
ಇಬ್ಬರಿಗೆ ಸೋಂಕು: ಬೆಚ್ಚಿಬಿದ್ದ ಕುರುಗೋಡು ಜನ
Team Udayavani, Jun 28, 2020, 2:29 PM IST

ಕುರುಗೋಡು: ಚಾನಾಳ್ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತು.
ಕುರುಗೋಡು: ಸಮೀಪದ ಚಾನಾಳ್ ಗ್ರಾಮದ 58 ವರ್ಷದ ವ್ಯಕ್ತಿಗೆ ಹಾಗೂ ಸೋಮಸಮುದ್ರ ಗ್ರಾಮದ 45 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕು ಇರುವುದು ಶನಿವಾರ ದೃಢಪಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಚಾನಾಳ್ ಗ್ರಾಮದ ವ್ಯಕ್ತಿ ತನ್ನ ಕುಟುಂಬಸ್ಥರೊಂದಿಗೆ ತಲಮಾಮಡಿ ಎಂಬ ಗ್ರಾಮಕ್ಕೆ ಮದುವೆಗೆ ಹೋಗಿ ಬರುವಾಗ ಅಪಘಾತಕ್ಕೆ ಈಡಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಅಲ್ಲಿ ರಕ್ತ ಪರೀಕ್ಷೆ ಮಾಡಿದಾಗ ಕೋವಿಡ್ ಸೋಂಕು ಇರುವುದು ಕಂಡುಬಂದಿದೆ. ಇನ್ನೂ 6 ಜನ ಕುಟುಂಬಸ್ಥರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಸ್ಥಳಕ್ಕೆ ಪಿಡಿಒ ರುದ್ರಪ್ಪ, ಗ್ರಾಮಲೆಕ್ಕಾಧಿಕಾರಿ ಮಹೆಬೂಬ್ಬಾಷಾ, ಗ್ರಾಪಂ ಸಿಬ್ಬಂದಿ ತಿಪ್ಪಮ್ಮ, ಮಲ್ಲಿಕಾರ್ಜುನ, ಮಲ್ಲೇಪ್ಪ, ಅಳ್ಳಪ್ಪ, ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಗ್ರಾಮವನ್ನು ಕಂಟೇನ್ಮೆಂಟ್ ಪ್ರದೇಶವನ್ನಾಗಿಸಿ ಬ್ಯಾರಿಕೇಡ್ ಅಳವಡಿಸಿ ಸ್ಯಾನಿಟೈಸ್ ಮಾಡಿಸಿದ್ದಾರೆ.
ಸೋಮಸಮುದ್ರ ಗ್ರಾಮದ 45 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕು ಇರುವುದು ದೃಢವಾಗಿದ್ದು, ಸುಮಾರು ದಿನಗಳಿಂದ ದಮ್ಮು, ಕೆಮ್ಮುನಿಂದ ಆನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ಗೆ ಹೋದಾಗ ಕೊರೊನಾ ಸೋಂಕು ಇರುವುದು ಕಂಡುಬಂದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.