![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 17, 2022, 10:49 AM IST
ವಿಜಯನಗರ: ಹುಬ್ಬಳ್ಳಿಯಲ್ಲಿ ಶನಿವಾರ ತಡರಾತ್ರಿ ನಡೆದ ಗಲಾಟೆ ಒಂದು ವ್ಯವಸ್ಥಿತ ಸಂಚು ಎಂದು ಮೇಲ್ನೋಟಕ್ಕೆ ಕಾಣುತ್ತದೆ. ಮೊದಲೇ ಕಲ್ಲು ಸಂಗ್ರಹ ಮಾಡಲಾಗಿತ್ತು ಎಂಬ ಮಾಹಿತಿಯಿದೆ. ಕೆಜಿ ಹಳ್ಳಿ ಡಿಜೆ ಹಳ್ಳಿ ಘಟನೆ ಮಾದರಿಯಲ್ಲಿಯೇ ಇದು ನಡೆದಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ರಾತ್ರಿ ಒಬ್ಬ ಯುವಕ ತನ್ನ ಮೊಬೈಲ್ ವಾಟ್ಸಪ್ ನಲ್ಲಿ ವಿವಾದಿತ ಸ್ಟೇಟಸ್ ಪೋಸ್ಟ್ ಹಾಕಿದ್ದ. ಅದರಿಂದ ಗಲಾಟೆ ಆರಂಭವಾಗಿದೆ. ಸದ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲಿದೆ. ಈಗಾಗಲೇ ಪೋಸ್ಟ್ ಹಾಕಿದ ವ್ಯಕ್ತಿ ಸೇರಿದಂತೆ ಹಲವರ ಬಂಧನವಾಗಿದೆ. ಕಾನೂನು ಕೈಗೆತ್ತಿಕೊಳ್ಳುವರನ್ನು ಬಿಡುವ ಮಾತೇ ಇಲ್ಲ..ಯಾವುದೇ ಧರ್ಮದವರಾಗಲಿ ಅವರನ್ನು ಬಿಡುವ ಮಾತೇ ಇಲ್ಲ ಎಂದರು.
ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ದಳ್ಳುರಿಗೆ ಕಾರಣವಾದ ಪೋಸ್ಟ್; ಆಸ್ಪತ್ರೆ,ಪೊಲೀಸ್, ದೇವಸ್ಥಾನಗಳೇ ಟಾರ್ಗೆಟ್!
ನಾಲ್ಕು ಮಂದಿ ಪೊಲೀಸರು ಹಾಗು ಕೆಲ ಸಿಬ್ಬಂದಿಗೆ ಗಾಯವಾಗಿದೆ. ಓರ್ವ ಪಿಎಸ್ಐಗೆ ಗಂಭೀರ ಗಾಯವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಪರಿಸ್ಥಿತಿ ತಿಳಿಯಾಗಿದೆ ಎಂದರು.
ವಿವಾದಿತ ಪೋಸ್ಟ್ ಹಾಕಿ ಬಂಧನಕ್ಕೊಳಗಾದ ವ್ಯಕ್ತಿಯನ್ನು ಠಾಣೆಯಿಂದ ಹೊರಗೆ ಕಳುಹಿಸಿ ಎಂದು ಗಲಾಟೆ ಮಾಡಿದರು. ಅಲ್ಲಿಂದ ಆರಂಭವಾದ ಗಲಾಟೆ ನಿರಂತರವಾಗಿ ನಡೆಯುತ್ತಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.