ಸ್ತ್ರೀವಾದ ಬಿಟ್ಟು ಚರಿತ್ರೆ ಅರ್ಥೈಸಲು ಸಾಧ್ಯವಿಲ್ಲ

ವಸ್ತುನಿಷ್ಠತೆ ಇಲ್ಲದ ಚರಿತ್ರೆ ಸಿನಿಕ: ಡಾ| ವಾಗೀಶ್ವರಿ

Team Udayavani, Feb 24, 2020, 6:30 PM IST

24-February-37

ಹೊಸಪೇಟೆ: ಸ್ತ್ರೀವಾದ ತತ್ವವನ್ನು ಬಿಟ್ಟು ಚರಿತ್ರೆಯನ್ನು ಅರ್ಥೈಸಲು ಸಾಧ್ಯವಿಲ್ಲ ಎಂದು ಕ್ರೈಸ್ಟ್‌ ಕಾಲೇಜಿನ ಇತಿಹಾಸ ಪ್ರಾಧ್ಯಾಪಕಿ ಡಾ| ವಾಗೀಶ್ವರಿ ಎಸ್‌.ಪಿ. ಹೇಳಿದರು.

ಕನ್ನಡ ವಿಶ್ವವಿದ್ಯಾಲಯದ ಒನಕೆ ಓಬವ್ವ ಅಧ್ಯಯನ ಪೀಠ ಹಾಗೂ ಯುಜಿಸಿಯ ಪ್ರಾಯೋಜಿತ ಮಹಿಳಾ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ತ್ರೀವಾದಿ ಅನುಸಂಧಾನ ನೆಲೆಗಳು ಎಂಬ ಸಂಶೋಧನಾ ಕಮ್ಮಟಕ್ಕೆ ಚಾಲನೆ ನೀಡಿ ಮಾತನಾಡಿದರು.

ವಸ್ತುನಿಷ್ಟತೆಯೂ ಚರಿತ್ರೆ ಬುನಾದಿ. ವಸ್ತುನಿಷ್ಠತೆ ಇಲ್ಲದ ಚರಿತ್ರೆ ಸಿನಿಕವೆನಿಸುತ್ತದೆ. 20 ಮತ್ತು 21ನೇ ಶತಮಾನದಲ್ಲಿ ಚರಿತ್ರೆ ಬಗ್ಗೆ ಇರುವ ಪರಿಕಲ್ಪನೆಗಳು ಹೇಗೆ ಬದಲಾಗಿವೆ ಮತ್ತು ಯಾವ ನೆಲೆ ಹಾಗೂ ಹಿನ್ನೆಲೆಯಲ್ಲಿ ಚರಿತ್ರೆ ನೋಡಬೇಕು ಎನ್ನುವುದರ ಆಧಾರದ ಮೇಲೆ ಸ್ತ್ರೀವಾದ ಚರಿತ್ರೆ ರಚನಾ ಕ್ರಮವನ್ನು ತಿಳಿಯಬಹುದು ಎಂದು ಹೇಳಿದರು.

ಮಹಿಳೆ ಪುರುಷನ ಮಹಾನ್‌ ಶಕ್ತಿ. ಇಂತಹ ಶಕ್ತಿ ಕೇಂದ್ರವನ್ನು ನಾವು ನಿರ್ಲಕ್ಷಿಸುತ್ತಿದ್ದೇವೆ. ರಾಮ ಪುರುಷೋತ್ತಮನಾಗಿದ್ದು, ಗೊಲ್ಲ ಕೃಷ್ಣನಾಗಿದ್ದು, ಗಾಂಧಿಧೀಜಿಯವರು ಮಹಾತ್ಮರಾಗಿದ್ದು ಹಾಗೂ ನರೇಂದ್ರರು ಸ್ವಾಮಿ ವಿವೇಕಾನಂದರಾಗಿದ್ದು ಮಹಿಳೆಯೆನ್ನುವ ಮಹಾಶಕ್ತಿಯಿಂದ ಎಂದು ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಅಭಿಪ್ರಾಯಪಟ್ಟರು.

