ಬೇಸಿಗೆಗೆ ಮುನ್ನವೇ ಕಲ್ಲಂಗಡಿ ಹಣ್ಣಿಗೆ ಹೆಚ್ಚಿದ ಬೇಡಿಕೆ


Team Udayavani, Feb 16, 2021, 6:23 PM IST

ಬೇಸಿಗೆಗೆ ಮುನ್ನವೇ ಕಲ್ಲಂಗಡಿ ಹಣ್ಣಿಗೆ ಹೆಚ್ಚಿದ ಬೇಡಿಕೆ

ಸಿರುಗುಪ್ಪ: ಬಿಸಿಲಿನ ಝಳಕ್ಕೆ ಜನರು ದಾಹ ತಣಿಸಿಕೊಳ್ಳಲು ಕಲ್ಲಂಗಡಿ ಹಣ್ಣಿನ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ನಗರದಲ್ಲಿ ಕಲ್ಲಂಗಡಿ ಹಣ್ಣಿಗೆ ಉತ್ತಮ ಬೇಡಿಕೆ ಬಂದಿದೆ. ಈಗಾಗಲೇ ನಗರದೆಲ್ಲೆಡೆ ಸಾಕಷ್ಟು ಕಲ್ಲಂಗಡಿ ಆಮದು ಆಗಿದ್ದು, ಅಷ್ಟೇ ಪ್ರಮಾಣದಲ್ಲಿ ಗ್ರಾಹಕರಿರುವುದು ವ್ಯಾಪಾರಿಗಳಲ್ಲಿ ಸಂತಸ ಇಮ್ಮಡಿಗೊಳಿಸಿದೆ.

ತಾಲೂಕಿನಲ್ಲಿ ಬೆಳಗ್ಗೆ ಚಳಿ ಪ್ರಮಾಣ ಹೆಚ್ಚಿದ್ದರೂ ಮಧ್ಯಾಹ್ನದ ಹೊತ್ತಿಗೆ ಬಿಸಿಲಿನ ತಾಪಮಾನ 30ರಿಂದ 32 ಡಿಗ್ರಿ ಸೆಲ್ಸಿಯಸ್‌ಗೆ ಏರಿ ಜನರು ಹೈರಾಣಾಗುತ್ತಿದ್ದಾರೆ. ಹೀಗಾಗಿ ಬೇಸಿಗೆ ಆರಂಭಕ್ಕೂ ಮುನ್ನವೇ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚಾಗಿದ್ದು, ಬಿಸಿಲಿನ ತಾಪದ ದಾಹ ತಣಿಸಲು ಜನರು ಕಲ್ಲಂಗಡಿಗೆ ಮೊರೆಯಿಟ್ಟಿದ್ದಾರೆ. ಈ ಬಾರಿ ಬೇಸಿಗೆ ಇನ್ನು ಒಂದು ತಿಂಗಳು ಮುಂಚೆ ಇರುವಾಗಲೇ ನಗರದ ಪ್ರಮುಖ ಬೀದಿಗಳಲ್ಲಿ ತಂಪು ಪಾನೀಯ ಮತ್ತು ಕಲ್ಲಂಗಡಿ ವ್ಯಾಪಾರ ಜೋರಾಗಿ ಸಾಗುತ್ತಿದೆ. ಜನವರಿ ಕೊನೆಯ ವಾರದಿಂದಲೇ ಮಧ್ಯಾಹ್ನದ ವೇಳೆಯಲ್ಲಿಉರಿಬಿಸಿಲು ಆರಂಭಗೊಂಡಿರುವುದರಿಂದ ತಂಪು ಪಾನೀಯ ಮತ್ತು ಕಲ್ಲಂಗಡಿ ವ್ಯಾಪಾರ ಜೋರಾಗಿ ನಡೆಯುತ್ತಿದೆ.

ನಗರದ ಪ್ರಮುಖ ರಸ್ತೆಗಳಲ್ಲಿ ಕಲ್ಲಂಗಡಿ ಹಣ್ಣಿನ ಅಂಗಡಿಗಳು ತೆರೆದಿವೆ. ಸೀಮಾಂಧ್ರ ಪ್ರದೇಶ ಮತ್ತು ತುಮಕೂರಿನ ಮಡಕಶಿರಸುತ್ತಮುತ್ತಲಿನಿಂದ ಕಲ್ಲಂಗಡಿ ಹಣ್ಣುಗಳುಮಾರುಕಟ್ಟೆಗೆ ಬರುತ್ತಿವೆ, ಕಲ್ಲಂಗಡಿ ಹಣ್ಣು ಒಂದು ಕೆ.ಜಿ ಲೆಕ್ಕದಲ್ಲಿ ಮಾರಾಟವಾಗುತ್ತಿದ್ದು, ಒಂದುಕೆ.ಜಿಗೆ 25ರಿಂದ 35ರ ವರೆಗೆ ಇದೆ. ಒಂದು ಪ್ಲೇಟ್‌ ಅಥವಾ ಹಣ್ಣೀನ ಒಂದು ಪೀಸ್‌ 10 ರೂ.ಕ್ಕೆ ಮಾರಾಟವಾಗುತ್ತಿದೆ. ಒಟ್ಟಾರೆ ಒಂದು ತಿಂಗಳಿಗೆ2 ರಿಂದ 3 ಲಾರಿ ಲೋಡ್‌ ಕಲ್ಲಂಗಡಿ ಹಣ್ಣುಗಳು ಮಾರಾಟ ಮಾಡುತ್ತಿರುವುದಾಗಿ ಕಲ್ಲಂಗಂಡಿ ಹಣ್ಣಿನ ವ್ಯಾಪಾರಿಗಳು ತಿಳಿಸಿದ್ದಾರೆ.

