Kanahosahalli: ಮಹಿಳೆಯ ಹತ್ಯೆ ಪ್ರಕರಣ… 48 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು
Team Udayavani, Sep 2, 2024, 11:06 AM IST
ವಿಜಯನಗರ ( ಕಾನಾಹೊಸಹಳ್ಳಿ) : ನಿರ್ಜನ ಪ್ರದೇಶದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ಪ್ರಕರಣವನ್ನು 48 ಗಂಟೆಯಲ್ಲಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ಕಾನಾಹೊಸಹಳ್ಳಿ ಸಮೀಪದ ತಿಪ್ಪೆಹಳ್ಳಿ ಗ್ರಾಮದಲ್ಲಿ ಕಳೆದ ಶನಿವಾರ ಚಿತ್ರದುರ್ಗ ವಿಜಯನಗರ ಗಡಿ ತಿಪ್ಪೆಹಳ್ಳಿಯ ಸಮೀಪ ಅಬ್ಬೇನಹಳ್ಳಿ ಯ ನೇತ್ರಾವತಿ ಎನ್ನುವ ಮಹಿಳೆಯನ್ನು ಅತ್ಯಾಚಾವೆಸಗಿ ಹತ್ಯೆ ಮಾಡಲಾಗಿತ್ತು ಈ ಘಟನೆಯಿಂದ ಗಡಿಗ್ರಾಮಗಧ ಜನರು ಬೆಚ್ಚಿಬಿದ್ದಿದ್ದರು ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಭೇಟಿ ನೀಡಿದ್ದರು ಹತ್ಯೆಯಾದ ಮಹಿಳೆಯ ಸಹೋದರಿ ನೀಡಿದ ದೂರಿನಂತೆ ಕಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಅಷ್ಟರಲ್ಲಿ ಪ್ರಕರಣ ಭೇದಿಸಲು ವಿಶೇಷ ತಂಡ ರಚನೆ ಮಾಡಿದ ಪೊಲೀಸರು ಕೇವಲ 48 ಗಂಟೆಯ ಒಳಗಾಗಿ ಕೃತ್ಯ ಎಸಗಿದ ಕಾಟ್ರಳ್ಳಿ ಓಬಣ್ಣ (30) ಎನ್ನುವ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ,
ಆರೋಪಿ ಕಾಟ್ರಳ್ಳಿ ಓಬಣ್ಣ ಕಾತ್ರಿಕೆಹಟ್ಟಿ ಗ್ರಾಮದವನಾಗಿದ್ದು, ಪ್ರಕರಣ ಭೇಧಿಸುವ ತಂಡದಲ್ಲಿ ಡಿವೈಎಸ್ ಪಿ ಮಲ್ಲೇಶಪ್ಪ ಮಲ್ಲಾಪುರ, ಸಿಪಿಐ ವೆಂಕಟಸ್ವಾಮಿ, ಪಿಎಸೈ ಸಿದ್ದರಾಮ ಬಿದರಾಣಿ, ಸಿಬ್ಬಂದಿಗಳಾದ,ಕೃಷ್ಣಪ್ಪ,ಕೊಟ್ರೇಶ್ ಅಂಗಡಿ,ವಿಜಯಕುಮಾರ್, ಮಂಜುನಾಥ,ಅಂಜಿನಮೂರ್ತಿ,ಕಲ್ಲೇಶ್ ಪೂಜಾರ್, ವಿಜಯಕುಮಾರ್, ಎನ್ ಎಂ ಸ್ವಾಮಿ, ಸಂದೀಪ್,ಸಿದ್ದಲಿಂಗಪ್ಪ, ಗೌಡ್ರು ರವಿಚಂದ್ರ, ಕೃಷ್ಣ ನಾಯ್ಕ, ತಂಡಕ್ಕೆ ವಿಜಯನಗರ ಎಸ್ ಪಿ ಹರಿಬಾಬು ಅವರು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.
ಇದನ್ನೂ ಓದಿ: Nagesh Asundi: ಬಿಜೆಪಿ ಸದಸ್ಯನ ಅಪಹರಣಕ್ಕೆ ಬಳಸಿದ ಕಾರು ಬೆಂಗಳೂರಿನ ರೆಸಾರ್ಟಲ್ಲಿ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.