ಕುಲಪತಿ ಡಾ| ಸ.ಚಿ. ರಮೇಶ ಅಧ್ಯಕ್ಷತೆ ವಹಿಸಿ ಮಾತನಾಡಿ, ಪುರುಷರ ಯಜಮಾನಿಕೆಯಿಂದ ಹಾಗೂ ಸ್ತ್ರೀಯರ ಅಸಹಾಯಕತೆಯಿಂದ ಚರಿತ್ರೆಯಲ್ಲಿ ಮಹಿಳೆಯರು ಕಣ್ಮರೆಯಾಗಿದ್ದಾರೆ. ಪುರುಷ ಪ್ರಧಾನ ಚರಿತ್ರೆಯು ಯುದ್ಧವನ್ನು ಪ್ರತಿಬಿಂಬಿಸಿದರೆ, ಮಹಿಳಾ ಚರಿತ್ರೆಯು ತ್ಯಾಗ ಮತ್ತು ಸೇವೆಯನ್ನು ಪ್ರತಿಬಿಂಬಿಸುವುದು. ಪುರುಷನಿಂದ ರಚಿತವಾದ ಚರಿತ್ರೆಯಲ್ಲಿ ಮಹಿಳಾ ಚರಿತ್ರೆಯನ್ನು ಗೌಣವಾಗಿಸಲಾಗಿದೆ.

ಇತಿಹಾಸದಲ್ಲಿ ಒನಕೆ ಓಬವ್ವ, ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಕೆಲವು ಮಹಿಳೆಯರನ್ನು ಮಾತ್ರ ಗುರುತಿಸಲಾಗಿದ್ದು, ಇನ್ನು ಹಲವಾರು ಮಹಿಳೆಯರು ಚರಿತ್ರೆ ಪುಟಗಳಲ್ಲಿ ದಾಖಲಾಗಿಲ್ಲ. ವರ್ತಮಾನದಲ್ಲೂ ಕೂಡ ಮಹಿಳೆಯರ ಸಾಧನೆಯನ್ನು ಚರಿತ್ರೆಯಲ್ಲಿ ದಾಖಲಿಸಲು ಮನಸ್ಸು ಮಾಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಒನಕೆ ಒಬವ್ವ ಅಧ್ಯಯನ ಪೀಠದ ಸಂಚಾಲಕಿ ಡಾ| ಶೈಲಜಾ ಇಂ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಶೋಧನ ವಿಧಾನಗಳಿಗೂ ಸಾಮಾಜಿಕ, ಆರ್ಥಿಕ ಜ್ಞಾನವಲಯದ ಅಧಿಕಾರಕ್ಕೂ ನೇರವಾದ ಸಂಬಂಧ ಇದೆ. ಸ್ತ್ರೀವಾದ ಚಳವಳಿ ಆರಂಭವಾದಾಗಿನಿಂದ ಇಲ್ಲಿಯವರೆಗೂ ಅನೇಕರು ಮಹಿಳಾ ಕೇಂದ್ರೀಕೃತವಾದಂತಹ ಅನೇಕ ಸಿದ್ಧಾಂತಗಳನ್ನು ಅಭಿವೃದ್ಧಿಪಡಿಸುತ್ತ ಬಂದಿದ್ದಾರೆ ಎಂದರು.

ಕುಲಸಚಿವ ಡಾ| ಎ. ಸುಬ್ಬಣ್ಣ ರೈ, ಪ್ರಾಧ್ಯಾಪಕ ಡಾ| ವೀರೇಶ ಬಡಿಗೇರ, ವಿವಿಧ ವಿಶ್ವವಿದ್ಯಾಲಯಗಳ ಪ್ರಬಂಧಕಾರರು, ವಿವಿಧ ನಿಕಾಯಗಳ ಡೀನರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.