈ ಪ್ರದೇಶದಲ್ಲಿ ನರೇಗಾ ಯೋಜನೆ ಕಾರ್ಮಿಕರಿಗೆ ಆಸರೆಯಾಗಿದೆ. ನರೇಗಾ ಕಾಮಗಾರಿಯಲ್ಲಿ 2,103 ಜನ ಕೂಲಿ ಕಾರ್ಮಿಕರಿದ್ದು, ಅದರಲ್ಲಿ 1,968 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. 734 ಕುಟುಂಬಗಳಿಗೆ ಕೆಲಸ ಕೊಟ್ಟಿದ್ದರಿಂದ ಈ ಭಾಗದಲ್ಲಿ ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸಿದ್ದಾರೆ.

ಗ್ರಾಮ ಪಂಚಾಯಿತಿ 13,504 ಮಾನವ ದಿನಗಳ ಗುರಿಯನ್ನು ಹೊಂದಿತ್ತು. ಆದರೆ ನಿರೀಕ್ಷೆಗೂ ಮೀರಿ 18,885 ಮಾನವ ದಿನಗಳನ್ನು ಪೂರೈಸಿದೆ. ಗ್ರಾಮದ ರೈತರ ಜಮೀನುಗಳಲ್ಲಿ ಬದು ನಿರ್ಮಾಣ, ದನದ ಕೊಟ್ಟಿಗೆ, ಕೃಷಿ ಹೊಂಡ, ಕೆರೆಯನ್ನು ಹೂಳೆತ್ತುವ ಕಾರ್ಯವನ್ನು ನರೇಗಾ ಯೋಜನೆಯಲ್ಲಿ ಮಾಡುತ್ತಿದ್ದಾರೆ.

ಈ ಮೊದಲು ಕೂಲಿ ಕಾರ್ಮಿಕರು ಕೆಲಸವಿಲ್ಲದೇ ಜೀವನ ನಿರ್ವಹಣೆಗಾಗಿ ದೂರದ ಮಂಗಳೂರು, ಕಾಫಿ ತೋಟಕ್ಕೆ ಗುಳೆ ಹೋಗುತ್ತಿದ್ದರು. ಪ್ರಸ್ತುತ ನರೇಗಾ ಯೋಜನೆಯಲ್ಲಿ ಎಲ್ಲ ಕೂಲಿ ಕಾರ್ಮಿಕರಿಗೆ ಕೆಲಸ ದೊರಕುತ್ತಿರುವುದರಿಂದ ಜನತೆ ಗುಳೆ ಹೋಗುವುದು ತಪ್ಪಿದಂತಾಗಿದೆ.

ಇನ್ನೂ ತಾಲೂಕಿನ ಸೋಗಿ ಗ್ರಾಪಂ ನರೇಗಾ ಕಾಮಗಾರಿಯನ್ನು ಸಮರ್ಪಕ ಅನುಷ್ಠಾನ ಮಾಡಿ ತಾಲೂಕಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. 2019, 20ನೇ ಸಾಲಿನ ನರೇಗಾ ಯೋಜನೆಯಡಿ ಮೇ 7, 2019ರ ವರೆಗಿನ ಎಂಐಎಸ್‌ನಲ್ಲಿ ಸಾಧಿಸಿದ ಪ್ರಗತಿಯನ್ನಾಧರಿಸಿ ಪ್ರಶಸ್ತಿ ನೀಡಿ ಅಧಿಕಾರಿಗಳಿಗೆ ಉತ್ತೇಜನ ನೀಡಲಾಗುತ್ತದೆ.

•ವಿಶ್ವನಾಥ ಹಳ್ಳಿಗುಡಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.