ಕುಂಬಾರ ಸಮುದಾಯವನ್ನು ಸರಕಾರ ಕಡೆಗಣಿಸುತ್ತಿರುವುದು ಸರಿಯಲ್ಲ
Team Udayavani, Mar 1, 2022, 4:23 PM IST
ಕುರುಗೋಡು: ರಾಜ್ಯದಲ್ಲಿ ಕುಂಬಾರ ಸಮುದಾಯವು ರಾಜಕೀಯ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದೆ’ಎಂದು ಸಿರಿಗೇರಿಯ ಕುಂಬಾರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹೇಳಿದರು.
ಕುಂಬಾರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಗ್ರಾಮದ ಮುಖಂಡರು ಸಿರಿಗೇರಿಯ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ 502ನೇ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕುಂಬಾರ ಸಮುದಾಯದಿಂದ ಶಾಸಕರು, ಸಂಸದರು, ವಿಧಾನ ಪರಿಷತ್, ರಾಜ್ಯಸಭಾ ಸದಸ್ಯರು ಇಲ್ಲ. ಹೀಗೆ ಅತ್ಯಂತ ಹಿಂದುಳಿದ ಸಮುದಾಯವನ್ನು ಸರ್ಕಾರಗಳು ನಿರ್ಲಕ್ಷಿಸುತ್ತಿವೆ. ಯಾವುದೇ ಪಕ್ಷವು ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ನೀಡಿಲ್ಲ. ರಾಜಕೀಯ ಅಧಿಕಾರ ದೊರೆತರೆ ಮಾತ್ರ ಸಣ್ಣ ಪುಟ್ಟ ಸಮುದಾಯಗಳು ಬೆಳವಣಿಗೆಯಾಗಲು ಸಾಧ್ಯ ಎಂದರು.
ಇದನ್ನೂ ಓದಿ:ಅಂಕೋಲಾ: ರೆಸ್ಟೋರೆಂಟ್ ಗೆ ನುಗ್ಗಿ ಮುಸುಕುಧಾರಿಗಳಿಂದ ಲಕ್ಷಾಂತರ ನಗದು,ಮದ್ಯದ ಬಾಟಲಿ ಕಳ್ಳತನ
ಸರ್ಕಾರದಿಂದ ಸರ್ವಜ್ಞ ದಿನಾಚರಣೆಯ ಆಚರಣೆ, ಸರ್ವಜ್ಞ ಪ್ರಾಧಿಕಾರ ರಚನೆ ಸೇರಿದಂತೆ ಕುಂಬಾರ ಸಂಘವು ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ. ಸರ್ಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಕುಂಬಾರರು ಸೇರಿದಂತೆ ಇತರೆ ಹಲವಾರು ಸೌಲಭ್ಯ ವಂಚಿತ, ನಿರ್ಲಕ್ಷಿತ ಸಮುದಾಯಗಳಿಗೆ ಸರ್ಕಾರ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಾರಂಭದಲ್ಲಿ ಕವಿ ಸರ್ವಜ್ಞ ಭಾವಚಿತ್ರಕ್ಕೆ ಪುಷ್ಪ ಹೂ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಂಬಾರು ಸಮುದಾಯದ ಯುವ ಮುಖಂಡರು ಹಾಗೂ ಗ್ರಾಮದ ವಿವಿಧ ಸಮುದಾಯದ ಮುಖಂಡರು, ಸಂಘಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ
Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು
Bellary; ಜೈಲಿನಲ್ಲಿಂದು ದರ್ಶನ್ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು
Darshan ಭೇಟಿಗೆ ಮಾಹಿತಿ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು
Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.