ಬೇಸಿಗೆ ದಿನಗಳಲ್ಲಿ ಉಷ್ಠಾಂಶ ಹೆಚ್ಚಿರುವುದರಿಂದ ಮನುಷ್ಯನ ದೇಹ, ದೇಹದ ನೀರಿನ ಸಮತೋಲನ ಕಾಯ್ದುಕೊಳ್ಳಬೇಕಾಗುತ್ತದೆ.ಜೊತೆಗೆ ಮನುಷ್ಯನ ದೇಹದಲ್ಲಿ ನೀರಿನ ಪ್ರಮಾಣ ಬಿಸಿಲಿನ ಝಳಕ್ಕೆ ಕಡಿಮೆಯಾಗುವುದರಿಂದನಿರ್ಜಲೀಕರಣ, ಅಜೀರ್ಣದಂತಹ ಅನಾರೋಗ್ಯಸಮಸ್ಯೆಗಳು ಉಂಟಾಗುತ್ತವೆ. ಇಂತಹ ಆರೋಗ್ಯಸಮಸ್ಯೆಗಳಿಂದ ದೂರವಿರಲು ಕಲ್ಲಂಗಡಿ ಸಹಾಯ ಮಾಡುತ್ತದೆ. ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್‌ ಸಿ ಇದ್ದು, ಮಾನವ ದೇಹಕ್ಕೆ ಹೆಚ್ಚಿನ ಪೌಷ್ಟಿಕಾಂಶಸಿಗುತ್ತದೆ. ಬಿಸಿಲಿನಲ್ಲಿ ದಾಹ ನೀಗಿಸುವ ಜೊತೆಗೆ ದೇಹದ ಆರೋಗ್ಯ ಕಾಪಾಡುವಲ್ಲಿ ಕಲ್ಲಂಗಡಿ ಹಣ್ಣು ಮುಖ್ಯವಾಗಿದೆ.

ಎಳೆನೀರಿನ ಮಾರಾಟವು ಜೋರಾಗಿನಡೆದಿದ್ದು, ರೂ.35ಕ್ಕೆ ಒಂದು ಎಳೆನೀರು ಮಾರಾಟವಾಗುತ್ತಿದೆ. ಪ್ರತಿದಿನ ನಗರದಲ್ಲಿರುವಎಳೆನೀರು ವ್ಯಾಪಾರಿಗಳು ಸುಮಾರು 500ರಿಂದ 700ಕ್ಕೂ ಹೆಚ್ಚು ಎಳೆನೀರು ಮಾರಾಟಮಾಡುತ್ತಿದ್ಧಾರೆ. ರಾಸಾಯನಿಕ ಮಿಶ್ರಿತ ತಂಪುಪಾನಿಯ ಕುಡಿದು ಆರೋಗ್ಯ ಹಾಳುಮಾಡಿಕೊಳ್ಳುವ ಬದಲು ರೈತರ ನೈಸರ್ಗಿಕ ಉತ್ಪನ್ನಗಳನ್ನು ಸೇವಿಸಿ, ರೈತರಿಗೂ ಪ್ರೋತ್ಸಾಹ ನೀಡಲು ಬೇಸಿಗೆ ಒಳ್ಳೆಯ ಸಮಯವಾಗಿದೆ.

ದಾಹ ತಣಿಸಲು ಕಲ್ಲಂಗಡಿ ಅಷ್ಟೇ ಅಲ್ಲದೇ ಎಳೆನೀರು, ಕಬ್ಬಿನ ಹಾಲು, ನಿಂಬೆರಸ, ಹಣ್ಣಿನ ರಸಕ್ಕೂ ಬೇಡಿಕೆ ಹೆಚ್ಚಾಗಿದೆ. ಒಂದು ಎಳೆನೀರು 35 ರೂ., ಒಂದು ಲೋಟ ಕಬ್ಬಿನ ಹಾಲಿಗೆ 10 ರೂ., ನಿಂಬೆ ಷರಬತ್ತು ಮತ್ತು ಸೋಡಾಕ್ಕೆ 10 ರೂ.ಬೆಲೆ ಇದೆ. ಬಿಸಿಲು ಹೆಚ್ಚಿದಂತೆ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚು, ಮಾರ್ಚ್‌, ಏಪ್ರಿಲ್‌ನಲ್ಲಿ ಮಾರಾಟ ಜೋರಾಗಿರುತ್ತದೆ. ಈಗ ಇನ್ನೂ ಪೂರ್ಣ ಪ್ರಮಾಣದ ಬೇಸಿಗೆ ಆರಂಭವಾಗಿಲ್ಲ, ಆದರೆ ವ್ಯಾಪಾರ ಜೋರಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಲಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

 

-ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.